<p><strong>ಮುಳಬಾಗಿಲು</strong>: ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ವಸತಿಗೃಹದ ಕಟ್ಟದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆ ತಲುಪಿದೆ. ಹಿಂದೆ ಆರೋಗ್ಯ ಸಿಬ್ಬಂದಿಗೆ ನೆಲೆಯಾಗಿದ್ದ ಕಟ್ಟಡ ಇಂದು ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ. ಇಂತಹ ಕಟ್ಟಡದಲ್ಲೇ ಆಸ್ಪತ್ರೆ ಸಿಬ್ಬಂದಿ ಇದ್ದು, ಆತಂಕ ಮನೆಮಾಡಿದೆ.</p>.<p>ಹಲವಾರು ವರ್ಷಗಳ ಕಾಲ ವೈದ್ಯಕೀಯ ಸಿಬ್ಬಂದಿ ಈ ವಸತಿ ಗೃಹಗಳಲ್ಲಿ ವಾಸವಾಗಿ ಸಾರ್ವಜನಿಕರಿಗೆ ಹಗಲಿರುಳು ಸೇವೆ ಸಲ್ಲಿಸುತ್ತಿದ್ದರು. ಆದರೆ ಇದೀಗ, ನಗರದ ಸಾರ್ವಜನಿಕ ಆಸ್ಪತ್ರೆಯ ವಸತಿ ಗೃಹಗಳುನಿರ್ವಹಣೆಯ ಕೊರತೆಯ ಕಾರಣದಿಂದಾಗಿ ಪಾಳು ಬಿದ್ದಿವೆ. ಈ ಕಟ್ಟಡಗಳು ಇದೀಗ ಅನೈತಿಕ ಚಟುವಟಿಕೆಗಳಿಗೆ ನೆಲಯಾಗಿವೆ.</p>.<p>‘ಈ ಕಟ್ಟಡಕ್ಕೆ ಮರುಜೀವ ನೀಡಬೇಕು’ ಎಂದು ಅಕ್ಕಪಕ್ಕದ ನಾಗರಿಕರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಅಹವಾಲು ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ.</p>.<p class="Subhead"><strong>ಅನುಮೋದನೆ ಸಿಕ್ಕಿಲ್ಲ: </strong>ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು ಕೆಡವಿ ನೂತನ ಕಟ್ಟಡ ಮತ್ತು ಆಸ್ಪತ್ರೆಯಲ್ಲಿ ಮೂಲಸೌಲಭ್ಯ ಒದಗಿಸಲು ಆರೋಗ್ಯ ರಕ್ಷಾ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಶಾಸಕ ಎಚ್.ನಾಗೇಶ್ ಸರ್ಕಾರಕ್ಕೆ ₹8.50 ಕೋಟಿ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಿದ್ದು ಇನ್ನೂ ಅನುಮೋದನೆ ಸಿಕ್ಕಿಲ್ಲ.</p>.<p class="Subhead"><strong>ಸ್ವಚ್ಛತೆ ಮರೀಚಿಕೆ:</strong> ಶಿಥಿಲಾವಸ್ಥೆಯಲ್ಲಿರುವ ವಸತಿ ಗೃಹಗಳಲ್ಲೇ ಆಸ್ಪತ್ರೆ ಸಿಬ್ಬಂದಿ ಇದ್ದಾರೆ. ವಸತಿ ಗೃಹಗಳ ಸುತ್ತಮುತ್ತ ಗಿಡಗಂಟಿ ಬೆಳೆದಿದೆ. ಆಸ್ಪತ್ರೆಯ ಹಿಂಭಾಗದಲ್ಲಿರುವ ಡಯಾಲಿಸಿಸ್ ಕೇಂದ್ರದಿಂದ ಬರುವ ತ್ಯಾಜ್ಯದಿಂದ ನೀರು ಸೋರಿಕೆಯಾಗಿ ಅನೈರ್ಮಲ್ಯಕ್ಕೆ ಕಾರಣವಾಗಿದೆ. ಸಮಸ್ಯೆ ಅರಿತು ಜಿಲ್ಲಾಡಳಿತ ಮತ್ತು ಸರ್ಕಾರ ಕಾಯಕಲ್ಪಕ್ಕೆ ಮುಂದಾಗಬೇಕು.</p>.<p>ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ. ಎಸ್.ಭಾರತಿ ಮಾತನಾಡಿ, ‘ಆಸ್ಪತ್ರೆ ವಸತಿ ಗೃಹ ಶಿಥಿಲವಾಗಿದ್ದು ಹೊಸದಾಗಿ ಕಟ್ಟಡ ಕಟ್ಟಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಡಯಾಲಿಸಿಸ್ ಕೇಂದ್ರದಿಂದ ಬರುತ್ತಿದ್ದ ತ್ಯಾಜ್ಯ ನೀರು ಸೋರಿಕೆಯಾಗುತ್ತಿದ್ದು ಸರಿಪಡಿಸುವಂತೆ ಸಂಬಂಧಿಸಿದ ಡಯಾಲಿಸಿಸ್ ಕೇಂದ್ರದ ಮುಖ್ಯಸ್ಥರಿಗೆ ಸೂಚಿಸಲಾಗಿದೆ’ ಎಂದರು.</p>.<p>ಶಾಸಕ ಎಚ್.ನಾಗೇಶ್ಮಾತನಾಡಿ, ‘ಆರೋಗ್ಯ ರಕ್ಷಾಸಮಿತಿ ಹಿಂದಿನ ಸಭೆಯಲ್ಲೇ ಆಸ್ಪತ್ರೆ ಮತ್ತು ವಸತಿಗೃಹ ನಿರ್ಮಾಣ ಮತ್ತು ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಕೊರೊನಾ ಕಾರಣ ಅನುದಾನ ಬಿಡುಗಡೆಯಾಗಿಲ್ಲ. ಶೀಘ್ರ ಸರ್ಕಾರದ ಗಮನಕ್ಕೆ ತಂದು ಬಿಡುಗಡೆ ಮಾಡಿಸಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ವಸತಿಗೃಹದ ಕಟ್ಟದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆ ತಲುಪಿದೆ. ಹಿಂದೆ ಆರೋಗ್ಯ ಸಿಬ್ಬಂದಿಗೆ ನೆಲೆಯಾಗಿದ್ದ ಕಟ್ಟಡ ಇಂದು ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ. ಇಂತಹ ಕಟ್ಟಡದಲ್ಲೇ ಆಸ್ಪತ್ರೆ ಸಿಬ್ಬಂದಿ ಇದ್ದು, ಆತಂಕ ಮನೆಮಾಡಿದೆ.</p>.<p>ಹಲವಾರು ವರ್ಷಗಳ ಕಾಲ ವೈದ್ಯಕೀಯ ಸಿಬ್ಬಂದಿ ಈ ವಸತಿ ಗೃಹಗಳಲ್ಲಿ ವಾಸವಾಗಿ ಸಾರ್ವಜನಿಕರಿಗೆ ಹಗಲಿರುಳು ಸೇವೆ ಸಲ್ಲಿಸುತ್ತಿದ್ದರು. ಆದರೆ ಇದೀಗ, ನಗರದ ಸಾರ್ವಜನಿಕ ಆಸ್ಪತ್ರೆಯ ವಸತಿ ಗೃಹಗಳುನಿರ್ವಹಣೆಯ ಕೊರತೆಯ ಕಾರಣದಿಂದಾಗಿ ಪಾಳು ಬಿದ್ದಿವೆ. ಈ ಕಟ್ಟಡಗಳು ಇದೀಗ ಅನೈತಿಕ ಚಟುವಟಿಕೆಗಳಿಗೆ ನೆಲಯಾಗಿವೆ.</p>.<p>‘ಈ ಕಟ್ಟಡಕ್ಕೆ ಮರುಜೀವ ನೀಡಬೇಕು’ ಎಂದು ಅಕ್ಕಪಕ್ಕದ ನಾಗರಿಕರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಅಹವಾಲು ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ.</p>.<p class="Subhead"><strong>ಅನುಮೋದನೆ ಸಿಕ್ಕಿಲ್ಲ: </strong>ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು ಕೆಡವಿ ನೂತನ ಕಟ್ಟಡ ಮತ್ತು ಆಸ್ಪತ್ರೆಯಲ್ಲಿ ಮೂಲಸೌಲಭ್ಯ ಒದಗಿಸಲು ಆರೋಗ್ಯ ರಕ್ಷಾ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಶಾಸಕ ಎಚ್.ನಾಗೇಶ್ ಸರ್ಕಾರಕ್ಕೆ ₹8.50 ಕೋಟಿ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಿದ್ದು ಇನ್ನೂ ಅನುಮೋದನೆ ಸಿಕ್ಕಿಲ್ಲ.</p>.<p class="Subhead"><strong>ಸ್ವಚ್ಛತೆ ಮರೀಚಿಕೆ:</strong> ಶಿಥಿಲಾವಸ್ಥೆಯಲ್ಲಿರುವ ವಸತಿ ಗೃಹಗಳಲ್ಲೇ ಆಸ್ಪತ್ರೆ ಸಿಬ್ಬಂದಿ ಇದ್ದಾರೆ. ವಸತಿ ಗೃಹಗಳ ಸುತ್ತಮುತ್ತ ಗಿಡಗಂಟಿ ಬೆಳೆದಿದೆ. ಆಸ್ಪತ್ರೆಯ ಹಿಂಭಾಗದಲ್ಲಿರುವ ಡಯಾಲಿಸಿಸ್ ಕೇಂದ್ರದಿಂದ ಬರುವ ತ್ಯಾಜ್ಯದಿಂದ ನೀರು ಸೋರಿಕೆಯಾಗಿ ಅನೈರ್ಮಲ್ಯಕ್ಕೆ ಕಾರಣವಾಗಿದೆ. ಸಮಸ್ಯೆ ಅರಿತು ಜಿಲ್ಲಾಡಳಿತ ಮತ್ತು ಸರ್ಕಾರ ಕಾಯಕಲ್ಪಕ್ಕೆ ಮುಂದಾಗಬೇಕು.</p>.<p>ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ. ಎಸ್.ಭಾರತಿ ಮಾತನಾಡಿ, ‘ಆಸ್ಪತ್ರೆ ವಸತಿ ಗೃಹ ಶಿಥಿಲವಾಗಿದ್ದು ಹೊಸದಾಗಿ ಕಟ್ಟಡ ಕಟ್ಟಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಡಯಾಲಿಸಿಸ್ ಕೇಂದ್ರದಿಂದ ಬರುತ್ತಿದ್ದ ತ್ಯಾಜ್ಯ ನೀರು ಸೋರಿಕೆಯಾಗುತ್ತಿದ್ದು ಸರಿಪಡಿಸುವಂತೆ ಸಂಬಂಧಿಸಿದ ಡಯಾಲಿಸಿಸ್ ಕೇಂದ್ರದ ಮುಖ್ಯಸ್ಥರಿಗೆ ಸೂಚಿಸಲಾಗಿದೆ’ ಎಂದರು.</p>.<p>ಶಾಸಕ ಎಚ್.ನಾಗೇಶ್ಮಾತನಾಡಿ, ‘ಆರೋಗ್ಯ ರಕ್ಷಾಸಮಿತಿ ಹಿಂದಿನ ಸಭೆಯಲ್ಲೇ ಆಸ್ಪತ್ರೆ ಮತ್ತು ವಸತಿಗೃಹ ನಿರ್ಮಾಣ ಮತ್ತು ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಕೊರೊನಾ ಕಾರಣ ಅನುದಾನ ಬಿಡುಗಡೆಯಾಗಿಲ್ಲ. ಶೀಘ್ರ ಸರ್ಕಾರದ ಗಮನಕ್ಕೆ ತಂದು ಬಿಡುಗಡೆ ಮಾಡಿಸಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>