ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಮತದಾರರು ಹೆಚ್ಚಿರುವ ಈ ಕ್ಷೇತ್ರವೂ ‘ಅಹಿಂದ’ ನಾಯಕ ಎನಿಸಿಕೊಂಡಿರುವ ಅವರಿಗೆ ಹೇಳಿ ಮಾಡಿಸಿದಂತಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ಭಾನುವಾರ ದೇಗುಲ, ಚರ್ಚ್, ಮಸೀದಿಗೆ ಭೇಟಿ ನೀಡಿ, ಮಹಾನ್ ವ್ಯಕ್ತಿಗಳ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಸಮುದಾಯಗಳನ್ನು ಮೆಚ್ಚಿಸುವ ಪ್ರಯತ್ನ ನಡೆಸಿದರು. ಒಕ್ಕಲಿಗರನ್ನು ಸೆಳೆಯಲು ಸೀತಿ ಬೆಟ್ಟದ ಬೈರವೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿ, ಮಾಜಿ ಸಚಿವ ಸಿ.ಬೈರೇಗೌಡರ ಪ್ರತಿಮೆಗೆ ನಮಿಸಿದರು.