<p><strong>ಕೋಲಾರ</strong>: ಮಾಜಿ ಸಚಿವ ಸಿ.ಬೈರೇಗೌಡ ಅವರ 12ನೇ ವರ್ಷದ ಸ್ಮರಣಾರ್ಥ ತಾಲ್ಲೂಕಿನ ನರಸಾಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಎಚ್ಪಿವಿ ಲಸಿಕೆಯನ್ನು ಮಂಗಳವಾರ ಉಚಿತವಾಗಿ ನೀಡಲಾಯಿತು.</p><p>ಬೈರೇಗೌಡ ಅವರ ಕುಟುಂಬ ಮತ್ತು ಬೆಳ್ಳೂರು ಕೃಷ್ಣಮಾಚಾರ್ ಹಾಗೂ ಶೇಷಮ್ಮ ಸ್ಮಾರಕ ನಿಧಿ ಟ್ರಸ್ಟ್ನಿಂದ ಈ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ನಡೆದ ಕಾರ್ಯಕ್ರಮದಲ್ಲಿ 9ರಿಂದ 14 ವರ್ಷದೊಳಗಿನ ಸುಮಾರು 500 ಹೆಣ್ಣು ಮಕ್ಕಳು ಈ ಸೌಲಭ್ಯ ಪಡೆದರು.</p><p>‘ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ ಪ್ರಕಾರ ಜಾಗತಿಕವಾಗಿ 6 ಲಕ್ಷ ಹೆಣ್ಣು ಮಕ್ಕಳಲ್ಲಿ ಈ ಸೋಂಕು ಇರುವ ಪ್ರಕರಣಗಳು ವರದಿಯಾಗಿವೆ. ಮಾರುಕಟ್ಟೆಯಲ್ಲಿ ಈ ಒಂದು ಲಸಿಕೆ ದರ ₹ 10 ಸಾವಿರಕ್ಕೂ ಅಧಿಕ. ಹೀಗಾಗಿ, ಅನೇಕ ಹೆಣ್ಣು ಮಕ್ಕಳು ಈ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸುವುದು ಹಾಗೂ ಹೆಣ್ಣು ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಮಾಜಿ ಸಚಿವ ಸಿ.ಬೈರೇಗೌಡ ಅವರ 12ನೇ ವರ್ಷದ ಸ್ಮರಣಾರ್ಥ ತಾಲ್ಲೂಕಿನ ನರಸಾಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಎಚ್ಪಿವಿ ಲಸಿಕೆಯನ್ನು ಮಂಗಳವಾರ ಉಚಿತವಾಗಿ ನೀಡಲಾಯಿತು.</p><p>ಬೈರೇಗೌಡ ಅವರ ಕುಟುಂಬ ಮತ್ತು ಬೆಳ್ಳೂರು ಕೃಷ್ಣಮಾಚಾರ್ ಹಾಗೂ ಶೇಷಮ್ಮ ಸ್ಮಾರಕ ನಿಧಿ ಟ್ರಸ್ಟ್ನಿಂದ ಈ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ನಡೆದ ಕಾರ್ಯಕ್ರಮದಲ್ಲಿ 9ರಿಂದ 14 ವರ್ಷದೊಳಗಿನ ಸುಮಾರು 500 ಹೆಣ್ಣು ಮಕ್ಕಳು ಈ ಸೌಲಭ್ಯ ಪಡೆದರು.</p><p>‘ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ ಪ್ರಕಾರ ಜಾಗತಿಕವಾಗಿ 6 ಲಕ್ಷ ಹೆಣ್ಣು ಮಕ್ಕಳಲ್ಲಿ ಈ ಸೋಂಕು ಇರುವ ಪ್ರಕರಣಗಳು ವರದಿಯಾಗಿವೆ. ಮಾರುಕಟ್ಟೆಯಲ್ಲಿ ಈ ಒಂದು ಲಸಿಕೆ ದರ ₹ 10 ಸಾವಿರಕ್ಕೂ ಅಧಿಕ. ಹೀಗಾಗಿ, ಅನೇಕ ಹೆಣ್ಣು ಮಕ್ಕಳು ಈ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸುವುದು ಹಾಗೂ ಹೆಣ್ಣು ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>