<p><strong>ಮಾಲೂರು: </strong>ಪ್ರಸ್ತುತ ಸಮಾಜದಲ್ಲಿ ತಂತ್ರಜ್ಞಾನ ಉನ್ನತಮಟ್ಟದಲ್ಲಿದ್ದರೂ ಅನರಕ್ಷತೆ, ಅಜ್ಞಾನ ಕಾಡುತ್ತಿರುವುದು ಪ್ರತಿಯೊಬ್ಬರೂ ತಲೆತಗ್ಗಿಸುವ ಸಂಗತಿಯಾಗಿದೆ ಎಂದು ಜಿಲ್ಲಾ ಸಾಕ್ಷರತಾ ಸಂಯೋಜಕ ಡಿ.ಆರ್. ರಾಜಪ್ಪ ತಿಳಿಸಿದರು.</p>.<p>ಪಟ್ಟಣದ ಸಾಮರ್ಥ್ಯ ಸೌಧದ ಸಭಾಂಗಣದಲ್ಲಿ ಗುರುವಾರ ನಡೆದ ಕೊಳಚೆ ಮತ್ತು ನಗರದ ಸಾಕ್ಷರತಾ ಬೋಧಕರ 2ನೇ ಹಂತದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೇಶದಲ್ಲಿ ಕೈಗಾರಿಕೆ ಮತ್ತು ತಂತ್ರಜ್ಞಾನ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಮಾನವ ಇಡೀ ವಿಶ್ವದಲ್ಲಿ ನಡೆಯುವ ವಿದ್ಯಮಾನಗಳನ್ನು ತನ್ನ ಅಂಗೈಯಲ್ಲಿ ನೋಡುವ ಕಾಲಘಟ್ಟದಲ್ಲಿ ಅನರಕ್ಷತೆ, ಅಜ್ಞಾನ ಕಾಣುತ್ತಿದೆ ಎಂದು ವಿಷಾದಿಸಿದರು.</p>.<p>ಸ್ವಯಂಸೇವಕರು ತರಬೇತಿ ನೀಡುತ್ತಿದ್ದು, ಆಯಾ ಭಾಗದ ಪುರಸಭಾ ಸದಸ್ಯರು ಸ್ವಯಂಸೇವಾ ಸಂಸ್ಥೆಗಳ ಮುಖಂಡರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ಪುರಸಭೆ ಸದಸ್ಯ ಮಂಜುನಾಥ್, ಸುಮಿತ್ರಾ, ಶ್ರೀಸಾಯಿ ಕೃಪಾ ಕ್ಷೇಮಾಭಿವೃದ್ಧಿ ಫೌಂಡೇಶನ್ ಸಂಸ್ಥೆಯ ಭಾಗ್ಯಮ್ಮ, ಸಂಪನ್ಮೂಲ ವ್ಯಕ್ತಿ ಕೃಷ್ಣಪ್ಪ, ಸಂಯೋಜಕ ವೆಂಕಟಸ್ವಾಮಿ, ಪದ್ಮಾ, ಅನಿತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು: </strong>ಪ್ರಸ್ತುತ ಸಮಾಜದಲ್ಲಿ ತಂತ್ರಜ್ಞಾನ ಉನ್ನತಮಟ್ಟದಲ್ಲಿದ್ದರೂ ಅನರಕ್ಷತೆ, ಅಜ್ಞಾನ ಕಾಡುತ್ತಿರುವುದು ಪ್ರತಿಯೊಬ್ಬರೂ ತಲೆತಗ್ಗಿಸುವ ಸಂಗತಿಯಾಗಿದೆ ಎಂದು ಜಿಲ್ಲಾ ಸಾಕ್ಷರತಾ ಸಂಯೋಜಕ ಡಿ.ಆರ್. ರಾಜಪ್ಪ ತಿಳಿಸಿದರು.</p>.<p>ಪಟ್ಟಣದ ಸಾಮರ್ಥ್ಯ ಸೌಧದ ಸಭಾಂಗಣದಲ್ಲಿ ಗುರುವಾರ ನಡೆದ ಕೊಳಚೆ ಮತ್ತು ನಗರದ ಸಾಕ್ಷರತಾ ಬೋಧಕರ 2ನೇ ಹಂತದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೇಶದಲ್ಲಿ ಕೈಗಾರಿಕೆ ಮತ್ತು ತಂತ್ರಜ್ಞಾನ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಮಾನವ ಇಡೀ ವಿಶ್ವದಲ್ಲಿ ನಡೆಯುವ ವಿದ್ಯಮಾನಗಳನ್ನು ತನ್ನ ಅಂಗೈಯಲ್ಲಿ ನೋಡುವ ಕಾಲಘಟ್ಟದಲ್ಲಿ ಅನರಕ್ಷತೆ, ಅಜ್ಞಾನ ಕಾಣುತ್ತಿದೆ ಎಂದು ವಿಷಾದಿಸಿದರು.</p>.<p>ಸ್ವಯಂಸೇವಕರು ತರಬೇತಿ ನೀಡುತ್ತಿದ್ದು, ಆಯಾ ಭಾಗದ ಪುರಸಭಾ ಸದಸ್ಯರು ಸ್ವಯಂಸೇವಾ ಸಂಸ್ಥೆಗಳ ಮುಖಂಡರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ಪುರಸಭೆ ಸದಸ್ಯ ಮಂಜುನಾಥ್, ಸುಮಿತ್ರಾ, ಶ್ರೀಸಾಯಿ ಕೃಪಾ ಕ್ಷೇಮಾಭಿವೃದ್ಧಿ ಫೌಂಡೇಶನ್ ಸಂಸ್ಥೆಯ ಭಾಗ್ಯಮ್ಮ, ಸಂಪನ್ಮೂಲ ವ್ಯಕ್ತಿ ಕೃಷ್ಣಪ್ಪ, ಸಂಯೋಜಕ ವೆಂಕಟಸ್ವಾಮಿ, ಪದ್ಮಾ, ಅನಿತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>