<p><strong>ಕೋಲಾರ:</strong> ‘ಯುವಕರ ಗುರಿ ಸಾಧನೆಗೆ ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳು ಸ್ಪೂರ್ತಿ’ ಎಂದು ಪಿಯು ಕನ್ನಡ ಉಪನ್ಯಾಸಕರ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಜಿ.ನಾಗರಾಜ್ ಅಭಿಪ್ರಾಯಪಟ್ಟರು.</p>.<p>ನಗರದ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.</p>.<p>‘ಆಧುನಿಕ ಯುಗದಲ್ಲಿ ಯುವಕರು ಮೌಢ್ಯ ಮತ್ತು ದೌರ್ಬಲ್ಯಗಳನ್ನು ಕಿತ್ತೊಗೆದು ಜ್ಞಾನದ ಮೂಲಕ ರಾಷ್ಟ್ರೀಯ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ದೇಶದ ಸತ್ಪ್ರಜೆಗಳಾಗಬಹುದು. ಸ್ವಾಮಿ ವಿವೇಕಾನಂದರು ಹಿಂದೂ ಧರ್ಮ ಮತ್ತು ಸಂಸ್ಕೃತಿ ಎಂಬ ನಂದಾದೀಪವನ್ನು ಜಗತ್ತಿನಾದ್ಯಂತ ಬೆಳಗಿಸಿದ ದೃವತಾರೆ’ ಎಂದರು.</p>.<p>‘ವಿವೇಕನಂದರು ಚಿಕ್ಕ ವಯಸ್ಸಿನಲ್ಲಿ ದೇಶದ ಸಮಸ್ಯೆಯನ್ನು ಅರ್ಥೈಸಿಕೊಳ್ಳಲು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಾದಯಾತ್ರೆ ಮಾಡಿದರು. ಧರ್ಮ ಮತ್ತು ವೈಚಾರಿಕತೆಯ ಬಗ್ಗೆ ಯುವಕರಿಗೆ ಅರಿವು ಮೂಡಿಸಿದರು’ ಎಂದು ಹೇಳಿದರು.</p>.<p>‘ಹೆತ್ತ ತಾಯಿಯಷ್ಟೆ ಭೂತಾಯಿಗೂ ಗೌರವ ನೀಡುವುದನ್ನು ವಿವೀಕಾನಂದರು ಕಲಿಸಿದರು. ಅವರು ನಿಜ ಜೀವನದ ಬದುಕು ದೇಶದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗಿದೆ. ದಾರಿ ತಪ್ಪುತ್ತಿರುವ ಯುವಕರನ್ನು ಎಚ್ಚರಿಸುವ ಕೆಲಸ ಮಾಡಿದರು’ ಎಂದರು.</p>.<p>‘ದೇಶದಲ್ಲಿ ಬಡತನ ತಾಂಡವಾಡುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಮಾರಾಟದ ವಸ್ತುಗಳಾಗಿವೆ. ದೇಶದಲ್ಲಿ ನಿರುದೋಗ್ಯ ಸಮಸ್ಯೆ ಹೆಚ್ಚಾಗಿದೆ. ಯುವಕರು ಮೊಬೈಲ್, ಫೇಸ್ ಬುಕ್ ಬಳಕೆಯಿಂದ ದಿನಗಳನ್ನು ಕಳೆಯುತ್ತಿದ್ದಾರೆ’ ಎಂದು ವಿಷಾದಿಸಿದರು.</p>.<p>‘ಇತ್ತೀಚಿಗೆ ಜಾತಿಗೊಂದು ಜಯಂತಿ ನಡೆಯುವ ಪದ್ದತಿ ಹೆಚ್ಚಾಗುತ್ತಿದ್ದು, ನಾಲ್ಕು ಗೋಡೆಗಳ ಮಧ್ಯೆ ಸೀಮಿತಗೊಳಿಸುವುದನ್ನು ತೊರೆದು ಶಾಲಾ ಕಾಲೇಜುಗಳಲ್ಲಿ ಆಚರಣೆಯಾಗಬೇಕು. ಇದರಿಂದ ಗಣ್ಯರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಸಹಕಾರಿಯಾಗುತ್ತದೆ’ ಎಂದು ಹೇಳಿದರು.</p>.<p>ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎ.ನಾರಾಯಣಪ್ಪ ಮಾತನಾಡಿ, ‘ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಾಹಿತ್ಯ, ಭಾಷೆ, ಕಲೆ ಸಂಸ್ಕೃತಿ, ಜನಪದ ಕಲೆಗಳ ಬಗ್ಗೆ ಅರಿತಾಗ ಮಾತ್ರ ಶಿಕ್ಷಣ ಸಾರ್ಥಕತೆ ಹೊಂದ್ದುತ್ತದೆ ’ ಎಂದರು.</p>.<p>ಶಿಕ್ಷಕರಾದ ಸುಬ್ಬರಾಮಯ್ಯ, ಕೆ.ಎನ್.ಪರಮೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಯುವಕರ ಗುರಿ ಸಾಧನೆಗೆ ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳು ಸ್ಪೂರ್ತಿ’ ಎಂದು ಪಿಯು ಕನ್ನಡ ಉಪನ್ಯಾಸಕರ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಜಿ.ನಾಗರಾಜ್ ಅಭಿಪ್ರಾಯಪಟ್ಟರು.</p>.<p>ನಗರದ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.</p>.<p>‘ಆಧುನಿಕ ಯುಗದಲ್ಲಿ ಯುವಕರು ಮೌಢ್ಯ ಮತ್ತು ದೌರ್ಬಲ್ಯಗಳನ್ನು ಕಿತ್ತೊಗೆದು ಜ್ಞಾನದ ಮೂಲಕ ರಾಷ್ಟ್ರೀಯ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ದೇಶದ ಸತ್ಪ್ರಜೆಗಳಾಗಬಹುದು. ಸ್ವಾಮಿ ವಿವೇಕಾನಂದರು ಹಿಂದೂ ಧರ್ಮ ಮತ್ತು ಸಂಸ್ಕೃತಿ ಎಂಬ ನಂದಾದೀಪವನ್ನು ಜಗತ್ತಿನಾದ್ಯಂತ ಬೆಳಗಿಸಿದ ದೃವತಾರೆ’ ಎಂದರು.</p>.<p>‘ವಿವೇಕನಂದರು ಚಿಕ್ಕ ವಯಸ್ಸಿನಲ್ಲಿ ದೇಶದ ಸಮಸ್ಯೆಯನ್ನು ಅರ್ಥೈಸಿಕೊಳ್ಳಲು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಾದಯಾತ್ರೆ ಮಾಡಿದರು. ಧರ್ಮ ಮತ್ತು ವೈಚಾರಿಕತೆಯ ಬಗ್ಗೆ ಯುವಕರಿಗೆ ಅರಿವು ಮೂಡಿಸಿದರು’ ಎಂದು ಹೇಳಿದರು.</p>.<p>‘ಹೆತ್ತ ತಾಯಿಯಷ್ಟೆ ಭೂತಾಯಿಗೂ ಗೌರವ ನೀಡುವುದನ್ನು ವಿವೀಕಾನಂದರು ಕಲಿಸಿದರು. ಅವರು ನಿಜ ಜೀವನದ ಬದುಕು ದೇಶದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗಿದೆ. ದಾರಿ ತಪ್ಪುತ್ತಿರುವ ಯುವಕರನ್ನು ಎಚ್ಚರಿಸುವ ಕೆಲಸ ಮಾಡಿದರು’ ಎಂದರು.</p>.<p>‘ದೇಶದಲ್ಲಿ ಬಡತನ ತಾಂಡವಾಡುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಮಾರಾಟದ ವಸ್ತುಗಳಾಗಿವೆ. ದೇಶದಲ್ಲಿ ನಿರುದೋಗ್ಯ ಸಮಸ್ಯೆ ಹೆಚ್ಚಾಗಿದೆ. ಯುವಕರು ಮೊಬೈಲ್, ಫೇಸ್ ಬುಕ್ ಬಳಕೆಯಿಂದ ದಿನಗಳನ್ನು ಕಳೆಯುತ್ತಿದ್ದಾರೆ’ ಎಂದು ವಿಷಾದಿಸಿದರು.</p>.<p>‘ಇತ್ತೀಚಿಗೆ ಜಾತಿಗೊಂದು ಜಯಂತಿ ನಡೆಯುವ ಪದ್ದತಿ ಹೆಚ್ಚಾಗುತ್ತಿದ್ದು, ನಾಲ್ಕು ಗೋಡೆಗಳ ಮಧ್ಯೆ ಸೀಮಿತಗೊಳಿಸುವುದನ್ನು ತೊರೆದು ಶಾಲಾ ಕಾಲೇಜುಗಳಲ್ಲಿ ಆಚರಣೆಯಾಗಬೇಕು. ಇದರಿಂದ ಗಣ್ಯರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಸಹಕಾರಿಯಾಗುತ್ತದೆ’ ಎಂದು ಹೇಳಿದರು.</p>.<p>ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎ.ನಾರಾಯಣಪ್ಪ ಮಾತನಾಡಿ, ‘ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಾಹಿತ್ಯ, ಭಾಷೆ, ಕಲೆ ಸಂಸ್ಕೃತಿ, ಜನಪದ ಕಲೆಗಳ ಬಗ್ಗೆ ಅರಿತಾಗ ಮಾತ್ರ ಶಿಕ್ಷಣ ಸಾರ್ಥಕತೆ ಹೊಂದ್ದುತ್ತದೆ ’ ಎಂದರು.</p>.<p>ಶಿಕ್ಷಕರಾದ ಸುಬ್ಬರಾಮಯ್ಯ, ಕೆ.ಎನ್.ಪರಮೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>