ಶುಕ್ರವಾರ, 22 ಆಗಸ್ಟ್ 2025
×
ADVERTISEMENT
ADVERTISEMENT

ಅಕ್ರಮ ಗಣಿ | ಬಳ್ಳಾರಿಯಂತಾದ ಮಾಲೂರು: ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಆರೋಪ

Published : 22 ಆಗಸ್ಟ್ 2025, 7:12 IST
Last Updated : 22 ಆಗಸ್ಟ್ 2025, 7:12 IST
ಫಾಲೋ ಮಾಡಿ
Comments
ಗಣಿಗಾರಿಕೆ ವಿಚಾರದಲ್ಲಿ ಮಾಲೂರಿನಲ್ಲೂ ಬಳ್ಳಾರಿ ಸ್ಥಿತಿ ನೆಲೆಸಿದೆ. ಅದೇ ವ್ಯವಸ್ಥೆ ಅದೇ ದೌರ್ಜನ್ಯ. ಅಧಿಕಾರಿಗಳನ್ನು ಕಪಿಮುಷ್ಟಿಯಲ್ಲಿಟ್ಟುಕೊಂಡು ಮನಸೋಇಚ್ಛೆ ಗಣಿಗಾರಿಕೆ ಮಾಡಲಾಗುತ್ತಿದೆ
ಎಸ್‌.ಎನ್‌.ನಾರಾಯಣಸ್ವಾಮಿ ಕಾಂಗ್ರೆಸ್‌ ಶಾಸಕ
ತನಿಖೆಗೆ ತಂಡ ಕಳಿಸಲು ಆಗ್ರಹ
‘ಉಪಲೋಕಾಯುಕ್ತರು ಕೂಡ ಪರಿಶೀಲನೆ ನಡೆಸಿ ಅಕ್ರಮವಾಗಿದೆ ಕಾನೂನು ಉಲ್ಲಂಘನೆಯಾಗಿದೆ ಎಂಬುದಾಗಿ ಹೇಳಿದ್ದಾರೆ. 27 ಕ್ವಾರಿಗಳು ಉಲ್ಲಂಘನೆ ಮಾಡಿವೆ ಎಂಬುದಾಗಿ ತಿಳಿಸಿದ್ದಾರೆ. ಅಕ್ರಮ ಗಣಿಗಾರಿಕೆ ಎಂದು ನೋಟಿಸ್‌ ಕೂಡ ನೀಡಲಾಗಿದೆ. ಆದರೆ ನೋಟಿಸ್‌ಗೆ ಜಗ್ಗುತ್ತಿಲ್ಲ. ಹೀಗಾಗಿ ತನಿಖಾ ತಂಡ ಕಳಿಸಿ ಯಾರು ಸರ್ಕಾರಕ್ಕೆ ಗೌರವಧನ (ರಾಯಲ್ಟಿ) ಮೋಸ ಮಾಡುತ್ತಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು. ಸಮಗ್ರ ತನಿಖೆ ನಡೆಸಿ ಅಕ್ರಮ ಗಣಿಗಾರಿಕೆ ಮುಚ್ಚಬೇಕು’ ಎಂದು ಎಸ್‌.ಎನ್‌.ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.
ಅಕ್ರಮ ಗಣಿ; ಮೇಲ್ನೋಟಕ್ಕೆ ಸಾಬೀತು
‘ಅಕ್ರಮ ಗಣಿಗಾರಿಕೆ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಈಗಾಗಲೇ ನೋಟಿಸ್‌ ನೀಡಲಾಗಿದೆ. ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಕ್ರಮಕ್ಕೆ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ಸಚಿವ ಶರಣ ಪ್ರಕಾಶ ಪಾಟೀಲ ಉತ್ತರಿಸಿದರು. ಅರಣ್ಯ ಸಚಿವ ಈಶ್ವರ ಖಂಡ್ರೆ ಗೈರಿನಲ್ಲಿ ಅವರ ಪರವಾಗಿ ಮಾತನಾಡಿ ಮುಂದೆ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT