ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಜನ್ನಘಟ್ಟ ಕೃಷ್ಣಮೂರ್ತಿ ಜನಪದ ಕಲಾವಿರಾಗಿ ಜಿಲ್ಲೆಯಲ್ಲಿ ಜನಪ್ರಿಯರಾಗಿದ್ದರು. ಕೋಲಾರ ಜಾನಪದ ಕಲಾ ಸಂಘದ ಅಧ್ಯಕ್ಷರಾಗಿ, ಮಾನವ ಹಕ್ಕುಗಳ ಜಾಗೃತಿ ಸಮಿತಿ ಸಾಂಸ್ಕೃತಿಕ ಶಾಖೆ ರಾಜ್ಯ ಅಧ್ಯಕ್ಷರೂ ಆಗಿದ್ದರು. ಜಿಲ್ಲೆಯ ಬಹುತೇಕ ಕಾರ್ಯಕ್ರಮಗಳು ಅವರ ಗಾಯನದ ಮೂಲಕ ಆರಂಭವಾಗುತ್ತಿದ್ದವು. ಸ್ವಗ್ರಾಮ ಜನ್ನಘಟ್ಟದಲ್ಲಿ ಮಂಗಳವಾರ ಮಧ್ಯಾಹ್ನ ಅಂತ್ಯಸಂಸ್ಕಾರ ನಡೆಯಿತು.