<p><strong>ಕೋಲಾರ: </strong>ಆನ್ವಿ ಹಿಯರಿಂಗ್ ಸೊಲ್ಯೂಷನ್ಸ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಉಚಿತ ಶ್ರವಣ ದೋಷ ಚಿಕಿತ್ಸಾ ಶಿಬಿರದಲ್ಲಿ 150ಕ್ಕೂ ಹೆಚ್ಚು ಮಂದಿ ತಪಾಸಣೆ ಮಾಡಿಸಿಕೊಂಡರು.</p>.<p>ನಗರ ಸೇರಿದಂತೆ ಜಿಲ್ಲೆಯ ಶ್ರೀನಿವಾಸಪುರ, ಬಂಗಾರಪೇಟೆ, ಮಾಲೂರು ಹಾಗೂ ಮುಳಬಾಗಿಲು ತಾಲ್ಲೂಕುಗಳಿಂದ ಶ್ರವಣ ದೋಷವುಳ್ಳವರು ಅಗಮಿಸಿ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಂಡರು.</p>.<p>ವೃದ್ದರು, ಮಹಿಳೆಯರು ಅಲ್ಲದೆ ಮಕ್ಕಳು ಪಾಲ್ಗೊಂಡು ಚಿಕಿತ್ಸೆ ಶ್ರವಣ ದೋಷದ ಬಗ್ಗೆ ಯಂತ್ರೋಪಕರಣಗಳಿಂದ ತಪಾಸಣೆ ಮಾಡಿಸಿಕೊಂಡರು. ಕೆಲವರಿಗೆ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಶಾಖೆಗೆ ಬರಲು ತಜ್ಞರು ಸೂಚಿಸಿದರು. ಅಗತ್ಯವಾದ ಉಪಕರಣೆಗಳನ್ನು ರಿಯಾಯಿತಿ ದರದಲ್ಲಿ ನೀಡಿದರು.</p>.<p>ಶಿಬಿರಕ್ಕೆ ಚಾಲನೆ ನೀಡಿದ ರಾಜ್ಯ ಸರಕು ಮತ್ತು ಖರೀದಿದಾರರ ಸಹಕಾರ ಸಂಘದ ನಿರ್ದೇಶಕ ವಿ.ಮುನಿರಾಜು ಮಾತನಾಡಿ, ‘ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದರಿಂದ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ’ ಎಂದು ತಿಳಿಸಿದರು.</p>.<p>‘ಹುಟ್ಟು ಕಿವುಡರಿಗಿಂತ ಮೊಬೈಲ್ ಬಳಕೆಯಿಂದ ಕಿವುಡರ ಸಂಖ್ಯೆ ಹೆಚ್ಚಾಗುತ್ತಿದೆ. ಅತಿಯಾದ ಬಳಕೆಯಿಂದ ಚಿಕ್ಕ ವಯಸ್ಸಿಗೆ ಕಿವುಡರಾಗುತ್ತಿದ್ದಾರೆ. ಅಗತ್ಯ ಮೀರಿ ಬಳಕೆ ಮಾಡುವುದು ಸೂಕ್ತವಲ್ಲ’ ಎಂದರು.</p>.<p>ಶಿಬಿರದಲ್ಲಿ ಶ್ರವಣ ದೋಷ ತಜ್ಞ ಡಾ.ನಿರಂಜನ್, ತಾಂತ್ರಿಕ ತಜ್ಞರಾದ ಯಶಸ್ವಿನಿ, ನೀತೂ, ಪರಾಕ್ಷ ತಪಾಸಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಆನ್ವಿ ಹಿಯರಿಂಗ್ ಸೊಲ್ಯೂಷನ್ಸ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಉಚಿತ ಶ್ರವಣ ದೋಷ ಚಿಕಿತ್ಸಾ ಶಿಬಿರದಲ್ಲಿ 150ಕ್ಕೂ ಹೆಚ್ಚು ಮಂದಿ ತಪಾಸಣೆ ಮಾಡಿಸಿಕೊಂಡರು.</p>.<p>ನಗರ ಸೇರಿದಂತೆ ಜಿಲ್ಲೆಯ ಶ್ರೀನಿವಾಸಪುರ, ಬಂಗಾರಪೇಟೆ, ಮಾಲೂರು ಹಾಗೂ ಮುಳಬಾಗಿಲು ತಾಲ್ಲೂಕುಗಳಿಂದ ಶ್ರವಣ ದೋಷವುಳ್ಳವರು ಅಗಮಿಸಿ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಂಡರು.</p>.<p>ವೃದ್ದರು, ಮಹಿಳೆಯರು ಅಲ್ಲದೆ ಮಕ್ಕಳು ಪಾಲ್ಗೊಂಡು ಚಿಕಿತ್ಸೆ ಶ್ರವಣ ದೋಷದ ಬಗ್ಗೆ ಯಂತ್ರೋಪಕರಣಗಳಿಂದ ತಪಾಸಣೆ ಮಾಡಿಸಿಕೊಂಡರು. ಕೆಲವರಿಗೆ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಶಾಖೆಗೆ ಬರಲು ತಜ್ಞರು ಸೂಚಿಸಿದರು. ಅಗತ್ಯವಾದ ಉಪಕರಣೆಗಳನ್ನು ರಿಯಾಯಿತಿ ದರದಲ್ಲಿ ನೀಡಿದರು.</p>.<p>ಶಿಬಿರಕ್ಕೆ ಚಾಲನೆ ನೀಡಿದ ರಾಜ್ಯ ಸರಕು ಮತ್ತು ಖರೀದಿದಾರರ ಸಹಕಾರ ಸಂಘದ ನಿರ್ದೇಶಕ ವಿ.ಮುನಿರಾಜು ಮಾತನಾಡಿ, ‘ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದರಿಂದ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ’ ಎಂದು ತಿಳಿಸಿದರು.</p>.<p>‘ಹುಟ್ಟು ಕಿವುಡರಿಗಿಂತ ಮೊಬೈಲ್ ಬಳಕೆಯಿಂದ ಕಿವುಡರ ಸಂಖ್ಯೆ ಹೆಚ್ಚಾಗುತ್ತಿದೆ. ಅತಿಯಾದ ಬಳಕೆಯಿಂದ ಚಿಕ್ಕ ವಯಸ್ಸಿಗೆ ಕಿವುಡರಾಗುತ್ತಿದ್ದಾರೆ. ಅಗತ್ಯ ಮೀರಿ ಬಳಕೆ ಮಾಡುವುದು ಸೂಕ್ತವಲ್ಲ’ ಎಂದರು.</p>.<p>ಶಿಬಿರದಲ್ಲಿ ಶ್ರವಣ ದೋಷ ತಜ್ಞ ಡಾ.ನಿರಂಜನ್, ತಾಂತ್ರಿಕ ತಜ್ಞರಾದ ಯಶಸ್ವಿನಿ, ನೀತೂ, ಪರಾಕ್ಷ ತಪಾಸಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>