ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮೋತ್ಸವದಲ್ಲಿ 15 ಲಕ್ಷ ಮಂದಿ ಸೇರುವ ನಿರೀಕ್ಷೆ: ರಾಮಚಂದ್ರಪ್ಪ ವಿಶ್ವಾಸ

ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ರಾಮಚಂದ್ರಪ್ಪ ವಿಶ್ವಾಸ
Last Updated 20 ಜುಲೈ 2022, 4:08 IST
ಅಕ್ಷರ ಗಾತ್ರ

ಕೋಲಾರ: ‘ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಂಗವಾಗಿ ಆಗಸ್ಟ್ 3 ರಂದು ದಾವಣಗೆರೆ ಸಮೀಪ ಸಿದ್ದರಾಮೋತ್ಸವ ಕಾರ್ಯಕ್ರಮವನ್ನು 80 ಎಕರೆ ಜಮೀನಿನಲ್ಲಿ ಆಯೋಜನೆ ಮಾಡಿದ್ದು, ಸುಮಾರು 15 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ' ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ರಾಮಚಂದ್ರಪ್ಪ ಹೇಳಿದರು.

‘ಈ ಕಾರ್ಯಕ್ರಮ ಇತಿಹಾಸ ಪುಟಗಳಲ್ಲಿ ಸೇರಲಿದೆ. ಸಿದ್ದರಾಮೋತ್ಸವಕ್ಕೆ ವಿವಿಧ ಸಂಘ ಸಂಸ್ಥೆಗಳು ಬೆಂಬಲ ನೀಡಿದ್ದು, ಕಾಂಗ್ರೆಸ್ ಹೈಕ‌ಮಾಂಡ್ ಬರುವ ನಿರೀಕ್ಷೆ ಇದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

‘ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ, ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಿಂದಲೇ ಚುನಾವಣೆಗೆ ನಿಲ್ಲುವ ಸೂಚನೆ ಇದೆ’ ಎಂದರು.

ಮಾಜಿ ಶಾಸಕ ಎ.ನಾಗರಾಜ್ ಮಾತನಾಡಿ, ‘ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಹೆಚ್ಚಾಗಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ಎಂದು ತಿಳಿಸಿದರು.

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುವುದು ಕಾಂಗ್ರೆಸ್ ಮುಖಂಡರ ಅಪೇಕ್ಷೆಯಾಗಿದ್ದು, ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ ಎಂದುತಿಳಿಸಿದರು.

ಕುರುಬರ ಸಂಘದ ರಾಜ್ಯ ನಿರ್ದೇಶಕ ಸೋಮಣ್ಣ, ಗಂಗಾಮತಸ್ಥರ ಸಮುದಾಯದ ಮುಖಂಡ ಮುನಿವೆಂಕಟಪ್ಪ, ಕಾಂಗ್ರೆಸ್ ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷ ಎಸ್.ಮಂಜುನಾಥ್, ತಿಗಳರ ಸಮಾಜದ ಫಾಲ್ಗುಣ, ಗಾಣಿಗ ಸಮುದಾಯದ ಮುಖಂಡ ಅಶೋಕ್, ವಾಲ್ಮೀಕಿ ಸಮುದಾಯದ ಮುಖಂಡ ವೆಂಕಟರಾಮ್, ಕುಂಬಾರ ಸಮುದಾಯದ ಮುಖಂಡ ನಂದೀಶ್, ಕಾಂಗ್ರೆಸ್ ಮುಖಂಡ ವೈ.ಶಿವಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT