‘ಜನರ ಏಳಿಗೆಗಾಗಿ ಪಕ್ಷವು ರಾಜ್ಯದ 16 ಜಿಲ್ಲೆಗಳಲ್ಲಿ ಘಟಕ ಸ್ಥಾಪಿಸಿದೆ. ಆರ್ಥಿಕ, ನೈಸರ್ಗಿಕ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿಗಾಗಿ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಾರೆ. ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣ ಮಾಡಬಯಸುವ ಮತ್ತು ನ್ಯಾಯಯುತವಾಗಿ ಚುನಾವಣೆ ಎದುರಿಸುವ ಜಿಲ್ಲೆಯ ಎಲ್ಲಾ ವರ್ಗದ ಜನರು ಪಕ್ಷದ ಸದಸ್ಯತ್ವ ಪಡೆಯಬಹುದು’ ಎಂದರು.