ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಷರೀಫ್ ಮಾತನಾಡಿ, ದಡಾರ ರುಬೆಲ್ಲಾ ನಿರ್ಮೂಲನೆಯತ್ತ ದೊಡ್ಡ ಹೆಜ್ಜೆ ಇಡಲಾಗಿದೆ. ಒಟ್ಟಾರೆ ಮಕ್ಕಳನ್ನು ಬಾಧಿಸುವ 12 ರೋಗ ನಿಯಂತ್ರಣಕ್ಕೆ ಪೂರಕವಾಗಿ ಲಸಿಕೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಜತೆಗೆ ವಿದ್ಯಾವಂತ ಸಮುದಾಯ ಗ್ರಾಮೀಣ ಪ್ರದೇಶದಲ್ಲಿ ಲಸಿಕೆ ಅಭಿಯಾನ ಯಶಸ್ಸಿಗೆ ಶ್ರಮಿಸಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಮಂಜುನಾಥ್, ಪುರಸಭೆ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಬಿಎಚ್ಇಒ ಆಂಜಿಲಮ್ಮ, ಬಿಪಿಎಂ ಹರೀಶ್, ಶೃತಿ, ಶರಣಮ್ಮ ಇದ್ದರು.