<p><strong>ಕೋಲಾರ:</strong> ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ತಾಲ್ಲೂಕಿನ ಬಣಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು.</p>.<p>‘ತಾಲ್ಲೂಕಿನೆಲ್ಲೆಡೆ ಎಲ್ಲಾ ಹಾಲು ಸಹಕಾರ ಸಂಘಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಬಣಕನಹಳ್ಳಿಯ ನೂತನ ಕಟ್ಟಡ ನಿರ್ಮಾಣಕ್ಕೆ ಒಕ್ಕೂಟದಿಂದ ₹ 3 ಲಕ್ಷ ಮತ್ತು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹ 1 ಲಕ್ಷ ನೀಡಲಾಗುತ್ತದೆ’ ಎಂದು ಹರೀಶ್ ಹೇಳಿದರು.</p>.<p>‘ಹಾಲು ಒಕ್ಕೂಟದಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೈತರು ಸ್ವಾವಲಂಬಿಗಳಾಗಬೇಕು. ಉತ್ಪಾದಕರ ಮತ್ತು ಸಂಘದ ಹಿತದೃಷ್ಟಿಯಿಂದ ಹಾಲು ಶೇಖರಣೆ ಹಾಗೂ ಹಾಲಿನ ಗುಣಮಟ್ಟ ಉತ್ತಮಪಡಿಸಬೇಕು. ಸಂಘಕ್ಕೆ ಮುಂದೆ ಕಂಪ್ಯೂಟರ್ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಕೋಚಿಮುಲ್ ತಾಲ್ಲೂಕು ಉಪ ವ್ಯವಸ್ಥಾಪಕ ಡಾ.ಎ.ಸಿ.ಶ್ರೀನಿವಾಸಗೌಡ, ಸಂಘದ ಅಧ್ಯಕ್ಷ ಸೋಮೇಗೌಡ, ಕಾರ್ಯದರ್ಶಿ ದೇವೇಗೌಡ, ವಿಸ್ತರಣಾಧಿಕಾರಿಗಳಾದ ಶ್ರೀನಿವಾಸ್, ಎಸ್.ರಾಮಾಂಜಿನಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ತಾಲ್ಲೂಕಿನ ಬಣಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು.</p>.<p>‘ತಾಲ್ಲೂಕಿನೆಲ್ಲೆಡೆ ಎಲ್ಲಾ ಹಾಲು ಸಹಕಾರ ಸಂಘಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಬಣಕನಹಳ್ಳಿಯ ನೂತನ ಕಟ್ಟಡ ನಿರ್ಮಾಣಕ್ಕೆ ಒಕ್ಕೂಟದಿಂದ ₹ 3 ಲಕ್ಷ ಮತ್ತು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹ 1 ಲಕ್ಷ ನೀಡಲಾಗುತ್ತದೆ’ ಎಂದು ಹರೀಶ್ ಹೇಳಿದರು.</p>.<p>‘ಹಾಲು ಒಕ್ಕೂಟದಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೈತರು ಸ್ವಾವಲಂಬಿಗಳಾಗಬೇಕು. ಉತ್ಪಾದಕರ ಮತ್ತು ಸಂಘದ ಹಿತದೃಷ್ಟಿಯಿಂದ ಹಾಲು ಶೇಖರಣೆ ಹಾಗೂ ಹಾಲಿನ ಗುಣಮಟ್ಟ ಉತ್ತಮಪಡಿಸಬೇಕು. ಸಂಘಕ್ಕೆ ಮುಂದೆ ಕಂಪ್ಯೂಟರ್ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಕೋಚಿಮುಲ್ ತಾಲ್ಲೂಕು ಉಪ ವ್ಯವಸ್ಥಾಪಕ ಡಾ.ಎ.ಸಿ.ಶ್ರೀನಿವಾಸಗೌಡ, ಸಂಘದ ಅಧ್ಯಕ್ಷ ಸೋಮೇಗೌಡ, ಕಾರ್ಯದರ್ಶಿ ದೇವೇಗೌಡ, ವಿಸ್ತರಣಾಧಿಕಾರಿಗಳಾದ ಶ್ರೀನಿವಾಸ್, ಎಸ್.ರಾಮಾಂಜಿನಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>