<p><strong>ಮುಳಬಾಗಲು:</strong> ತಾಲೂಕಿನಾದ್ಯಂತ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲು, ಸಾಗುವಳಿ ಚೀಟಿ ಅಕ್ರಮಗಳಿಗೆ ಕಡಿವಾಣ ಹಾಗೂ ಸರ್ಕಾರಿ ಗೋಮಾಳ ಮತ್ತು ಗುಂಡುತೋಪುಗಳಿಗೆ ಕಡಿವಾಣ ಹಾಕಲು ಒತ್ತಾಯಿಸಿ ತಾಲ್ಲೂಕು ರೈತ ಸಂಘ ಮತ್ತು ಹಸಿರುಸೇನೆ ಕಾರ್ಯಕರ್ತರು ಸೋಮವಾರ ಮಿನಿ ವಿಧಾನಸೌಧ ಎದುರು ಕುರಿಗಳ ಸಹಿತ ಪ್ರತಿಭಟನೆ ನಡೆಸಿದರು.</p>.<p>ಸುಪ್ರಿಂ ಕೋರ್ಟ್ ಗೋಮಾಳ ಮಂಜೂರು ಮಾಡುವ ವೇಳೆ ಈ ಗ್ರಾಮಗಳಲ್ಲಿ ಜಾನುವಾರುಗಳು ಮೇಯಲು ಜಮೀನು ಬಿಟ್ಟು ಸಾಗುವಳಿ ಮಂಜೂರು ಮಾಡಬೇಕು ಎಂದು ಸ್ಪಷ್ಟಪಡಿಸಿದೆ. ಆದರೆ ಆ ನಿಯಮವನ್ನು ಅಧಿಕಾರಿಗಳ ಗಾಳಿಗೆ ತೂರಿರುವ ಕಾರಣ ಜಾನುವಾರುಗಳು ಗ್ರಾಮಾಂತರ ಪ್ರದೇಶದಲ್ಲಿ ಪರದಾಡಬೇಕಾಗಿದೆ ಎಂದು ದೂರಿದರು.</p>.<p>ತಾಲೂಕಿನ ಟಿ.ಕುರುಬರಹಳ್ಳಿ ಗ್ರಾಮದ ಸರ್ವೆ ನಂಬರ್ 36\2ರಲ್ಲಿ ಗೋಮಾಳ ಜಮೀನನ್ನು ಯಾರಿಗೂ ಮಂಜೂರು ಮಾಡಬಾರದು. ಈ ಗ್ರಾಮದಲ್ಲಿ 80 ಕುಟುಂಬಗಳಿದ್ದು ಸುಮಾರು ಇಪ್ಪತ್ತು ಸಾವಿರ ಕುರಿಗಳನ್ನು ಹೊಂದಿವೆ. ಈ ಜಮೀನನ್ನು ಜಾನುವಾರು, ಕುರಿ ಮೇವುಗೆ ಬಿಡಬೇಕು ಎಂದು ಒತ್ತಾಯಿಸಿದರು.</p>.<p>ಇಂತಹ ಜಾನುವಾರುಗಳಿಗೆ ಜಮೀನು ಕಾಯ್ದಿರಿಸದ ಕಡೆ ಸಹ ಗೋಮಾಳ ಮತ್ತು ಸರ್ಕಾರಿ ಜಮೀನುಗಳನ್ನು ಮೀಸಲಿಡಲು ಒತ್ತಾಯಿಸಿದರು.</p>.<p>ಕೆರೆಗಳು ರಿಯಲ್ ಎಸ್ಟೇಟ್ ಹಾಗೂ ಭೂಗಳ್ಳರ ಪಾಲಾಗುತ್ತಿದ್ದು, ಅವುಗಳನ್ನು ಸಂರಕ್ಷಿಸಬೇಕು. ಕೆರೆ ಮತ್ತು ರಾಜುಕಾಲುವೆಗಳ ಒತ್ತುವರಿಯನ್ನು ತಡೆಯಬೇಕು. ಗುಂಡುತೋಪುಗಳನ್ನು ಅಕ್ರಮವಾಗಿ ಖಾತೆ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಉಪ ತಹಶೀಲ್ದಾರ್ ವೆಂಕಟೇಶಯ್ಯ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಫಾರೂಕ್ ಪಾಷಾ, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮರಗಲ್ ಶ್ರೀನಿವಾಸ್, ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಯಲವಹಳ್ಳಿ ಪ್ರಭಾಕರ್, ರಂಜಿತ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಲು:</strong> ತಾಲೂಕಿನಾದ್ಯಂತ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲು, ಸಾಗುವಳಿ ಚೀಟಿ ಅಕ್ರಮಗಳಿಗೆ ಕಡಿವಾಣ ಹಾಗೂ ಸರ್ಕಾರಿ ಗೋಮಾಳ ಮತ್ತು ಗುಂಡುತೋಪುಗಳಿಗೆ ಕಡಿವಾಣ ಹಾಕಲು ಒತ್ತಾಯಿಸಿ ತಾಲ್ಲೂಕು ರೈತ ಸಂಘ ಮತ್ತು ಹಸಿರುಸೇನೆ ಕಾರ್ಯಕರ್ತರು ಸೋಮವಾರ ಮಿನಿ ವಿಧಾನಸೌಧ ಎದುರು ಕುರಿಗಳ ಸಹಿತ ಪ್ರತಿಭಟನೆ ನಡೆಸಿದರು.</p>.<p>ಸುಪ್ರಿಂ ಕೋರ್ಟ್ ಗೋಮಾಳ ಮಂಜೂರು ಮಾಡುವ ವೇಳೆ ಈ ಗ್ರಾಮಗಳಲ್ಲಿ ಜಾನುವಾರುಗಳು ಮೇಯಲು ಜಮೀನು ಬಿಟ್ಟು ಸಾಗುವಳಿ ಮಂಜೂರು ಮಾಡಬೇಕು ಎಂದು ಸ್ಪಷ್ಟಪಡಿಸಿದೆ. ಆದರೆ ಆ ನಿಯಮವನ್ನು ಅಧಿಕಾರಿಗಳ ಗಾಳಿಗೆ ತೂರಿರುವ ಕಾರಣ ಜಾನುವಾರುಗಳು ಗ್ರಾಮಾಂತರ ಪ್ರದೇಶದಲ್ಲಿ ಪರದಾಡಬೇಕಾಗಿದೆ ಎಂದು ದೂರಿದರು.</p>.<p>ತಾಲೂಕಿನ ಟಿ.ಕುರುಬರಹಳ್ಳಿ ಗ್ರಾಮದ ಸರ್ವೆ ನಂಬರ್ 36\2ರಲ್ಲಿ ಗೋಮಾಳ ಜಮೀನನ್ನು ಯಾರಿಗೂ ಮಂಜೂರು ಮಾಡಬಾರದು. ಈ ಗ್ರಾಮದಲ್ಲಿ 80 ಕುಟುಂಬಗಳಿದ್ದು ಸುಮಾರು ಇಪ್ಪತ್ತು ಸಾವಿರ ಕುರಿಗಳನ್ನು ಹೊಂದಿವೆ. ಈ ಜಮೀನನ್ನು ಜಾನುವಾರು, ಕುರಿ ಮೇವುಗೆ ಬಿಡಬೇಕು ಎಂದು ಒತ್ತಾಯಿಸಿದರು.</p>.<p>ಇಂತಹ ಜಾನುವಾರುಗಳಿಗೆ ಜಮೀನು ಕಾಯ್ದಿರಿಸದ ಕಡೆ ಸಹ ಗೋಮಾಳ ಮತ್ತು ಸರ್ಕಾರಿ ಜಮೀನುಗಳನ್ನು ಮೀಸಲಿಡಲು ಒತ್ತಾಯಿಸಿದರು.</p>.<p>ಕೆರೆಗಳು ರಿಯಲ್ ಎಸ್ಟೇಟ್ ಹಾಗೂ ಭೂಗಳ್ಳರ ಪಾಲಾಗುತ್ತಿದ್ದು, ಅವುಗಳನ್ನು ಸಂರಕ್ಷಿಸಬೇಕು. ಕೆರೆ ಮತ್ತು ರಾಜುಕಾಲುವೆಗಳ ಒತ್ತುವರಿಯನ್ನು ತಡೆಯಬೇಕು. ಗುಂಡುತೋಪುಗಳನ್ನು ಅಕ್ರಮವಾಗಿ ಖಾತೆ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಉಪ ತಹಶೀಲ್ದಾರ್ ವೆಂಕಟೇಶಯ್ಯ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಫಾರೂಕ್ ಪಾಷಾ, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮರಗಲ್ ಶ್ರೀನಿವಾಸ್, ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಯಲವಹಳ್ಳಿ ಪ್ರಭಾಕರ್, ರಂಜಿತ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>