<p><strong>ಮಾಲೂರು: </strong>ಪಟ್ಟಣ ಅಭಿವೃದ್ಧಿಯಾಗಬೇಕು. ಕಾನೂನಾತ್ಮಕ ವಾಗಿರುವ ಕಟ್ಟಡಗಳನ್ನು ಕೆಡವಿ ಅಭಿವೃದ್ಧಿ ಮಾಡಬೇಕಾಗಿಲ್ಲ ಎಂದು ಮಾಜಿ ಶಾಸಕ ಕೆ.ಎಸ್.ಮಂಜುನಾಥ್ ಗೌಡ ಅಭಿಪ್ರಾಯಪಟ್ಟರು.</p>.<p>ಭರಣಿ ಆಸ್ಪತ್ರೆ ಸಭಾಂಗಣದಲ್ಲಿ ಭಾನುವಾರ ಸಂಜೆ ಪಟ್ಟಣದ ಮುಖ್ಯ ರಸ್ತೆಯ ಸಮೀಪ ಇರುವ ಕಟ್ಟಡ ಮಾಲೀಕರು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.</p>.<p>ಪಟ್ಟಣದ ಹೊಸಕೋಟೆ, ಮಾಲೂರು ರಸ್ತೆಯ ಪಂಪ್ಹೌಸ್ನಿಂದ ರೈಲ್ವೆ ಮೇಲ್ಸೇತುವೆವರೆಗೆ ₹7 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿದೆ. ಮುಖ್ಯ ರಸ್ತೆಯ ಮಧ್ಯ ಭಾಗದಿಂದ 15 ಮೀಟರ್ ರಸ್ತೆ ಅಗಲೀಕರಣ ಮಾಡಲು ಪುರಸಭೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಯ ಅಕ್ಕ ಪಕ್ಕದಲ್ಲಿರುವ ಕಟ್ಟಡ ಮಾಲೀಕರು ಸಭೆ ನಡೆಸಿ ಮಾಜಿ ಶಾಸಕ ಕೆಎಸ್.ಮಂಜುನಾಥ್ ಗೌಡರ ಬಳಿ ಮನವಿ ಸಲ್ಲಿಸಿದರು.</p>.<p>ಪುರಸಭೆ ಅಧಿಕಾರಿಗಳು ರಸ್ತೆ ಅಗಲೀಕರಣದ ನಿಖರ ಮಾಹಿತಿ ನೀಡುತ್ತಿಲ್ಲ.ಕಾನೂನಾತ್ಮಕವಾಗಿರುವ ಕಟ್ಟಡಗಳನ್ನು ರಸ್ತೆ ಅಗಲೀಕರಣ ಹೆಸರಿನಲ್ಲಿ ಕೆಡವಲು ಮುಂದಾಗಿದ್ದಾರೆ. ನಮಗೆ ನಷ್ಟ ಪರಿಹಾರ ಕೊಡಿಸಿ ಎಂದು ಒತ್ತಾಯಿಸಿದರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಭೆ ನಡೆಸಿ ಚರ್ಚಿಸಬೇಕು ಎಂದರು.</p>.<p>ಜಿ.ಪಂ ಸದಸ್ಯ ಚಿನ್ನಸ್ವಾಮಿ ಗೌಡ, ವಕೀಲರ ಸಂಘದ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ, ಪುರಸಭೆ ಸದಸ್ಯರಾದ ಎಂ.ವಿ.ವೇಮನ್ನ, ಮಾಜಿ ಸದಸ್ಯರಾದ ಆಲೂ ಮಂಜು, ಲಿಂಗೇಶ್, ಡಾ.ವಿನಾಯಕ ಪ್ರಭು, ಡಾ.ವಿಶ್ವನಾಥ್, ಗುಟ್ಟಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು: </strong>ಪಟ್ಟಣ ಅಭಿವೃದ್ಧಿಯಾಗಬೇಕು. ಕಾನೂನಾತ್ಮಕ ವಾಗಿರುವ ಕಟ್ಟಡಗಳನ್ನು ಕೆಡವಿ ಅಭಿವೃದ್ಧಿ ಮಾಡಬೇಕಾಗಿಲ್ಲ ಎಂದು ಮಾಜಿ ಶಾಸಕ ಕೆ.ಎಸ್.ಮಂಜುನಾಥ್ ಗೌಡ ಅಭಿಪ್ರಾಯಪಟ್ಟರು.</p>.<p>ಭರಣಿ ಆಸ್ಪತ್ರೆ ಸಭಾಂಗಣದಲ್ಲಿ ಭಾನುವಾರ ಸಂಜೆ ಪಟ್ಟಣದ ಮುಖ್ಯ ರಸ್ತೆಯ ಸಮೀಪ ಇರುವ ಕಟ್ಟಡ ಮಾಲೀಕರು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.</p>.<p>ಪಟ್ಟಣದ ಹೊಸಕೋಟೆ, ಮಾಲೂರು ರಸ್ತೆಯ ಪಂಪ್ಹೌಸ್ನಿಂದ ರೈಲ್ವೆ ಮೇಲ್ಸೇತುವೆವರೆಗೆ ₹7 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿದೆ. ಮುಖ್ಯ ರಸ್ತೆಯ ಮಧ್ಯ ಭಾಗದಿಂದ 15 ಮೀಟರ್ ರಸ್ತೆ ಅಗಲೀಕರಣ ಮಾಡಲು ಪುರಸಭೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಯ ಅಕ್ಕ ಪಕ್ಕದಲ್ಲಿರುವ ಕಟ್ಟಡ ಮಾಲೀಕರು ಸಭೆ ನಡೆಸಿ ಮಾಜಿ ಶಾಸಕ ಕೆಎಸ್.ಮಂಜುನಾಥ್ ಗೌಡರ ಬಳಿ ಮನವಿ ಸಲ್ಲಿಸಿದರು.</p>.<p>ಪುರಸಭೆ ಅಧಿಕಾರಿಗಳು ರಸ್ತೆ ಅಗಲೀಕರಣದ ನಿಖರ ಮಾಹಿತಿ ನೀಡುತ್ತಿಲ್ಲ.ಕಾನೂನಾತ್ಮಕವಾಗಿರುವ ಕಟ್ಟಡಗಳನ್ನು ರಸ್ತೆ ಅಗಲೀಕರಣ ಹೆಸರಿನಲ್ಲಿ ಕೆಡವಲು ಮುಂದಾಗಿದ್ದಾರೆ. ನಮಗೆ ನಷ್ಟ ಪರಿಹಾರ ಕೊಡಿಸಿ ಎಂದು ಒತ್ತಾಯಿಸಿದರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಭೆ ನಡೆಸಿ ಚರ್ಚಿಸಬೇಕು ಎಂದರು.</p>.<p>ಜಿ.ಪಂ ಸದಸ್ಯ ಚಿನ್ನಸ್ವಾಮಿ ಗೌಡ, ವಕೀಲರ ಸಂಘದ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ, ಪುರಸಭೆ ಸದಸ್ಯರಾದ ಎಂ.ವಿ.ವೇಮನ್ನ, ಮಾಜಿ ಸದಸ್ಯರಾದ ಆಲೂ ಮಂಜು, ಲಿಂಗೇಶ್, ಡಾ.ವಿನಾಯಕ ಪ್ರಭು, ಡಾ.ವಿಶ್ವನಾಥ್, ಗುಟ್ಟಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>