ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ್ ಮಾತನಾಡಿ, ‘ಗ್ರಾಮಗಳಲ್ಲಿನ ರಾಜಕಾಲುವೆ, ಸ್ಮಶಾನ, ಗುಂಡುತೋಪು ಜಾಗ ಒತ್ತುವರಿಯಾಗಿದೆ, ಒತ್ತುವರಿದಾರರ ವಿರುದ್ಧ ಕ್ರಮಕೈಗೊಂಡು ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಮನವಿ ನೀಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ’ ಎಂದು ದೂರಿದರು.