ಶುಕ್ರವಾರ ಪರಿಷತ್ ಕಲಾಪದಲ್ಲಿ ಮಾತನಾಡಿ, ‘ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕೋಟ್ಯಂತರ ರೂಪಾಯಿ ಬೆಳೆ ನಷ್ಟವಾಗಿದೆ. ಬಡ್ಡಿ ಸಾಲ ಮಾಡಿ ಬೆಳೆ ಬೆಳೆದಿದ್ದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟದ ಸಮೀಕ್ಷೆ ಪೂರ್ಣಗೊಂಡಿದ್ದು, ರೈತರಿಗೆ ಶೀಘ್ರವೇ ಪರಿಹಾರದ ಹಣ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.