ಪಶು ಆಹಾರ, ಹಿಂಡಿ, ಬೂಸಾ ಹಾಗೂ ಪಶುಔಷಧಿ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಇದರಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಇದರ ನಡುವೆ ಹಾಲು ಒಕ್ಕೂಟ ಅವೈಜ್ಞಾನಿಕ ತೀರ್ಮಾನ ತೆಗೆದುಕೊಂಡಿದೆ. ಹಾಲಿನ ಬೆಲೆ ಏರಿಕೆ ಮಾಡಬೇಕು. ಇಲ್ಲವಾದರೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರೊಟ್ಟಿಗೆ ಪ್ರತಿಭಟನೆ ನಡೆಸಲಾಗುವುದು. ಹಾಲು ಉತ್ಪಾದಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.