<p><strong>ಮುಳಬಾಗಿಲು</strong>: ಖಾಸಗಿ ಕಾರ್ಖಾನೆಯವರು ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿರುವ ಪರಿಣಾಮ ರಸ್ತೆಯ ಅನುಕೂಲವಿಲ್ಲದಂತಾಗಿದೆ. ಕೂಡಲೇ ರಸ್ತೆಗೆ ಸ್ಥಳ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವೀರಭದ್ರನಗರಕ್ಕೆ ಸೇರಿದ ಕೈಗಾರಿಕಾ ಕ್ಷೇತ್ರದ ನೆರೆಹೊರೆಯ ನಿವಾಸಿಗಳು ತಾಲ್ಲೂಕು ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ವೀರಭದ್ರನಗರ ವಾರ್ಡ್ಗೆ ಸೇರಿದ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದವರು ವಾಸಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಇಪ್ಪತೈದು ವರ್ಷಗಳಿಂದ ವಾಸವಾಗಿರುತ್ತಾರೆ. ಹಲವಾರು ವರ್ಷಗಳಿಂದ ರಸ್ತೆ ಇದ್ದು ಸಾರ್ವಜನಿಕವಾಗಿ ಓಡಾಡುವ ರಸ್ತೆಯನ್ನು ಬಂದ್ ಮಾಡಲಾಗಿದೆ ಎಂದು ದೂರಿದರು.</p>.<p>ಈ ರಸ್ತೆ ಬಿಟ್ಟರೆ ಇಲ್ಲಿನ ನಿವಾಸಿಗಳಿಗೆ ಬೇರೆ ರಸ್ತೆಯ ವ್ಯವಸ್ಥೆ ಇರುವುದಿಲ್ಲ. ಕೂಡಲೇ ಅಧಿಕಾರಿಗಳ ಸ್ಥಳ ತೆರವಿಗೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.</p>.<p>ಉಪ ತಹಶೀಲ್ದಾರ್ ಕೆ.ಎಲ್. ಜಯರಾಮ್ಗೆ ಮನವಿ ಪತ್ರ ಸಲ್ಲಿಸಲಾಯಿತು.ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಅಂಬ್ಲಿಕಲ್ ಶಿವಪ್ಪ, ವೀರಭದ್ರನಗರ ನಿವಾಸಿಗಳಾದ ಶಂಕರಪ್ಪ, ರೆಡ್ಡಪ್ಪ, ಡಿಶ್ಮಣಿ, ಜಯರಾಮರೆಡ್ಡಿ, ಶ್ರೀನಿವಾಸ ಗೋಪಿ, ಸರಸ್ಪತಮ್ಮ, ಸುಜಾತಾ, ಮಂಜುಳಮ್ಮ, ಪವಿತ್ರಾ, ಲಲಿತಮ್ಮ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ಖಾಸಗಿ ಕಾರ್ಖಾನೆಯವರು ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿರುವ ಪರಿಣಾಮ ರಸ್ತೆಯ ಅನುಕೂಲವಿಲ್ಲದಂತಾಗಿದೆ. ಕೂಡಲೇ ರಸ್ತೆಗೆ ಸ್ಥಳ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವೀರಭದ್ರನಗರಕ್ಕೆ ಸೇರಿದ ಕೈಗಾರಿಕಾ ಕ್ಷೇತ್ರದ ನೆರೆಹೊರೆಯ ನಿವಾಸಿಗಳು ತಾಲ್ಲೂಕು ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ವೀರಭದ್ರನಗರ ವಾರ್ಡ್ಗೆ ಸೇರಿದ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದವರು ವಾಸಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಇಪ್ಪತೈದು ವರ್ಷಗಳಿಂದ ವಾಸವಾಗಿರುತ್ತಾರೆ. ಹಲವಾರು ವರ್ಷಗಳಿಂದ ರಸ್ತೆ ಇದ್ದು ಸಾರ್ವಜನಿಕವಾಗಿ ಓಡಾಡುವ ರಸ್ತೆಯನ್ನು ಬಂದ್ ಮಾಡಲಾಗಿದೆ ಎಂದು ದೂರಿದರು.</p>.<p>ಈ ರಸ್ತೆ ಬಿಟ್ಟರೆ ಇಲ್ಲಿನ ನಿವಾಸಿಗಳಿಗೆ ಬೇರೆ ರಸ್ತೆಯ ವ್ಯವಸ್ಥೆ ಇರುವುದಿಲ್ಲ. ಕೂಡಲೇ ಅಧಿಕಾರಿಗಳ ಸ್ಥಳ ತೆರವಿಗೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.</p>.<p>ಉಪ ತಹಶೀಲ್ದಾರ್ ಕೆ.ಎಲ್. ಜಯರಾಮ್ಗೆ ಮನವಿ ಪತ್ರ ಸಲ್ಲಿಸಲಾಯಿತು.ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಅಂಬ್ಲಿಕಲ್ ಶಿವಪ್ಪ, ವೀರಭದ್ರನಗರ ನಿವಾಸಿಗಳಾದ ಶಂಕರಪ್ಪ, ರೆಡ್ಡಪ್ಪ, ಡಿಶ್ಮಣಿ, ಜಯರಾಮರೆಡ್ಡಿ, ಶ್ರೀನಿವಾಸ ಗೋಪಿ, ಸರಸ್ಪತಮ್ಮ, ಸುಜಾತಾ, ಮಂಜುಳಮ್ಮ, ಪವಿತ್ರಾ, ಲಲಿತಮ್ಮ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>