ಸಭೆಯಲ್ಲಿ ಸದಸ್ಯ ಡಿ.ಸಿ.ಶಶಿಧರ್ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗದೆ ಜನಪ್ರತಿನಿಧಿಗಳು ಗ್ರಾಮಗಳಲ್ಲಿ ಜನರ ಆಕ್ರೋಶಕ್ಕೆ ಒಳಗಾಗುವಂತಾಗಿದೆ. ಸಮಸ್ಯೆ ಬಗೆ ಹರಿಸಲು ಅಧಿಕಾರಿಗಳು ಮುಂದಾಗಬೇಕಿದೆ. 120 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದ್ದರು ಸಹ ಬಗೆಹರಿಸದೇ ಸಭೆಗಳನ್ನು ನಡೆಸುವುದರಲ್ಲೇ ಅಧಿಕಾರಿಗಳು ಕಾಲಾಹರಣ ಮಾಡುತ್ತಿರುವುದು ಆಡಳಿತದ ವೈಫಲ್ಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.