ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರ ಕಡಿತ: ಕ್ರಮಕ್ಕೆ ಒತ್ತಾಯ

Last Updated 3 ಸೆಪ್ಟೆಂಬರ್ 2021, 3:41 IST
ಅಕ್ಷರ ಗಾತ್ರ

ಕೆಜಿಎಫ್: ಕ್ಯಾಸಂಬಳ್ಳಿ ಹೋಬಳಿಯ ಕರಡಗಾನಹಳ್ಳಿ ಗ್ರಾಮದ ಸರ್ವೆ ನಂ. 27ರಲ್ಲಿ ಬೆಳೆದಿರುವ ಮರಗಳನ್ನು ಅನುಮತಿ ಪಡೆಯದೆ ಅಕ್ರಮವಾಗಿ ಕಟಾವು ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೆರೆಯಲ್ಲಿ ಅರಣ್ಯ ಇಲಾಖೆಯು ಬೇವು, ಹೊಂಗೆ, ಜಾಲಿ ಮರಗಳನ್ನು ಬೆಳೆಸಿದೆ. ಮಡಿವಾಳ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ್ ನರೇಗಾ ಯೋಜನೆಯಡಿ ಕಾಮಗಾರಿ ನಡೆಸುವಾಗ ಮರಗಳನ್ನು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೆ ಕಟಾವು ಮಾಡಿದ್ದಾರೆ. ಮರಗಳ ಮೌಲ್ಯ ಸುಮಾರು ₹ 50 ಸಾವಿರ ಆಗಿದೆ. 40 ಮರಗಳು ಧರೆಗುರುಳಿವೆ ಎಂದು ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮರಗಳ ಕಟಾವು ಮಾಡಲು ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕಾಗಿತ್ತು. ಆದರೆ, ಅನುಮತಿ ಪಡೆಯದೆ ಗ್ರಾಮ ಪಂಚಾಯಿತಿಗೆ ಪತ್ರ ಕೊಟ್ಟು ಮರ ಕಡಿದಿದ್ದಾರೆ. ಆದ್ದರಿಂದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಗ್ರಾ.ಪಂ. ಸದಸ್ಯರಾದ ಚಂದ್ರಶೇಖರ್ ಮತ್ತು ಪೂಜ ಅವರು ಆ. 4ರಂದು ಕೆರೆಯ ಅಂಚಿನಲ್ಲಿರುವ ಮರಗಳನ್ನು ಕಡಿದು ಅದರಲ್ಲಿ ಬರುವ ಹಣವನ್ನು ಗ್ರಾಮ ಪಂಚಾಯಿತಿಗೆ ಕಟ್ಟಲು ಅನುಮತಿ ಕೋರಿ ಮನವಿ ಸಲ್ಲಿಸಿದ್ದರು. ಕರಡಗಾನಹಳ್ಳಿಯ ಕೆರೆ ಕಟ್ಟೆ ಶಿಥಿಲವಾಗಿದ್ದು, ಅದರ ದುರಸ್ತಿ ಮಾಡಬೇಕಾಗಿದೆ. ಕೆರೆಯ ತೂಬನ್ನು ಸಹ ದುರಸ್ತಿ ಮಾಡದೆ ಇರುವುದರಿಂದ ಕೆರೆ ನೀರು ಪೋಲಾಗುತ್ತಿದೆ.

ದುರಸ್ತಿಗೆ ಅಡ್ಡವಾಗಿರುವ ಮರಗಳನ್ನು ಕಡಿದು ಅದರಲ್ಲಿ ಬಂದ ಹಣವನ್ನು ಪಂಚಾಯಿತಿಗೆ ಕಟ್ಟುವುದಾಗಿ ತಿಳಿಸಿದ್ದಾರೆ. ಅದರಂತೆ ₹ 4,800 ಪಂಚಾಯಿತಿಗೆ ಕಟ್ಟಿದ್ದಾರೆ ಎಂದು ಗ್ರಾ. ಪಂ. ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT