ಕೆರೆಯಲ್ಲಿ ಅರಣ್ಯ ಇಲಾಖೆಯು ಬೇವು, ಹೊಂಗೆ, ಜಾಲಿ ಮರಗಳನ್ನು ಬೆಳೆಸಿದೆ. ಮಡಿವಾಳ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ್ ನರೇಗಾ ಯೋಜನೆಯಡಿ ಕಾಮಗಾರಿ ನಡೆಸುವಾಗ ಮರಗಳನ್ನು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೆ ಕಟಾವು ಮಾಡಿದ್ದಾರೆ. ಮರಗಳ ಮೌಲ್ಯ ಸುಮಾರು ₹ 50 ಸಾವಿರ ಆಗಿದೆ. 40 ಮರಗಳು ಧರೆಗುರುಳಿವೆ ಎಂದು ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.