‘ಕೋವಿಡ್ 2ನೇ ಅಲೆಯಲ್ಲಿ ಸಾವಿರಾರು ಜನ ಮೃತಪಟ್ಟಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸಕಾಲದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಜನರನ್ನು ಸಾವಿನ ದವಡೆಗೆ ದೂಡಿವೆ. ದೇಶ ಪ್ರೇಮ, ದೇಶ ಭಕ್ತಿ ಬಗ್ಗೆ ಭಾಷಣ ಮಾಡುವ ನಾಯಕರು ಜನರ ಜೀವ ಉಳಿಸಲು ಅಗತ್ಯವಾದ ಆಸ್ಪತ್ರೆಗಳು, ಆಮ್ಲಜನಕ ಸಹಿತ ಹಾಸಿಗೆ ವ್ಯವಸ್ಥೆ ಮಾಡಲಿಲ್ಲ. ಇದು ನಾಚಿಕೆಗೇಡಿನ ಸಂಗತಿ’ ಎಂದು ಆರೋಪಿಸಿದರು.