‘ರಾಜ್ಯ ಸರ್ಕಾರ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಪ್ರಧಾನಿ ಸೂಚನೆಯಂತೆ ನರೇಗಾ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ನರೇಗಾ ಅಡಿ ₹ 1 ಸಾವಿರ ಕೋಟಿ ಬಿಡುಗಡೆಯಾಗಿದ್ದು, ಜನ ಉತ್ಸಾಹದಿಂದ ಕೆಲಸಕ್ಕೆ ಬರುತ್ತಿದ್ದಾರೆ. ಮೈ ಮೇಲೆ ಪ್ರಜ್ಞೆ ಇಲ್ಲದ ಯಾರೋ ಕೆಲವರು ಟೀಕೆ ಮಾಡಿದರೆಂದು ನರೇಗಾ ಕಾಮಗಾರಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದರು.