<p><strong>ಕೋಲಾರ:</strong> ‘ನಕಲಿ ಅಂಗವಿಕಲ ಗುರುತಿನ ಚೀಟಿ ಮಾಡಿಸಿಕೊಟ್ಟಿರುವ ಅಧಿಕಾರಿಗಳ ಮತ್ತು ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂಗವಿಕಲರ ಕುಂದುಕೊರತೆಗಳ ಸಭೆಯಲ್ಲಿ ಅಹಲವಾಲುಗಳನ್ನು ಅಲಿಸಿ ಮಾತನಾಡಿ, ‘ನಕಲಿ ಚೀಟಿಗಳನ್ನು ಪಡೆದುಕೊಂಡು ಸೌಕರ್ಯಗಳನ್ನು ಪಡೆದುಕೊಂಡು ಸರ್ಕಾರವನ್ನು ವಂಚಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು’ ಎಂದು ತಾಕೀತು ಮಾಡಿದರು.</p>.<p>‘ಅಂಗವಿಕಲರಿಗೆ ಗುರುತಿನ ಚೀಟಿ ಕಾರ್ಡ್ ವಿತರಣೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಾರ್ವಜನಿಕರ ಆಸ್ಪತ್ರೆಗಳಲ್ಲಿ ಆಗಬೇಕಾಗಿದೆ. ಜಿಲ್ಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳಲ್ಲಿ ಅನುದಾನದಲ್ಲಿ ಶೇ.೫ರಷ್ಟು ಅನುದಾನವನ್ನು ಮೀಸಲಿಡುವ ಬಗ್ಗೆ ಮಾರ್ಗಸೂಚಿಗಳನ್ನು ಎಲ್ಲಾ ಅಧಿಕಾರಿಗಳು ಪಾಲಿಸಬೇಕು’ ಎಂದು ತಿಳಿಸಿದರು.</p>.<p>‘ಕೆಡಿಪಿ ಮತ್ತು ಸಾಮಾನ್ಯ ಸಭೆಗಳಿಗೆ ಗ್ರಾಮೀಣ, ನಗರ ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಆಹ್ವಾನಿಸುತ್ತಿಲ್ಲ. ಪ್ರತಿ ಇಲಾಖೆಯ ಕಚೇರಿ ಮುಂದೆ ರ್್ಯಾಂಪ್ ನಿರ್ಮಿಸಲು ಸೂಚಿಸಬೇಕು’ ಎಂದು ಅಂಗವಿಕಲ ರಾಜೇಶ್ ಮನವಿ ಮಾಡಿದರು.</p>.<p>‘ಪ್ರತಿ ಎರಡು ತಿಂಗಳಿಗೊಮ್ಮೆ ಅಂಗವಿಕಲರ ಕುಂದು ಕೊರತೆ ಸಭೆ ನಡೆಸಬೇಕು ಎಂದು ಸರ್ಕಾರದ ಸುತ್ತೋಲೆಯಿದ್ದರೂ ಶಿಶು ಅಭಿವೃದ್ಧಿ ಅಧಿಕಾರಿಗಳು ಕೆಲಸದ ಒತ್ತಡ ಎಂದು ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ. ಇದರಿಂದ ನಾವು ಅವಕಾಶ ವಂಚಿತರಾಗುತ್ತಿದ್ದೆವೆ’ ಎಂದು ಅಳಲು ತೊಡಿಕೊಂಡರು.</p>.<p>ಇದಕ್ಕೆ ಸ್ಪಂದಿಸಿದ ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ‘ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸಭೆ ನಡೆಸಲಾಗುತ್ತಿದೆ. ಈಗ ಹೇಳಿರುವ ಸಮಸ್ಯೆಗಳು ಒಂದು ಕಾಲ ಮಿತಿಯೊಳಗೆ ಬಗೆಹರಿಯದಿದ್ದರೆ ಪುನಃ ಸಭೆ ಕರೆದು ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಅಧಿಕಾರಿಗಳು ಕರ್ತವ್ಯದ ಜತೆಗೆ ಮಾನವಿಯತೆಯನ್ನು ಅಳವಡಿಸಿಕೊಂಡು ಕೆಲಸ ನಿರ್ವಹಿಸಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಕರ್ಯ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಬೇಕು’ ಎಂದು ಸೂಚಿಸಿದರು.</p>.<p>‘ಫೆ.೧೧ ಮತ್ತು ೧೨ರಂದು ಎರಡು ದಿನಗಳು ಸಿಬಿಐಟಿ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಸುಮಾರು ೧೫೦ ಕಂಪನಿಗಳು ಭಾಗವಹಿಸಲಿದೆ. ವಿಶೇಷಚೇತನರಿಗೆ ಉದ್ಯೋಗದಲ್ಲಿ ಮೀಸಲಾತಿ ಇರುವ ಅವಕಾಶವನ್ನು ಆರ್ಹರು ಸದ್ಬಳಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಆಸ್ಪತ್ರೆಗಳಲ್ಲಿ ಅಂಗವಿಕಲರಿಗೆ ಬಹಳಷ್ಟು ಸಮಸ್ಯೆಗಳಿದ್ದು ತಪಾಸಣೆಗೆ ವಿಶೇಷ ದಿನ ಮತ್ತು ಕೊಠಡಿಯನ್ನು ಹಾಗೂ ತಜ್ಞವೈದ್ಯರನ್ನು ನೇಮಿಸುವ ವ್ಯವಸ್ಥೆಯನ್ನು ಮಾಡಬೇಕು’ ಎಂದು ವೈದ್ಯಾಧಿಕಾರಿ ಡಾ.ನಾರಾಯಣಸ್ವಾಮಿ ಅವರಿಗೆ ಸೂಚಿಸಿದರು.</p>.<p>‘ಅಂಗವಿಕಲತೆಯ ಪ್ರಮಾಣವನ್ನು ಗುರುತಿಸುವಲ್ಲಿ ಕೆಲವು ವೈದ್ಯರ ಕರ್ತವ್ಯದಲ್ಲಿ ಲೋಪದೋಷಗಳ ಆರೋಪಗಳು ಕೇಳಿ ಬರುತ್ತಿದೆ. ಈ ಬಗ್ಗೆ ಅಧಿಕಾರಿಗಳು ಸಂಬಂಧ ಪಟ್ಟ ವೈದ್ಯರನ್ನು ಎಚ್ಚರಿಸಬೇಕು. ಪ್ರಮಾಣಿಕವಾಗಿ ಅರ್ಹರಿಗೆ ಗುರುತಿನ ಚೀಟಿ ನೀಡಬೇಕು’ ಎಂದು ಹೇಳಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಎಂ.ಎನ್.ಪಾಲಿ, ಜಿ.ಪಂ ಯೋಜನಾ ನಿರ್ದೇಕ ಮಾದೇಶ, ಅಂಗವಿಕಲ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜಗದೀಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ನಕಲಿ ಅಂಗವಿಕಲ ಗುರುತಿನ ಚೀಟಿ ಮಾಡಿಸಿಕೊಟ್ಟಿರುವ ಅಧಿಕಾರಿಗಳ ಮತ್ತು ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂಗವಿಕಲರ ಕುಂದುಕೊರತೆಗಳ ಸಭೆಯಲ್ಲಿ ಅಹಲವಾಲುಗಳನ್ನು ಅಲಿಸಿ ಮಾತನಾಡಿ, ‘ನಕಲಿ ಚೀಟಿಗಳನ್ನು ಪಡೆದುಕೊಂಡು ಸೌಕರ್ಯಗಳನ್ನು ಪಡೆದುಕೊಂಡು ಸರ್ಕಾರವನ್ನು ವಂಚಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು’ ಎಂದು ತಾಕೀತು ಮಾಡಿದರು.</p>.<p>‘ಅಂಗವಿಕಲರಿಗೆ ಗುರುತಿನ ಚೀಟಿ ಕಾರ್ಡ್ ವಿತರಣೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಾರ್ವಜನಿಕರ ಆಸ್ಪತ್ರೆಗಳಲ್ಲಿ ಆಗಬೇಕಾಗಿದೆ. ಜಿಲ್ಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳಲ್ಲಿ ಅನುದಾನದಲ್ಲಿ ಶೇ.೫ರಷ್ಟು ಅನುದಾನವನ್ನು ಮೀಸಲಿಡುವ ಬಗ್ಗೆ ಮಾರ್ಗಸೂಚಿಗಳನ್ನು ಎಲ್ಲಾ ಅಧಿಕಾರಿಗಳು ಪಾಲಿಸಬೇಕು’ ಎಂದು ತಿಳಿಸಿದರು.</p>.<p>‘ಕೆಡಿಪಿ ಮತ್ತು ಸಾಮಾನ್ಯ ಸಭೆಗಳಿಗೆ ಗ್ರಾಮೀಣ, ನಗರ ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಆಹ್ವಾನಿಸುತ್ತಿಲ್ಲ. ಪ್ರತಿ ಇಲಾಖೆಯ ಕಚೇರಿ ಮುಂದೆ ರ್್ಯಾಂಪ್ ನಿರ್ಮಿಸಲು ಸೂಚಿಸಬೇಕು’ ಎಂದು ಅಂಗವಿಕಲ ರಾಜೇಶ್ ಮನವಿ ಮಾಡಿದರು.</p>.<p>‘ಪ್ರತಿ ಎರಡು ತಿಂಗಳಿಗೊಮ್ಮೆ ಅಂಗವಿಕಲರ ಕುಂದು ಕೊರತೆ ಸಭೆ ನಡೆಸಬೇಕು ಎಂದು ಸರ್ಕಾರದ ಸುತ್ತೋಲೆಯಿದ್ದರೂ ಶಿಶು ಅಭಿವೃದ್ಧಿ ಅಧಿಕಾರಿಗಳು ಕೆಲಸದ ಒತ್ತಡ ಎಂದು ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ. ಇದರಿಂದ ನಾವು ಅವಕಾಶ ವಂಚಿತರಾಗುತ್ತಿದ್ದೆವೆ’ ಎಂದು ಅಳಲು ತೊಡಿಕೊಂಡರು.</p>.<p>ಇದಕ್ಕೆ ಸ್ಪಂದಿಸಿದ ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ‘ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸಭೆ ನಡೆಸಲಾಗುತ್ತಿದೆ. ಈಗ ಹೇಳಿರುವ ಸಮಸ್ಯೆಗಳು ಒಂದು ಕಾಲ ಮಿತಿಯೊಳಗೆ ಬಗೆಹರಿಯದಿದ್ದರೆ ಪುನಃ ಸಭೆ ಕರೆದು ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಅಧಿಕಾರಿಗಳು ಕರ್ತವ್ಯದ ಜತೆಗೆ ಮಾನವಿಯತೆಯನ್ನು ಅಳವಡಿಸಿಕೊಂಡು ಕೆಲಸ ನಿರ್ವಹಿಸಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಕರ್ಯ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಬೇಕು’ ಎಂದು ಸೂಚಿಸಿದರು.</p>.<p>‘ಫೆ.೧೧ ಮತ್ತು ೧೨ರಂದು ಎರಡು ದಿನಗಳು ಸಿಬಿಐಟಿ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಸುಮಾರು ೧೫೦ ಕಂಪನಿಗಳು ಭಾಗವಹಿಸಲಿದೆ. ವಿಶೇಷಚೇತನರಿಗೆ ಉದ್ಯೋಗದಲ್ಲಿ ಮೀಸಲಾತಿ ಇರುವ ಅವಕಾಶವನ್ನು ಆರ್ಹರು ಸದ್ಬಳಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಆಸ್ಪತ್ರೆಗಳಲ್ಲಿ ಅಂಗವಿಕಲರಿಗೆ ಬಹಳಷ್ಟು ಸಮಸ್ಯೆಗಳಿದ್ದು ತಪಾಸಣೆಗೆ ವಿಶೇಷ ದಿನ ಮತ್ತು ಕೊಠಡಿಯನ್ನು ಹಾಗೂ ತಜ್ಞವೈದ್ಯರನ್ನು ನೇಮಿಸುವ ವ್ಯವಸ್ಥೆಯನ್ನು ಮಾಡಬೇಕು’ ಎಂದು ವೈದ್ಯಾಧಿಕಾರಿ ಡಾ.ನಾರಾಯಣಸ್ವಾಮಿ ಅವರಿಗೆ ಸೂಚಿಸಿದರು.</p>.<p>‘ಅಂಗವಿಕಲತೆಯ ಪ್ರಮಾಣವನ್ನು ಗುರುತಿಸುವಲ್ಲಿ ಕೆಲವು ವೈದ್ಯರ ಕರ್ತವ್ಯದಲ್ಲಿ ಲೋಪದೋಷಗಳ ಆರೋಪಗಳು ಕೇಳಿ ಬರುತ್ತಿದೆ. ಈ ಬಗ್ಗೆ ಅಧಿಕಾರಿಗಳು ಸಂಬಂಧ ಪಟ್ಟ ವೈದ್ಯರನ್ನು ಎಚ್ಚರಿಸಬೇಕು. ಪ್ರಮಾಣಿಕವಾಗಿ ಅರ್ಹರಿಗೆ ಗುರುತಿನ ಚೀಟಿ ನೀಡಬೇಕು’ ಎಂದು ಹೇಳಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಎಂ.ಎನ್.ಪಾಲಿ, ಜಿ.ಪಂ ಯೋಜನಾ ನಿರ್ದೇಕ ಮಾದೇಶ, ಅಂಗವಿಕಲ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜಗದೀಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>