<p><strong>ಕೋಲಾರ: </strong>ನಗರದ ಹೊರವಲಯದ ಟಮಕ ಬಳಿಯಿರುವ ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಒಡೆತನದ ಆಸ್ಪತ್ರೆ, ವೈದ್ಯಕೀಯ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ಶೋಧ ನಡೆಸಿ ಹಣಕಾಸು ವ್ಯವಹಾರದ ದಾಖಲೆಪತ್ರ ಪರಿಶೀಲಿಸಿದರು.</p>.<p>ಬೆಳಗಿನ ಜಾವ 5 ಗಂಟೆ ಸುಮಾರಿಗೆ ಖಾಸಗಿ ಕಾರುಗಳಲ್ಲಿ ಬೆಂಗಳೂರಿನಿಂದ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ಇಡೀ ದಿನ ಪರಿಶೀಲನೆ ಮಾಡಿದರು. ಜಾಲಪ್ಪರ ಶಿಕ್ಷಣ ಸಂಸ್ಥೆ, ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಹಣಕಾಸು ವ್ಯವಹಾರ, ಆದಾಯ, ತೆರಿಗೆ ಪಾವತಿಗೆ ಸಂಬಂಧಿಸಿದ ದಾಖಲೆಪತ್ರಗಳನ್ನು ಅಧಿಕಾರಿಗಳು ಜಾಲಾಡಿದರು.</p>.<p>ಅಲ್ಲದೇ, ಸಂಸ್ಥೆಯ ಕೆಲ ಸಿಬ್ಬಂದಿಯ ವಿಚಾರಣೆ ನಡೆಸಿದರು. ಕಂಪ್ಯೂಟರ್ ಹಾರ್ಡ್ ಡಿಸ್ಕ್, ತೆರಿಗೆ ಪಾವತಿಗೆ ಸಂಬಂಧಪಟ್ಟ ದಾಖಲೆಪತ್ರಗಳನ್ನು ಅಧಿಕಾರಿಗಳು ಹೆಚ್ಚಿನ ಪರಿಶೀಲನೆಗಾಗಿ ವಶಕ್ಕೆ ತೆಗೆದುಕೊಂಡರು. ಮಾಧ್ಯಮ ಪ್ರತಿನಿಧಿಗಳು, ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಪರಿಶೀಲನಾ ಸ್ಥಳಕ್ಕೆ ಪ್ರವೇಶ ನಿರ್ಬಂಧಿಸಲಾಗಿತ್ತು.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿರುವ ಜಾಲಪ್ಪ ಅವರ ಪುತ್ರ ರಾಜೇಂದ್ರ ಅವರ ನಿವಾಸ ಮತ್ತು ಕಚೇರಿ ಮೇಲೂ ಐ.ಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದರು. ರಾಜೇಂದ್ರ ಅವರ ನಿವಾಸದಲ್ಲಿ ಪತ್ತೆಯಾದ ಕೋಲಾರ ಅತಿಥಿಗೃಹದಲ್ಲಿನ ಲಾಕರ್ಗಳ ಕೀಗಳನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡರು. ನಂತರ ಆ ಕೀಗಳೊಂದಿಗೆ ಕೋಲಾರಕ್ಕೆ ಬಂದ ಅಧಿಕಾರಿಗಳು ಅತಿಥಿಗೃಹದಲ್ಲಿನ ಲಾಕರ್ಗಳನ್ನು ತೆರೆದು ಪರಿಶೀಲನೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ನಗರದ ಹೊರವಲಯದ ಟಮಕ ಬಳಿಯಿರುವ ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಒಡೆತನದ ಆಸ್ಪತ್ರೆ, ವೈದ್ಯಕೀಯ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ಶೋಧ ನಡೆಸಿ ಹಣಕಾಸು ವ್ಯವಹಾರದ ದಾಖಲೆಪತ್ರ ಪರಿಶೀಲಿಸಿದರು.</p>.<p>ಬೆಳಗಿನ ಜಾವ 5 ಗಂಟೆ ಸುಮಾರಿಗೆ ಖಾಸಗಿ ಕಾರುಗಳಲ್ಲಿ ಬೆಂಗಳೂರಿನಿಂದ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ಇಡೀ ದಿನ ಪರಿಶೀಲನೆ ಮಾಡಿದರು. ಜಾಲಪ್ಪರ ಶಿಕ್ಷಣ ಸಂಸ್ಥೆ, ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಹಣಕಾಸು ವ್ಯವಹಾರ, ಆದಾಯ, ತೆರಿಗೆ ಪಾವತಿಗೆ ಸಂಬಂಧಿಸಿದ ದಾಖಲೆಪತ್ರಗಳನ್ನು ಅಧಿಕಾರಿಗಳು ಜಾಲಾಡಿದರು.</p>.<p>ಅಲ್ಲದೇ, ಸಂಸ್ಥೆಯ ಕೆಲ ಸಿಬ್ಬಂದಿಯ ವಿಚಾರಣೆ ನಡೆಸಿದರು. ಕಂಪ್ಯೂಟರ್ ಹಾರ್ಡ್ ಡಿಸ್ಕ್, ತೆರಿಗೆ ಪಾವತಿಗೆ ಸಂಬಂಧಪಟ್ಟ ದಾಖಲೆಪತ್ರಗಳನ್ನು ಅಧಿಕಾರಿಗಳು ಹೆಚ್ಚಿನ ಪರಿಶೀಲನೆಗಾಗಿ ವಶಕ್ಕೆ ತೆಗೆದುಕೊಂಡರು. ಮಾಧ್ಯಮ ಪ್ರತಿನಿಧಿಗಳು, ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಪರಿಶೀಲನಾ ಸ್ಥಳಕ್ಕೆ ಪ್ರವೇಶ ನಿರ್ಬಂಧಿಸಲಾಗಿತ್ತು.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿರುವ ಜಾಲಪ್ಪ ಅವರ ಪುತ್ರ ರಾಜೇಂದ್ರ ಅವರ ನಿವಾಸ ಮತ್ತು ಕಚೇರಿ ಮೇಲೂ ಐ.ಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದರು. ರಾಜೇಂದ್ರ ಅವರ ನಿವಾಸದಲ್ಲಿ ಪತ್ತೆಯಾದ ಕೋಲಾರ ಅತಿಥಿಗೃಹದಲ್ಲಿನ ಲಾಕರ್ಗಳ ಕೀಗಳನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡರು. ನಂತರ ಆ ಕೀಗಳೊಂದಿಗೆ ಕೋಲಾರಕ್ಕೆ ಬಂದ ಅಧಿಕಾರಿಗಳು ಅತಿಥಿಗೃಹದಲ್ಲಿನ ಲಾಕರ್ಗಳನ್ನು ತೆರೆದು ಪರಿಶೀಲನೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>