<p><strong>ಕೋಲಾರ</strong>: ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಐತಾಂಡಹಳ್ಳಿ ಮತ್ತು ಎಂ-.ಸೊಣ್ಣೂರು ಗ್ರಾಮದಲ್ಲಿನ ಕಾಂಕ್ರಿಟ್ ರಸ್ತೆಯ ಅಕ್ರಮ ಬಯಲಾದ ಬೆನ್ನಲ್ಲೇ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್ಐಡಿಎಲ್) ಅಧಿಕಾರಿಗಳು ತರಾತುರಿಯಲ್ಲಿ ರಸ್ತೆ ನಿರ್ಮಿಸಿದ್ದಾರೆ.</p>.<p>ಅಧಿಕಾರಿಗಳು ರಸ್ತೆ ನಿರ್ಮಿಸದಿದ್ದರೂ ಕಾಮಗಾರಿ ಪೂರ್ಣಗೊಂಡಿರುವುದಾಗಿ ನಕಲಿ ದಾಖಲೆಪತ್ರ ಸೃಷ್ಟಿಸಿ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿದ್ದ ಸಂಬಂಧ ‘ಪ್ರಜಾವಾಣಿ’ಯಲ್ಲಿ ಜುಲೈ 23ರಂದು ವರದಿ ಪ್ರಕಟವಾಗಿತ್ತು.</p>.<p>ಅಧಿಕಾರಿಗಳ ಅಕ್ರಮದ ಸಂಬಂಧ ಕೆಆರ್ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿತ್ತು. ಈ ಸಂಗತಿ ತಿಳಿದ ಅಧಿಕಾರಿಗಳು ಶಿಸ್ತುಕ್ರಮದ ತೂಗುಗತ್ತಿಯಿಂದ ಪಾರಾಗಲು ನಾಲ್ಕೈದು ದಿನದಲ್ಲೇ ರಸ್ತೆ ನಿರ್ಮಾಣ ಮಾಡಿದ್ದಾರೆ.</p>.<p>ರಸ್ತೆಯನ್ನೇ ನಿರ್ಮಿಸದೆ ಗುತ್ತಿಗೆದಾರರಿಗೆ ಬಿಲ್ ನೀಡಿದ ಮತ್ತು ರಸ್ತೆಯ ಗುಣಮಟ್ಟ ಉತ್ತಮವಾಗಿದೆ ಎಂದು ದೃಢೀಕರಿಸಿ ವರದಿ ನೀಡಿ ಅಕ್ರಮ ಎಸಗಿರುವ ಕೆಆರ್ಐಡಿಎಲ್ ಅಧಿಕಾರಿಗಳು ಹಾಗೂ ಮೂರನೇ ವ್ಯಕ್ತಿ ಸಂಸ್ಥೆ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕೆಂದು ಐತಾಂಡಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p><strong>ಅಕ್ರಮವೇನು?</strong></p>.<p>ಐತಾಂಡಹಳ್ಳಿ ಮತ್ತು ಎಂ-.ಸೊಣ್ಣೂರು ಗ್ರಾಮದ ನಡುವೆ ₹ 20 ಲಕ್ಷ ಅಂದಾಜು ವೆಚ್ಚದಲ್ಲಿ ಸಿಮೆಂಟ್ ರಸ್ತೆ ನಿರ್ಮಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2018–19ನೇ ಸಾಲಿನಲ್ಲಿ ಹಣ ಬಿಡುಗಡೆ ಮಾಡಿತ್ತು.</p>.<p>ನಂತರ ಕೆಆರ್ಐಡಿಎಲ್ ಅಧಿಕಾರಿಗಳು ಕಾಂಕ್ರಿಟ್ ರಸ್ತೆ ನಿರ್ಮಿಸಿರುವುದಾಗಿ ನಕಲಿ ದಾಖಲೆಪತ್ರ ಸೃಷ್ಟಿಸಿ ಕಾಮಗಾರಿಯ ಗುತ್ತಿಗೆದಾರ ಸಂಕೇತ್ ಅವರಿಗೆ ಬಿಲ್ ಮಂಜೂರು ಮಾಡಿದ್ದರು. 2019ರ ಅಕ್ಟೋಬರ್ನಲ್ಲಿ ಆರಂಭವಾದ ಕಾಮಗಾರಿ 2020ರ ಮಾರ್ಚ್ನಲ್ಲಿ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ದಾಖಲೆಪತ್ರ ಸೃಷ್ಟಿಸಿದ್ದರು.</p>.<p>ಗುತ್ತಿಗೆದಾರರಿಗೆ ₹ 5.37 ಲಕ್ಷ ವೆಚ್ಚದ ಕಾಮಗಾರಿ ಸಾಮಗ್ರಿಗಳನ್ನು ಕೊಡಿಸಲಾಗಿದೆ. ಕಾಮಗಾರಿಗೆ ಬಳಸಿರುವ ಕಚ್ಚಾ ಸಾಮಗ್ರಿಗಳಿಗೆ ₹ 5.74 ಲಕ್ಷ ನೀಡಲಾಗಿದೆ. ಜತೆಗೆ ಕಾಮಗಾರಿಗೆ ಬಂದ ಕಾರ್ಮಿಕರ ಕೂಲಿಗಾಗಿ ₹ 4.32 ಲಕ್ಷ ನೀಡಲಾಗಿದೆ ಎಂದು ಅಧಿಕಾರಿಗಳು ದಾಖಲೆಪತ್ರದಲ್ಲಿ ಉಲ್ಲೇಖಿಸಿದ್ದರು.</p>.<p><strong>ರಕ್ಷಣೆ ಪ್ರಯತ್ನ: </strong>ಅಧಿಕಾರಿಗಳು ಗುತ್ತಿಗೆದಾರರ ಜತೆ ಶಾಮೀಲಾಗಿ ನಿರ್ಮಾಣವೇ ಆಗದ ರಸ್ತೆಗೆ ಬಿಲ್ ಮಂಜೂರು ಮಾಡಿ ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡಿದ್ದರು. ಅಲ್ಲದೇ, ₹ 11 ಸಾವಿರ ಖರ್ಚು ಮಾಡಿ ಉದ್ದೇಶಿತ ಕಾಮಗಾರಿಯ ಎರಡೂ ಸ್ಥಳಗಳಲ್ಲಿ ಕಾಮಗಾರಿಯ ಮಾಹಿತಿಯುಳ್ಳ ಫಲಕಗಳನ್ನು ಹಾಕಿಸಿದ್ದರು.</p>.<p>ಅಕ್ರಮ ಎಸಗಿ ಸಿಕ್ಕಿಬಿದ್ದಿರುವ ತಪ್ಪಿತಸ್ಥ ಅಧಿಕಾರಿಗಳು, ಗುತ್ತಿಗೆದಾರರು ಮತ್ತು ಮೂರನೇ ವ್ಯಕ್ತಿ ಸಂಸ್ಥೆಯ ರಕ್ಷಣೆಗೆ ತೆರೆಮರೆಯಲ್ಲೇ ಪ್ರಯತ್ನ ನಡೆದಿದೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಐತಾಂಡಹಳ್ಳಿ ಮತ್ತು ಎಂ-.ಸೊಣ್ಣೂರು ಗ್ರಾಮದಲ್ಲಿನ ಕಾಂಕ್ರಿಟ್ ರಸ್ತೆಯ ಅಕ್ರಮ ಬಯಲಾದ ಬೆನ್ನಲ್ಲೇ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್ಐಡಿಎಲ್) ಅಧಿಕಾರಿಗಳು ತರಾತುರಿಯಲ್ಲಿ ರಸ್ತೆ ನಿರ್ಮಿಸಿದ್ದಾರೆ.</p>.<p>ಅಧಿಕಾರಿಗಳು ರಸ್ತೆ ನಿರ್ಮಿಸದಿದ್ದರೂ ಕಾಮಗಾರಿ ಪೂರ್ಣಗೊಂಡಿರುವುದಾಗಿ ನಕಲಿ ದಾಖಲೆಪತ್ರ ಸೃಷ್ಟಿಸಿ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿದ್ದ ಸಂಬಂಧ ‘ಪ್ರಜಾವಾಣಿ’ಯಲ್ಲಿ ಜುಲೈ 23ರಂದು ವರದಿ ಪ್ರಕಟವಾಗಿತ್ತು.</p>.<p>ಅಧಿಕಾರಿಗಳ ಅಕ್ರಮದ ಸಂಬಂಧ ಕೆಆರ್ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿತ್ತು. ಈ ಸಂಗತಿ ತಿಳಿದ ಅಧಿಕಾರಿಗಳು ಶಿಸ್ತುಕ್ರಮದ ತೂಗುಗತ್ತಿಯಿಂದ ಪಾರಾಗಲು ನಾಲ್ಕೈದು ದಿನದಲ್ಲೇ ರಸ್ತೆ ನಿರ್ಮಾಣ ಮಾಡಿದ್ದಾರೆ.</p>.<p>ರಸ್ತೆಯನ್ನೇ ನಿರ್ಮಿಸದೆ ಗುತ್ತಿಗೆದಾರರಿಗೆ ಬಿಲ್ ನೀಡಿದ ಮತ್ತು ರಸ್ತೆಯ ಗುಣಮಟ್ಟ ಉತ್ತಮವಾಗಿದೆ ಎಂದು ದೃಢೀಕರಿಸಿ ವರದಿ ನೀಡಿ ಅಕ್ರಮ ಎಸಗಿರುವ ಕೆಆರ್ಐಡಿಎಲ್ ಅಧಿಕಾರಿಗಳು ಹಾಗೂ ಮೂರನೇ ವ್ಯಕ್ತಿ ಸಂಸ್ಥೆ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕೆಂದು ಐತಾಂಡಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p><strong>ಅಕ್ರಮವೇನು?</strong></p>.<p>ಐತಾಂಡಹಳ್ಳಿ ಮತ್ತು ಎಂ-.ಸೊಣ್ಣೂರು ಗ್ರಾಮದ ನಡುವೆ ₹ 20 ಲಕ್ಷ ಅಂದಾಜು ವೆಚ್ಚದಲ್ಲಿ ಸಿಮೆಂಟ್ ರಸ್ತೆ ನಿರ್ಮಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2018–19ನೇ ಸಾಲಿನಲ್ಲಿ ಹಣ ಬಿಡುಗಡೆ ಮಾಡಿತ್ತು.</p>.<p>ನಂತರ ಕೆಆರ್ಐಡಿಎಲ್ ಅಧಿಕಾರಿಗಳು ಕಾಂಕ್ರಿಟ್ ರಸ್ತೆ ನಿರ್ಮಿಸಿರುವುದಾಗಿ ನಕಲಿ ದಾಖಲೆಪತ್ರ ಸೃಷ್ಟಿಸಿ ಕಾಮಗಾರಿಯ ಗುತ್ತಿಗೆದಾರ ಸಂಕೇತ್ ಅವರಿಗೆ ಬಿಲ್ ಮಂಜೂರು ಮಾಡಿದ್ದರು. 2019ರ ಅಕ್ಟೋಬರ್ನಲ್ಲಿ ಆರಂಭವಾದ ಕಾಮಗಾರಿ 2020ರ ಮಾರ್ಚ್ನಲ್ಲಿ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ದಾಖಲೆಪತ್ರ ಸೃಷ್ಟಿಸಿದ್ದರು.</p>.<p>ಗುತ್ತಿಗೆದಾರರಿಗೆ ₹ 5.37 ಲಕ್ಷ ವೆಚ್ಚದ ಕಾಮಗಾರಿ ಸಾಮಗ್ರಿಗಳನ್ನು ಕೊಡಿಸಲಾಗಿದೆ. ಕಾಮಗಾರಿಗೆ ಬಳಸಿರುವ ಕಚ್ಚಾ ಸಾಮಗ್ರಿಗಳಿಗೆ ₹ 5.74 ಲಕ್ಷ ನೀಡಲಾಗಿದೆ. ಜತೆಗೆ ಕಾಮಗಾರಿಗೆ ಬಂದ ಕಾರ್ಮಿಕರ ಕೂಲಿಗಾಗಿ ₹ 4.32 ಲಕ್ಷ ನೀಡಲಾಗಿದೆ ಎಂದು ಅಧಿಕಾರಿಗಳು ದಾಖಲೆಪತ್ರದಲ್ಲಿ ಉಲ್ಲೇಖಿಸಿದ್ದರು.</p>.<p><strong>ರಕ್ಷಣೆ ಪ್ರಯತ್ನ: </strong>ಅಧಿಕಾರಿಗಳು ಗುತ್ತಿಗೆದಾರರ ಜತೆ ಶಾಮೀಲಾಗಿ ನಿರ್ಮಾಣವೇ ಆಗದ ರಸ್ತೆಗೆ ಬಿಲ್ ಮಂಜೂರು ಮಾಡಿ ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡಿದ್ದರು. ಅಲ್ಲದೇ, ₹ 11 ಸಾವಿರ ಖರ್ಚು ಮಾಡಿ ಉದ್ದೇಶಿತ ಕಾಮಗಾರಿಯ ಎರಡೂ ಸ್ಥಳಗಳಲ್ಲಿ ಕಾಮಗಾರಿಯ ಮಾಹಿತಿಯುಳ್ಳ ಫಲಕಗಳನ್ನು ಹಾಕಿಸಿದ್ದರು.</p>.<p>ಅಕ್ರಮ ಎಸಗಿ ಸಿಕ್ಕಿಬಿದ್ದಿರುವ ತಪ್ಪಿತಸ್ಥ ಅಧಿಕಾರಿಗಳು, ಗುತ್ತಿಗೆದಾರರು ಮತ್ತು ಮೂರನೇ ವ್ಯಕ್ತಿ ಸಂಸ್ಥೆಯ ರಕ್ಷಣೆಗೆ ತೆರೆಮರೆಯಲ್ಲೇ ಪ್ರಯತ್ನ ನಡೆದಿದೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>