<p><strong>ಬೆಂಗಳೂರು</strong>: ಕೋಲಾರದ ವೇಮಗಲ್ನಲ್ಲಿ ತಲೆ ಎತ್ತುತ್ತಿರುವ ಹೆಲಿಕಾಪ್ಟರ್ ನಿರ್ಮಾಣ ಘಟಕದ ವಿರುದ್ಧ ಸ್ಥಳೀಯ ಶಾಸಕ ಕೊತ್ತೂರು ಮಂಜುನಾಥ್ ಧ್ವನಿ ಎತ್ತಿರುವ ಬಗ್ಗೆ ಜೆಡಿಎಸ್ ಕಿಡಿಕಾರಿದೆ.</p><p>ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಗೇಟ್ಗೆ ಅಡ್ಡಲಾಗಿ ಹಳ್ಳ ತೋಡಿ ಎಂದು ಪ್ರಚೋದನೆ ನೀಡಿರುವ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರ ನಡೆ ಗೂಂಡಾಗಿರಿ. ಇದಕ್ಕೆ ನಮ್ಮ ದಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದೆ.</p><p>ಕರ್ನಾಟಕಕ್ಕೆ ಬರುವ ಕೈಗಾರಿಕೆಗಳನ್ನು ಉಳಿಸಿಕೊಳ್ಳುವುದು ಬಿಟ್ಟು, ಈ ರೀತಿ ಧಮ್ಕಿ , ಪ್ರಚೋದನೆ ನೀಡುತ್ತಿರುವುದು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕನಿಗೆ ಶೋಭೆ ತರುವುದಿಲ್ಲ. ಶಾಸಕ ಎಂದರೆ ಜನರ ಮತ್ತು ಸಾರ್ವಜನಿಕ ಆಸ್ತಿಯ ರಕ್ಷಕರಾಗಿರಬೇಕು ಎಂದು ಎಚ್ಚರಿಸಿದೆ.</p><p>ಅದನ್ನು ಬಿಟ್ಟು ಹೆಲಿಕಾಪ್ಟರ್ ಘಟಕಕ್ಕೆ ತೊಂದರೆ ಕೊಡುವಂತೆ ಬೆಂಕಿ ಹಚ್ಚುವ ಮಾತುಗಳನ್ನು ಆಡಿರುವ ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕನಿಂದ ಜನರ ರಕ್ಷಣೆ ಹೇಗೆ ಸಾಧ್ಯ ? ಎಂದು ಪ್ರಶ್ನಿಸಿದೆ.</p><p>ಅಭಿವೃದ್ಧಿಗೆ ಸಹಕರಿಸದೆ, ಇಂತಹ ಗೂಂಡಾ ಪ್ರವೃತ್ತಿ ತೋರಿದರೆ, ರಾಜ್ಯಕ್ಕೆ ಹೂಡಿಕೆದಾರರು ಬರುವುದಾದರೂ ಹೇಗೆ ? ಅಭಿವೃದ್ಧಿ ವಿರೋಧಿ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ಗೆ ಧಿಕ್ಕಾರ ಎಂದು ಪುನರುಚ್ಚಿರಿಸಿದೆ.</p><p>ತಮಗೆ ಶಿಷ್ಟಾಚಾರದ ಪ್ರಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಹೆಲಿಕಾಪ್ಟರ್ ನಿರ್ಮಾಣ ಘಟಕದ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ಮುನಿಸಿಕೊಂಡಿದ್ದಾರೆ.</p>.ಶಾಸಕರೇ,ಕೈಗಾರಿಕೆಗಳಿಗೆ ಧಮ್ಕಿ ಹಾಕುತ್ತೀರಾ?:ಕೊತ್ತೂರು ಮಂಜುನಾಥ್ ವಿರುದ್ಧ ಕಿಡಿ.ನಾನು ರೈತ ಪರ; ನಮಗೆ ಕೈಗಾರಿಕೆ ಬೇಕಿಲ್ಲ–ಶಾಸಕ ಕೊತ್ತೂರು ಮಂಜುನಾಥ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋಲಾರದ ವೇಮಗಲ್ನಲ್ಲಿ ತಲೆ ಎತ್ತುತ್ತಿರುವ ಹೆಲಿಕಾಪ್ಟರ್ ನಿರ್ಮಾಣ ಘಟಕದ ವಿರುದ್ಧ ಸ್ಥಳೀಯ ಶಾಸಕ ಕೊತ್ತೂರು ಮಂಜುನಾಥ್ ಧ್ವನಿ ಎತ್ತಿರುವ ಬಗ್ಗೆ ಜೆಡಿಎಸ್ ಕಿಡಿಕಾರಿದೆ.</p><p>ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಗೇಟ್ಗೆ ಅಡ್ಡಲಾಗಿ ಹಳ್ಳ ತೋಡಿ ಎಂದು ಪ್ರಚೋದನೆ ನೀಡಿರುವ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರ ನಡೆ ಗೂಂಡಾಗಿರಿ. ಇದಕ್ಕೆ ನಮ್ಮ ದಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದೆ.</p><p>ಕರ್ನಾಟಕಕ್ಕೆ ಬರುವ ಕೈಗಾರಿಕೆಗಳನ್ನು ಉಳಿಸಿಕೊಳ್ಳುವುದು ಬಿಟ್ಟು, ಈ ರೀತಿ ಧಮ್ಕಿ , ಪ್ರಚೋದನೆ ನೀಡುತ್ತಿರುವುದು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕನಿಗೆ ಶೋಭೆ ತರುವುದಿಲ್ಲ. ಶಾಸಕ ಎಂದರೆ ಜನರ ಮತ್ತು ಸಾರ್ವಜನಿಕ ಆಸ್ತಿಯ ರಕ್ಷಕರಾಗಿರಬೇಕು ಎಂದು ಎಚ್ಚರಿಸಿದೆ.</p><p>ಅದನ್ನು ಬಿಟ್ಟು ಹೆಲಿಕಾಪ್ಟರ್ ಘಟಕಕ್ಕೆ ತೊಂದರೆ ಕೊಡುವಂತೆ ಬೆಂಕಿ ಹಚ್ಚುವ ಮಾತುಗಳನ್ನು ಆಡಿರುವ ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕನಿಂದ ಜನರ ರಕ್ಷಣೆ ಹೇಗೆ ಸಾಧ್ಯ ? ಎಂದು ಪ್ರಶ್ನಿಸಿದೆ.</p><p>ಅಭಿವೃದ್ಧಿಗೆ ಸಹಕರಿಸದೆ, ಇಂತಹ ಗೂಂಡಾ ಪ್ರವೃತ್ತಿ ತೋರಿದರೆ, ರಾಜ್ಯಕ್ಕೆ ಹೂಡಿಕೆದಾರರು ಬರುವುದಾದರೂ ಹೇಗೆ ? ಅಭಿವೃದ್ಧಿ ವಿರೋಧಿ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ಗೆ ಧಿಕ್ಕಾರ ಎಂದು ಪುನರುಚ್ಚಿರಿಸಿದೆ.</p><p>ತಮಗೆ ಶಿಷ್ಟಾಚಾರದ ಪ್ರಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಹೆಲಿಕಾಪ್ಟರ್ ನಿರ್ಮಾಣ ಘಟಕದ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ಮುನಿಸಿಕೊಂಡಿದ್ದಾರೆ.</p>.ಶಾಸಕರೇ,ಕೈಗಾರಿಕೆಗಳಿಗೆ ಧಮ್ಕಿ ಹಾಕುತ್ತೀರಾ?:ಕೊತ್ತೂರು ಮಂಜುನಾಥ್ ವಿರುದ್ಧ ಕಿಡಿ.ನಾನು ರೈತ ಪರ; ನಮಗೆ ಕೈಗಾರಿಕೆ ಬೇಕಿಲ್ಲ–ಶಾಸಕ ಕೊತ್ತೂರು ಮಂಜುನಾಥ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>