<p><strong>ಕೋಲಾರ: </strong>‘ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಾದಿ ಆಸೆಗೆ ಆತುರವಾಗಿ ಕಾಂಗ್ರೆಸ್ ಜತೆ ಕೈ ಜೋಡಿಸಿದ್ದರಿಂದ ಇಂದು ಕಣ್ಣೀರು ಹಾಕುತ್ತಿದ್ದಾರೆ. ಜೆಡಿಎಸ್ ಪಕ್ಷದ ಸ್ಥಿತಿ ದಯನೀಯವಾಗಿದೆ’ ಎಂದು ಸಂಸದ ಎಸ್.ಮುನಿಸ್ವಾಮಿ ಲೇವಡಿ ಮಾಡಿದರು.</p>.<p>ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಪಕ್ಷ ದೇಶದಲ್ಲಿ ಎಲ್ಲವನ್ನೂ ಸರ್ವನಾಶ ಮಾಡಿದೆಯೇ ಹೊರತು ಉದ್ಧಾರ ಮಾಡಿರುವುದು ಏನೂ ಇಲ್ಲ’ ಎಂದು ವ್ಯಂಗ್ಯವಾಡಿದರು.</p>.<p>‘ಕುಮಾರಸ್ವಾಮಿ ಅವರು ಅಧಿಕಾರದಾಸೆಗೆ ಕಾಂಗ್ರೆಸ್ ಜತೆ ಕೈಜೋಡಿಸದೆ ಇದ್ದಿದ್ದರೆ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಕನಿಷ್ಠ 3 ಸಂಸದರ ಸ್ಥಾನ ಪಡೆಯುತ್ತಿತ್ತು. ಅವರು ಇನ್ನಾದರೂ ಎಚ್ಚೆತ್ತು ದೇಶ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ ಜತೆ ಕೈಜೋಡಿಸಬೇಕು. ಬಿಜೆಪಿ ಬೆಂಬಲಕ್ಕೆ ನಿಂತರೆ ಅವರು ಈಗಲೂ ಮುಖ್ಯಮಂತ್ರಿ ಆಗುತ್ತಾರೋ ಏನೋ’ ಎಂದರು.</p>.<p>‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿಂದಲೂ ಕುಮಾರಸ್ವಾಮಿ ಅವರಿಗೆ ಮೋಸ ಮಾಡುತ್ತಾ ಬಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಈ ಸಂಗತಿ ಕುಮಾರಸ್ವಾಮಿ ಅವರಿಗೆ ತಡವಾಗಿ ಗೊತ್ತಾಗಿದೆ. ಈ ಹಿಂದೆ ಕುಮಾರಸ್ವಾಮಿ ಬಿಜೆಪಿಗೆ ಮೋಸ ಮಾಡಿದ್ದರು. ಬಿಜೆಪಿ ಜತೆ ಗುರುತಿಸಿಕೊಂಡಿದ್ದರೆ ಅವರ ಸ್ಥಿತಿಯೇ ಬೇರೆ ಇರುತ್ತಿತ್ತು’ ಎಂದು ಹೇಳಿದರು.</p>.<p><strong>ರೈಲ್ವೆ ವರ್ಕ್ಶಾಪ್: ‘</strong>ಗ್ರಾ.ಪಂ ಚುನಾವಣೆ ಬಳಿಕ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ರೈಲ್ವೆ ವರ್ಕ್ಶಾಪ್ ಕಾಮಗಾರಿ ಆರಂಭಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ರೈಲ್ವೆ ಸಚಿವರ ಜತೆ ಚರ್ಚಿಸಲಾಗಿದೆ. ಕೋಲಾರ ಎಪಿಎಂಸಿಯಿಂದ ಬಿಹಾರಕ್ಕೆ ಟೊಮೆಟೊ ಕಳುಹಿಸಲು ಪ್ರತ್ಯೇಕ ರೈಲು ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಕಾರಣಕ್ಕೆ ಸ್ಥಗಿತಗೊಂಡಿರುವ ಸ್ಥಳೀಯ ರೈಲುಗಳ ಸಂಚಾರ ಪುನರಾರಂಭವಾಗಲಿದೆ’ ಎಂದು ವಿವರಿಸಿದರು.</p>.<p>‘ಸೋಮವಾರ (ಡಿ.7) ಬೆಳಿಗ್ಗೆ 6.30ಕ್ಕೆ ಮಾರಿಕುಪ್ಪಂ– ಬೆಂಗಳೂರು ರೈಲು ಸಂಚಾರ ಆರಂಭವಾಗುತ್ತದೆ. ಸಂಜೆ 5 ಗಂಟೆಗೆ ಬಂಗಾರಪೇಟೆಯಿಂದ ಮೈಸೂರಿಗೆ ರೈಲು ಸೇವೆ ಆರಂಭವಾಗಲಿದೆ. 2 ದಿನದ ಬಳಿಕ ಕೋಲಾರದಿಂದ ಶ್ರೀನಿವಾಸಪುರ, ಚಿಂತಾಮಣಿ ಮಾರ್ಗವಾಗಿ ಬೆಂಗಳೂರಿಗೆ ರೈಲು ಸೇವೆ ಆರಂಭಗೊಳ್ಳಲಿದೆ. ಆ ನಂತರ ಹಂತ ಹಂತವಾಗಿ ಎಲ್ಲಾ ರೈಲುಗಳ ಸಂಚಾರ ಆರಂಭವಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಾದಿ ಆಸೆಗೆ ಆತುರವಾಗಿ ಕಾಂಗ್ರೆಸ್ ಜತೆ ಕೈ ಜೋಡಿಸಿದ್ದರಿಂದ ಇಂದು ಕಣ್ಣೀರು ಹಾಕುತ್ತಿದ್ದಾರೆ. ಜೆಡಿಎಸ್ ಪಕ್ಷದ ಸ್ಥಿತಿ ದಯನೀಯವಾಗಿದೆ’ ಎಂದು ಸಂಸದ ಎಸ್.ಮುನಿಸ್ವಾಮಿ ಲೇವಡಿ ಮಾಡಿದರು.</p>.<p>ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಪಕ್ಷ ದೇಶದಲ್ಲಿ ಎಲ್ಲವನ್ನೂ ಸರ್ವನಾಶ ಮಾಡಿದೆಯೇ ಹೊರತು ಉದ್ಧಾರ ಮಾಡಿರುವುದು ಏನೂ ಇಲ್ಲ’ ಎಂದು ವ್ಯಂಗ್ಯವಾಡಿದರು.</p>.<p>‘ಕುಮಾರಸ್ವಾಮಿ ಅವರು ಅಧಿಕಾರದಾಸೆಗೆ ಕಾಂಗ್ರೆಸ್ ಜತೆ ಕೈಜೋಡಿಸದೆ ಇದ್ದಿದ್ದರೆ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಕನಿಷ್ಠ 3 ಸಂಸದರ ಸ್ಥಾನ ಪಡೆಯುತ್ತಿತ್ತು. ಅವರು ಇನ್ನಾದರೂ ಎಚ್ಚೆತ್ತು ದೇಶ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ ಜತೆ ಕೈಜೋಡಿಸಬೇಕು. ಬಿಜೆಪಿ ಬೆಂಬಲಕ್ಕೆ ನಿಂತರೆ ಅವರು ಈಗಲೂ ಮುಖ್ಯಮಂತ್ರಿ ಆಗುತ್ತಾರೋ ಏನೋ’ ಎಂದರು.</p>.<p>‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿಂದಲೂ ಕುಮಾರಸ್ವಾಮಿ ಅವರಿಗೆ ಮೋಸ ಮಾಡುತ್ತಾ ಬಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಈ ಸಂಗತಿ ಕುಮಾರಸ್ವಾಮಿ ಅವರಿಗೆ ತಡವಾಗಿ ಗೊತ್ತಾಗಿದೆ. ಈ ಹಿಂದೆ ಕುಮಾರಸ್ವಾಮಿ ಬಿಜೆಪಿಗೆ ಮೋಸ ಮಾಡಿದ್ದರು. ಬಿಜೆಪಿ ಜತೆ ಗುರುತಿಸಿಕೊಂಡಿದ್ದರೆ ಅವರ ಸ್ಥಿತಿಯೇ ಬೇರೆ ಇರುತ್ತಿತ್ತು’ ಎಂದು ಹೇಳಿದರು.</p>.<p><strong>ರೈಲ್ವೆ ವರ್ಕ್ಶಾಪ್: ‘</strong>ಗ್ರಾ.ಪಂ ಚುನಾವಣೆ ಬಳಿಕ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ರೈಲ್ವೆ ವರ್ಕ್ಶಾಪ್ ಕಾಮಗಾರಿ ಆರಂಭಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ರೈಲ್ವೆ ಸಚಿವರ ಜತೆ ಚರ್ಚಿಸಲಾಗಿದೆ. ಕೋಲಾರ ಎಪಿಎಂಸಿಯಿಂದ ಬಿಹಾರಕ್ಕೆ ಟೊಮೆಟೊ ಕಳುಹಿಸಲು ಪ್ರತ್ಯೇಕ ರೈಲು ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಕಾರಣಕ್ಕೆ ಸ್ಥಗಿತಗೊಂಡಿರುವ ಸ್ಥಳೀಯ ರೈಲುಗಳ ಸಂಚಾರ ಪುನರಾರಂಭವಾಗಲಿದೆ’ ಎಂದು ವಿವರಿಸಿದರು.</p>.<p>‘ಸೋಮವಾರ (ಡಿ.7) ಬೆಳಿಗ್ಗೆ 6.30ಕ್ಕೆ ಮಾರಿಕುಪ್ಪಂ– ಬೆಂಗಳೂರು ರೈಲು ಸಂಚಾರ ಆರಂಭವಾಗುತ್ತದೆ. ಸಂಜೆ 5 ಗಂಟೆಗೆ ಬಂಗಾರಪೇಟೆಯಿಂದ ಮೈಸೂರಿಗೆ ರೈಲು ಸೇವೆ ಆರಂಭವಾಗಲಿದೆ. 2 ದಿನದ ಬಳಿಕ ಕೋಲಾರದಿಂದ ಶ್ರೀನಿವಾಸಪುರ, ಚಿಂತಾಮಣಿ ಮಾರ್ಗವಾಗಿ ಬೆಂಗಳೂರಿಗೆ ರೈಲು ಸೇವೆ ಆರಂಭಗೊಳ್ಳಲಿದೆ. ಆ ನಂತರ ಹಂತ ಹಂತವಾಗಿ ಎಲ್ಲಾ ರೈಲುಗಳ ಸಂಚಾರ ಆರಂಭವಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>