ಪತ್ನಿಯೊಂದಿಗೆ ಹೊಲಕ್ಕೆ ಹೋಗಿದ್ದಾಗ ಕಳ್ಳರು ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾರೆ. ಚಿನ್ನದ ಸರಗಳು, ಉಂಗುರಗಳು, ಕಿವಿಯೋಲೆಗಳು ಮತ್ತು ಹೊಸ ಮನೆ ಕಟ್ಟಿಸಲು ಕೂಡಿಟ್ಟಿದ್ದ ಹಣ ಕಳವಾಗಿದೆ ಎಂದು ನಾಗರಾಜ್ ಹೇಳಿಕೆ ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.