‘ಕೆಜಿಎಫ್ ಕ್ಷೇತ್ರದಲ್ಲಿ ದ್ವಿತೀಯ ಪಿಯುಸಿ, ಐಟಿಐ, ಎಂಜಿನಿಯರಿಂಗ್ ಸೇರಿ ಮತ್ತಿತರ ವಿದ್ಯಾಭ್ಯಾಸ ಮಾಡಿರುವ ವಿದ್ಯಾವಂತ ಯುವಕ, ಯುವತಿಯರು ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದಾರೆ. ಅವರಿಗೆ ನೆರವಾಗಲು ವಿವಿಧ ಕಂಪನಿಗಳ ಆಶ್ರಯದಲ್ಲಿ ಉದ್ಯೋಗ ಮೇಳ ಹಮ್ಮಿಕೊಂಡಿದ್ದೇವೆ.ಕೊರೊನಾ ಕಾರಣ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಅಂತಹವರಿಗೆ ಉದ್ಯೋಗ ಮೇಳ ದಾರಿದೀಪವಾಗಲಿದೆ’ ಎಂದರು.