ಡಾ. ಹರ್ಷ ಕಾಂಗ್ರೆಸ್ ಪರ: ವಾರ್ತಾ ಇಲಾಖೆ ನಿರ್ದೇಶಕ ಡಾ.ಹರ್ಷ ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ದೂರು ಸಲ್ಲಿಸಿದೆ. ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕಾಗಿರುವ ಜಾಹೀರಾತು ಬಿಲ್ಗಳನ್ನು ಬಾಕಿ ಉಳಿಸಿಕೊಂಡಿರುವ ವಾರ್ತಾ ಇಲಾಖೆ, ಕಾಂಗ್ರೆಸ್ ಪರ ಪ್ರಚಾರ ಮಾಡದಿದ್ದರೆ, ಬಿಲ್ ಪಾವತಿ ಮಾಡುವುದಿಲ್ಲ ಎಂದು ಬ್ಲಾಕ್ಮೇಲ್ ಮಾಡುತ್ತಿದೆ ಎಂದು ದೂರಿನಲ್ಲಿ ಬಿಜೆಪಿ ತಿಳಿಸಿದೆ.