<p><strong>ಕೋಲಾರ:</strong> ‘ಡಿಸಿಸಿ ಬ್ಯಾಂಕ್ ವತಿಯಿಂದ ಕಾಯಕ ಹಾಗೂ ಬಡವರ ಬಂಧು ಯೋಜನೆಗಳನ್ನು ಸರ್ಮಪಕವಾಗಿ ಅನುಷ್ಟಾನಗೊಳಿಸುವ ಮೂಲಕ ಬಡವರಿಗೆ ಆರ್ಥಿಕ ಶಕ್ತಿ ತುಂಬಬೇಕು’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.</p>.<p>ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ನಡೆದ ಬ್ಯಾಂಕಿನ ನಿರ್ದೇಶರ ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ‘ಸಾಲ ನೀಡುವುದು, ವಸೂಲಿ ಮಾಡುವುದು ಸಹಜವಾಗಿದೆ. ಬ್ಯಾಂಕ್ ಇಷ್ಟಕ್ಕೆ ಸಿಮೀತವಾಗಿಲ್ಲ, ಬಡವರು ಬದುಕು ರೂಪಿಸಿಕೊಳ್ಳಲು ಅವಕಾಶ ಕಲ್ಪಿಸುತ್ತದೆ ಎಂಬ ಭಾವನೆ ಜನರಲ್ಲಿ ಮೂಡಬೇಕು’ ಎಂದರು.</p>.<p>‘ಈ ಎರಡು ಯೋಜನೆಗಳನ್ನು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಡಿಸಿಸಿ ಬ್ಯಾಂಕ್ ಮೂಲಕ ಅನುಷ್ಟಾನಗೊಳಿಸಲು ಸರ್ಕಾರ ಅವಕಾಶ ನೀಡಿದೆ. ಇದರಡಿ ಸಾಲ ನೀಡಲು ಹಣ ಕಲ್ಪಿಸಲಾಗುತ್ತದೆ. ಇದಕ್ಕೆ ಅಧಿಕಾರಿಗಳು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ರವಿ ಮಾತನಾಡಿ, ‘ಬಡವರ ಬಂಧು ಯೋಜನೆಯಡಿ ಬೀದಿಬದಿ ವ್ಯಾಪಾರಸ್ಥರಿಗೆ ₹2 ಸಾವಿರದಿಂದ ₹10 ಸಾವಿರದತನಕ ಸಾಲ ಕೊಡಬಹುದು, ಫಲಾನುಭವಿಗಳು ಸ್ಥಳೀಯ ಸಂಸ್ಥೆಯಿಂದ ಗುರುತಿನ ಚೀಟಿ ಪಡೆದುಕೊಂಡಿರಬೇಕು’ ಎಂದು ಹೇಳಿದರು.</p>.<p>‘ಕಾಯಕ ಯೋಜನೆಯಡಿ ಗುಡಿ ಕೈಗಾರಿಕೆ ಅಥವಾ ಸ್ವಯಂ ಉದ್ಯೋಗ ನಡೆಸುವವರಿಗೆ ₹5 ಲಕ್ಷದ ತನಕ ಶೂನ್ಯ ಬಡ್ಡಿದರದಲ್ಲಿ ಹಾಗೂ ಅದಕ್ಕೂ ಹೆಚ್ಚಿನ ಸಾಲ ಬೇಕಾದರೆ ವಾರ್ಷಿಕವಾಗಿ ಶೇ.4ರಷ್ಟು ಬಡ್ಡಿದರದಲ್ಲಿ ಸಾಲ ನೀಡಬಹುದು’ ಎಂದು ವಿವವರಿಸಿದರು.</p>.<p>ಜಿಲ್ಲಾ ಪಂಚಾಯಿತಿ ಯೋಜನಾ ಅಧಿಕಾರಿ ಸುಂದರೇಶ್ ಮಾತನಾಡಿ, ‘ಟೆಕ್ಸ್ಟೈಲ್ ಉದ್ಯಮ ಮಾಲೂರಿನಲ್ಲಿ ಪ್ರಾರಂಭವಾಗಿದೆ. ಇದಕ್ಕೆ ಪೂರಕವಾಗಿ ಮಹಿಳೆಯರಿಗೆ ಟೈಲರಿಂಗ್ ಉದ್ಯಮ್ಯಕ್ಕೆ ಒತ್ತು ನೀಡಲು ಸರ್ಕಾರ ₹15 ಸಾವಿರ ನೀಡಿದರೆ, ಡಿಸಿಸಿ ಬ್ಯಾಂಕ್ನಿಂದ ₹35 ಸಾವಿರದಿಂದ ₹50ಸಾವಿರದವರೆಗೆ ಸಾಲ ಸೌಲಭ್ಯ ಕಲ್ಪಿಸಿದಲ್ಲಿ ಸ್ವಾವಲಂಭಿ ಜೀವನ ನಡೆಸಲು ಅನುವು ಮಾಡಿ ಕೊಡಬಹುದು’ ಎಂದು ಸಲಹೆ ನೀಡಿದರು.</p>.<p>ಬ್ಯಾಂಕ್ ನಿರ್ದೇಶಕ ಸೋಣ್ಣೆಗೌಡ ಮಾತನಾಡಿ, ‘ಮಹಿಳೆಯರು ಕೂಲಿಗೆ ಹೋದರು ದಿನಕ್ಕೆ ₹300 ಗಳಿಸುತ್ತಾರೆ. ಯೋಜನೆಗಳ ಮೂಲಕ ಸಾಲ ನೀಡಿದರೆ ಬಂಡವಾಳ ಹಾಕಿ ಲಾಭಗಳಿಸಬಹುದು. ಇದರ ಜತೆಗೆ ಹಣಕಾಸು ನಿರ್ವಹಣೆ ಕುರಿತು ತರಬೇತಿ ನೀಡಿದರೆ ಸಾಲವೂ ಸಮರ್ಪಕವಾಗಿ ಮರುಪಾವತಿಯಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ಅಧ್ಯಕ್ಷ ಗೋವಿಂದಗೌಡ ಮಾತನಾಡಿ, ‘ಎರಡೂ ಜಿಲ್ಲೆಯಲ್ಲಿ ಮಾರ್ಚ್ ಅಂತ್ಯದೊಳಗೆ ಕನಿಷ್ಟ ತಲಾ 100 ಸಂಘ ರಚನೆ ಮಾಡಬೇಕು, ಜತೆಗೆ 100 ಸಂಘವಾದರೂ ಗಣಕೀರಣಗೊಳ್ಳಬೇಕು’ ಎಂದು ಸೂಚಿಸಿದರು.</p>.<p>‘ಮಹಿಳೆಯರು, ರೈತರು ಬ್ಯಾಂಕಿನ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ. ಬ್ಯಾಂಕ್ ಶಾಖಾ ವ್ಯವಸ್ಥಾಪಕರು ಬೀದಿಬದಿ ವ್ಯಾಪರಸ್ಥರ ದಾಖಲೆ ಪರಿಶೀಲಿಸಿ ಸ್ಥಳದಲ್ಲೇ ಶೂನ್ಯ ಬಡ್ಡಿದರದಲ್ಲಿ ₹10 ಸಾವಿರ ಮಂಜೂರು ಮಾಡಬಹುದು, ಪ್ರತಿದಿನ ವಸೂಲಿ ಮಾಡಿದರೆ ಸಾಲ ಮರುಪಾವತಿಯಾಗುತ್ತದೆ. ಇದಕ್ಕೇನು ಬಡವರು ಮೋಸ ಮಾಡುವುದಿಲ್ಲ’ ಎಂದರು.</p>.<p>ಬ್ಯಾಂಕಿನ ನಿರ್ದೇಶಕರಾದ ಹನುಮಂತರೆಡ್ಡಿ, ನಾಗಿರೆಡ್ಡಿ, ಮೋಹನ್ ರೆಡ್ಡಿ, ಗೋವಿಂದರಾಜು, ಸಹಕಾರ ಇಲಾಖೆಯ ಉಪ ನಿಬಂಧಕ ನಿಲ್ಲಪ್ಪನರ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಎಂ.ಆರ್.ಶಿವಕುಮಾರ್, ಕಲೀಂವುಲ್ಲಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಡಿಸಿಸಿ ಬ್ಯಾಂಕ್ ವತಿಯಿಂದ ಕಾಯಕ ಹಾಗೂ ಬಡವರ ಬಂಧು ಯೋಜನೆಗಳನ್ನು ಸರ್ಮಪಕವಾಗಿ ಅನುಷ್ಟಾನಗೊಳಿಸುವ ಮೂಲಕ ಬಡವರಿಗೆ ಆರ್ಥಿಕ ಶಕ್ತಿ ತುಂಬಬೇಕು’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.</p>.<p>ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ನಡೆದ ಬ್ಯಾಂಕಿನ ನಿರ್ದೇಶರ ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ‘ಸಾಲ ನೀಡುವುದು, ವಸೂಲಿ ಮಾಡುವುದು ಸಹಜವಾಗಿದೆ. ಬ್ಯಾಂಕ್ ಇಷ್ಟಕ್ಕೆ ಸಿಮೀತವಾಗಿಲ್ಲ, ಬಡವರು ಬದುಕು ರೂಪಿಸಿಕೊಳ್ಳಲು ಅವಕಾಶ ಕಲ್ಪಿಸುತ್ತದೆ ಎಂಬ ಭಾವನೆ ಜನರಲ್ಲಿ ಮೂಡಬೇಕು’ ಎಂದರು.</p>.<p>‘ಈ ಎರಡು ಯೋಜನೆಗಳನ್ನು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಡಿಸಿಸಿ ಬ್ಯಾಂಕ್ ಮೂಲಕ ಅನುಷ್ಟಾನಗೊಳಿಸಲು ಸರ್ಕಾರ ಅವಕಾಶ ನೀಡಿದೆ. ಇದರಡಿ ಸಾಲ ನೀಡಲು ಹಣ ಕಲ್ಪಿಸಲಾಗುತ್ತದೆ. ಇದಕ್ಕೆ ಅಧಿಕಾರಿಗಳು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ರವಿ ಮಾತನಾಡಿ, ‘ಬಡವರ ಬಂಧು ಯೋಜನೆಯಡಿ ಬೀದಿಬದಿ ವ್ಯಾಪಾರಸ್ಥರಿಗೆ ₹2 ಸಾವಿರದಿಂದ ₹10 ಸಾವಿರದತನಕ ಸಾಲ ಕೊಡಬಹುದು, ಫಲಾನುಭವಿಗಳು ಸ್ಥಳೀಯ ಸಂಸ್ಥೆಯಿಂದ ಗುರುತಿನ ಚೀಟಿ ಪಡೆದುಕೊಂಡಿರಬೇಕು’ ಎಂದು ಹೇಳಿದರು.</p>.<p>‘ಕಾಯಕ ಯೋಜನೆಯಡಿ ಗುಡಿ ಕೈಗಾರಿಕೆ ಅಥವಾ ಸ್ವಯಂ ಉದ್ಯೋಗ ನಡೆಸುವವರಿಗೆ ₹5 ಲಕ್ಷದ ತನಕ ಶೂನ್ಯ ಬಡ್ಡಿದರದಲ್ಲಿ ಹಾಗೂ ಅದಕ್ಕೂ ಹೆಚ್ಚಿನ ಸಾಲ ಬೇಕಾದರೆ ವಾರ್ಷಿಕವಾಗಿ ಶೇ.4ರಷ್ಟು ಬಡ್ಡಿದರದಲ್ಲಿ ಸಾಲ ನೀಡಬಹುದು’ ಎಂದು ವಿವವರಿಸಿದರು.</p>.<p>ಜಿಲ್ಲಾ ಪಂಚಾಯಿತಿ ಯೋಜನಾ ಅಧಿಕಾರಿ ಸುಂದರೇಶ್ ಮಾತನಾಡಿ, ‘ಟೆಕ್ಸ್ಟೈಲ್ ಉದ್ಯಮ ಮಾಲೂರಿನಲ್ಲಿ ಪ್ರಾರಂಭವಾಗಿದೆ. ಇದಕ್ಕೆ ಪೂರಕವಾಗಿ ಮಹಿಳೆಯರಿಗೆ ಟೈಲರಿಂಗ್ ಉದ್ಯಮ್ಯಕ್ಕೆ ಒತ್ತು ನೀಡಲು ಸರ್ಕಾರ ₹15 ಸಾವಿರ ನೀಡಿದರೆ, ಡಿಸಿಸಿ ಬ್ಯಾಂಕ್ನಿಂದ ₹35 ಸಾವಿರದಿಂದ ₹50ಸಾವಿರದವರೆಗೆ ಸಾಲ ಸೌಲಭ್ಯ ಕಲ್ಪಿಸಿದಲ್ಲಿ ಸ್ವಾವಲಂಭಿ ಜೀವನ ನಡೆಸಲು ಅನುವು ಮಾಡಿ ಕೊಡಬಹುದು’ ಎಂದು ಸಲಹೆ ನೀಡಿದರು.</p>.<p>ಬ್ಯಾಂಕ್ ನಿರ್ದೇಶಕ ಸೋಣ್ಣೆಗೌಡ ಮಾತನಾಡಿ, ‘ಮಹಿಳೆಯರು ಕೂಲಿಗೆ ಹೋದರು ದಿನಕ್ಕೆ ₹300 ಗಳಿಸುತ್ತಾರೆ. ಯೋಜನೆಗಳ ಮೂಲಕ ಸಾಲ ನೀಡಿದರೆ ಬಂಡವಾಳ ಹಾಕಿ ಲಾಭಗಳಿಸಬಹುದು. ಇದರ ಜತೆಗೆ ಹಣಕಾಸು ನಿರ್ವಹಣೆ ಕುರಿತು ತರಬೇತಿ ನೀಡಿದರೆ ಸಾಲವೂ ಸಮರ್ಪಕವಾಗಿ ಮರುಪಾವತಿಯಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ಅಧ್ಯಕ್ಷ ಗೋವಿಂದಗೌಡ ಮಾತನಾಡಿ, ‘ಎರಡೂ ಜಿಲ್ಲೆಯಲ್ಲಿ ಮಾರ್ಚ್ ಅಂತ್ಯದೊಳಗೆ ಕನಿಷ್ಟ ತಲಾ 100 ಸಂಘ ರಚನೆ ಮಾಡಬೇಕು, ಜತೆಗೆ 100 ಸಂಘವಾದರೂ ಗಣಕೀರಣಗೊಳ್ಳಬೇಕು’ ಎಂದು ಸೂಚಿಸಿದರು.</p>.<p>‘ಮಹಿಳೆಯರು, ರೈತರು ಬ್ಯಾಂಕಿನ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ. ಬ್ಯಾಂಕ್ ಶಾಖಾ ವ್ಯವಸ್ಥಾಪಕರು ಬೀದಿಬದಿ ವ್ಯಾಪರಸ್ಥರ ದಾಖಲೆ ಪರಿಶೀಲಿಸಿ ಸ್ಥಳದಲ್ಲೇ ಶೂನ್ಯ ಬಡ್ಡಿದರದಲ್ಲಿ ₹10 ಸಾವಿರ ಮಂಜೂರು ಮಾಡಬಹುದು, ಪ್ರತಿದಿನ ವಸೂಲಿ ಮಾಡಿದರೆ ಸಾಲ ಮರುಪಾವತಿಯಾಗುತ್ತದೆ. ಇದಕ್ಕೇನು ಬಡವರು ಮೋಸ ಮಾಡುವುದಿಲ್ಲ’ ಎಂದರು.</p>.<p>ಬ್ಯಾಂಕಿನ ನಿರ್ದೇಶಕರಾದ ಹನುಮಂತರೆಡ್ಡಿ, ನಾಗಿರೆಡ್ಡಿ, ಮೋಹನ್ ರೆಡ್ಡಿ, ಗೋವಿಂದರಾಜು, ಸಹಕಾರ ಇಲಾಖೆಯ ಉಪ ನಿಬಂಧಕ ನಿಲ್ಲಪ್ಪನರ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಎಂ.ಆರ್.ಶಿವಕುಮಾರ್, ಕಲೀಂವುಲ್ಲಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>