ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕದಾಸರ ಜಯಂತಿ: ಸರಳ ಆಚರಣೆ

Last Updated 1 ಡಿಸೆಂಬರ್ 2020, 12:30 IST
ಅಕ್ಷರ ಗಾತ್ರ

ಕೋಲಾರ: ‘ಸಂಘದ ವತಿಯಿಂದ ಈ ಬಾರಿ ಕನಕದಾಸರ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ’ ಎಂದು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಮುನಿಯಪ್ಪ ತಿಳಿಸಿದರು.

ಕನಕದಾಸ ಜಯಂತಿ ಆಚರಣೆ ಸಂಬಂಧ ಇಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ನಗರದ ಕನಕ ಮಂದಿರದಲ್ಲಿ ಗುರುವಾರ (ಡಿ.3) ಬೆಳಿಗ್ಗೆ 10.30ಕ್ಕೆ ವಿಶೇಷ ಪೂಜೆ ಹಾಗೂ 11 ಗಂಟೆಗೆ ಸರಳವಾಗಿ ವೇದಿಕೆ ಕಾರ್ಯಕ್ರಮ ನಡೆಸಲಾಗುತ್ತದೆ’ ಎಂದು ಹೇಳಿದರು.

‘ಕುರುಬ ಸಮಾಜದವರು ಕೋವಿಡ್ ಮಾರ್ಗಸೂಚಿಯಂತೆ ಗುರುವಾರ ಬೆಳಿಗ್ಗೆ ತಮ್ಮ ಗ್ರಾಮಗಳಲ್ಲಿ ಕನಕದಾಸರ ಜಯಂತಿ ಆಚರಿಸಿ ನಂತರ ಕನಕ ಮಂದಿರದ ಕಾರ್ಯಕ್ರಮಕ್ಕೆ ಬರಬೇಕು. ಮಾಸ್ಕ್‌ ಧರಿಸಿ ಬರುವುದು ಕಡ್ಡಾಯ. ಕಾರ್ಯಕ್ರಮದ ಸ್ಥಳದಲ್ಲಿ ಅಂತರ ಕಾಯ್ದುಕೊಂಡು ಕುಳಿತುಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಕುರುಬ ಸಮಾಜದ ಹಿಂದಿನ ಅಧ್ಯಕ್ಷರು, ಜನಪ್ರತಿನಿಧಿಗಳು, ಮುಖಂಡರು, ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT