<p><strong>ಕೋಲಾರ: ‘</strong>ಕಚೇರಿಗಳಿಗೆ ಜನರ ಅಲೆದಾಟ ತಪ್ಪಿಸಲು ಹೋಬಳಿ ಮಟ್ಟದಲ್ಲಿ ಕಂದಾಯ ಆದಾಲತ್ ನಡೆಸಬೇಕು. ಇದರಿಂದ ಗ್ರಾಮೀಣ ಜನರ ಶೇ 90ರಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸಿಗಲಿದೆ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ವೇಮಗಲ್ ಗ್ರಾಮದಲ್ಲಿ ಸೋಮವಾರ ಕಂದಾಯ ಅದಾಲತ್ನಲ್ಲಿ ಮಾತನಾಡಿ, ‘ಸಾರ್ವಜನಿಕರ ಅನುಕೂಲಕ್ಕಾಗಿ ಕಂದಾಯ ಅದಾಲತ್ ನಡೆಸಲಾಗುತ್ತಿದೆ. ಜನರು ಇದರ ಸದುಪಯೋಗ ಪಡೆಯಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಹೋಬಳಿ ಮಟ್ಟದಲ್ಲಿ ಕಂದಾಯ ಅದಾಲತ್ ನಡೆಯುತ್ತಿರುವುದರಿಂದ ಈ ಭಾಗದ ಜನರ ಸಮಸ್ಯೆಗಳಿಗೆ ಇಲ್ಲೇ ಪರಿಹಾರ ಸಿಗುತ್ತದೆ. ನ್ಯಾಯಾಲಯದಲ್ಲಿ ಇರುವ ಪ್ರಕರಣಗಳು ಮತ್ತು ಒಂದೆರಡು ದಿನದಲ್ಲಿ ಇತ್ಯರ್ಥವಾಗದ ಸಮಸ್ಯೆಗಳ ಪರಿಹಾರಕ್ಕೆ ಕಾಲಾವಕಾಶ ಬೇಕು’ ಎಂದು ವಿವರಿಸಿದರು.</p>.<p>ಹಿಂದಿನ ಅದಾಲತ್ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಪರಿಶೀಲಿಸಿ ಸಮಯಕ್ಕೆ ಸರಿಯಾಗಿ ವಿಲೇವಾರಿ ಮಾಡಿರುವುದಕ್ಕೆ ಕಂದಾಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿಯು, ‘ಮುಂದೆಯೂ ಇದೇ ರೀತಿ ಜನಪರವಾಗಿ ಕೆಲಸ ಮಾಡಿ’ ಎಂದು ಸಲಹೆ ನೀಡಿದರು.</p>.<p><strong>ವಾರದ ಗಡುವು: ‘</strong>ಅದಾಲತ್ನಲ್ಲಿ ಸಾಮಾಜಿಕ ಭದ್ರತೆ ಯೋಜನೆಯ ಎಲ್ಲಾ ಬಗೆಯ ಪಿಂಚಣಿಗಳು, ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರವೇ ಸಮಸ್ಯೆ ಪರಿಹರಿಸುತ್ತೇವೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ವಾರದೊಳಗೆ ಕಾರ್ಯರೂಪಕ್ಕೆ ತರಬೇಕು’ ಎಂದು ತಾಕೀತು ಮಾಡಿದರು.</p>.<p>‘ಅದಾಲತ್ನಲ್ಲಿ ಭಾಗವಹಿಸದಿರುವ ವ್ಯಕ್ತಿಗಳ ಮನೆ ಬಾಗಿಲಿಗೆ ಅವರ ಮನವಿಯಂತೆ ಸಂಬಂಧಿಸಿದ ದಾಖಲೆಪತ್ರಗಳನ್ನು ತಲುಪಿಸಬೇಕು. ಜನರು ಸರ್ಕಾರಿ ಸೇವೆಗಾಗಿ ಕಚೇರಿಗೆ ಅಲೆದಾಡಬಾರದು. ಎಲ್ಲರೂ ಒಟ್ಟಾಗಿ ಜನರ ಕೆಲಸ ಮಾಡೋಣ’ ಎಂದು ಗ್ರಾಮ ಲೆಕ್ಕಾಧಿಕಾರಿಗಳಿಗೆ ತಿಳಿಸಿದರು.</p>.<p><strong>ಪ್ರಮಾಣಪತ್ರ ವಿತರಣೆ:</strong> ಹಿಂದಿನ ಪವತಿ ವಾರಸ್ಸುದಾರಿಕೆ ಪಹಣಿ ಅದಾಲತ್ನಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದ 223 ಅರ್ಜಿಗಳಲ್ಲಿ 123 ಅರ್ಜಿಗಳ ದಾಖಲೆಪತ್ರಗಳ ಸರಿಯಾಗಿದ್ದ ಹಿನ್ನೆಲೆಯಲ್ಲಿ ಅದಾಲತ್ನಲ್ಲಿ ಪ್ರಮಾಣಪತ್ರ ವಿತರಿಸಲಾಯಿತು. 23 ಅರ್ಜಿಗಳ ಸಂಬಂಧ ತಕರಾರು ಇದ್ದ ಕಾರಣ ಅವುಗಳನ್ನು ಬಾಕಿ ಉಳಿಸಿಕೊಳ್ಳಲಾಯಿತು.</p>.<p>ಸಾರ್ವಜನಿಕರು, ವಿವಿಧ ಸಂಘಟೆನೆಗಳ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ವಿಧಾನ ಪರಿತಷ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್, ತಹಶೀಲ್ದಾರ್ ಶೋಭಿತಾ, ಉಪ ತಹಶೀಲ್ದಾರ್ ಹೇಮಲತಾ, ರಾಜಸ್ವ ನಿರೀಕ್ಷಕ ರಮೇಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: ‘</strong>ಕಚೇರಿಗಳಿಗೆ ಜನರ ಅಲೆದಾಟ ತಪ್ಪಿಸಲು ಹೋಬಳಿ ಮಟ್ಟದಲ್ಲಿ ಕಂದಾಯ ಆದಾಲತ್ ನಡೆಸಬೇಕು. ಇದರಿಂದ ಗ್ರಾಮೀಣ ಜನರ ಶೇ 90ರಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸಿಗಲಿದೆ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ವೇಮಗಲ್ ಗ್ರಾಮದಲ್ಲಿ ಸೋಮವಾರ ಕಂದಾಯ ಅದಾಲತ್ನಲ್ಲಿ ಮಾತನಾಡಿ, ‘ಸಾರ್ವಜನಿಕರ ಅನುಕೂಲಕ್ಕಾಗಿ ಕಂದಾಯ ಅದಾಲತ್ ನಡೆಸಲಾಗುತ್ತಿದೆ. ಜನರು ಇದರ ಸದುಪಯೋಗ ಪಡೆಯಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಹೋಬಳಿ ಮಟ್ಟದಲ್ಲಿ ಕಂದಾಯ ಅದಾಲತ್ ನಡೆಯುತ್ತಿರುವುದರಿಂದ ಈ ಭಾಗದ ಜನರ ಸಮಸ್ಯೆಗಳಿಗೆ ಇಲ್ಲೇ ಪರಿಹಾರ ಸಿಗುತ್ತದೆ. ನ್ಯಾಯಾಲಯದಲ್ಲಿ ಇರುವ ಪ್ರಕರಣಗಳು ಮತ್ತು ಒಂದೆರಡು ದಿನದಲ್ಲಿ ಇತ್ಯರ್ಥವಾಗದ ಸಮಸ್ಯೆಗಳ ಪರಿಹಾರಕ್ಕೆ ಕಾಲಾವಕಾಶ ಬೇಕು’ ಎಂದು ವಿವರಿಸಿದರು.</p>.<p>ಹಿಂದಿನ ಅದಾಲತ್ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಪರಿಶೀಲಿಸಿ ಸಮಯಕ್ಕೆ ಸರಿಯಾಗಿ ವಿಲೇವಾರಿ ಮಾಡಿರುವುದಕ್ಕೆ ಕಂದಾಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿಯು, ‘ಮುಂದೆಯೂ ಇದೇ ರೀತಿ ಜನಪರವಾಗಿ ಕೆಲಸ ಮಾಡಿ’ ಎಂದು ಸಲಹೆ ನೀಡಿದರು.</p>.<p><strong>ವಾರದ ಗಡುವು: ‘</strong>ಅದಾಲತ್ನಲ್ಲಿ ಸಾಮಾಜಿಕ ಭದ್ರತೆ ಯೋಜನೆಯ ಎಲ್ಲಾ ಬಗೆಯ ಪಿಂಚಣಿಗಳು, ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರವೇ ಸಮಸ್ಯೆ ಪರಿಹರಿಸುತ್ತೇವೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ವಾರದೊಳಗೆ ಕಾರ್ಯರೂಪಕ್ಕೆ ತರಬೇಕು’ ಎಂದು ತಾಕೀತು ಮಾಡಿದರು.</p>.<p>‘ಅದಾಲತ್ನಲ್ಲಿ ಭಾಗವಹಿಸದಿರುವ ವ್ಯಕ್ತಿಗಳ ಮನೆ ಬಾಗಿಲಿಗೆ ಅವರ ಮನವಿಯಂತೆ ಸಂಬಂಧಿಸಿದ ದಾಖಲೆಪತ್ರಗಳನ್ನು ತಲುಪಿಸಬೇಕು. ಜನರು ಸರ್ಕಾರಿ ಸೇವೆಗಾಗಿ ಕಚೇರಿಗೆ ಅಲೆದಾಡಬಾರದು. ಎಲ್ಲರೂ ಒಟ್ಟಾಗಿ ಜನರ ಕೆಲಸ ಮಾಡೋಣ’ ಎಂದು ಗ್ರಾಮ ಲೆಕ್ಕಾಧಿಕಾರಿಗಳಿಗೆ ತಿಳಿಸಿದರು.</p>.<p><strong>ಪ್ರಮಾಣಪತ್ರ ವಿತರಣೆ:</strong> ಹಿಂದಿನ ಪವತಿ ವಾರಸ್ಸುದಾರಿಕೆ ಪಹಣಿ ಅದಾಲತ್ನಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದ 223 ಅರ್ಜಿಗಳಲ್ಲಿ 123 ಅರ್ಜಿಗಳ ದಾಖಲೆಪತ್ರಗಳ ಸರಿಯಾಗಿದ್ದ ಹಿನ್ನೆಲೆಯಲ್ಲಿ ಅದಾಲತ್ನಲ್ಲಿ ಪ್ರಮಾಣಪತ್ರ ವಿತರಿಸಲಾಯಿತು. 23 ಅರ್ಜಿಗಳ ಸಂಬಂಧ ತಕರಾರು ಇದ್ದ ಕಾರಣ ಅವುಗಳನ್ನು ಬಾಕಿ ಉಳಿಸಿಕೊಳ್ಳಲಾಯಿತು.</p>.<p>ಸಾರ್ವಜನಿಕರು, ವಿವಿಧ ಸಂಘಟೆನೆಗಳ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ವಿಧಾನ ಪರಿತಷ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್, ತಹಶೀಲ್ದಾರ್ ಶೋಭಿತಾ, ಉಪ ತಹಶೀಲ್ದಾರ್ ಹೇಮಲತಾ, ರಾಜಸ್ವ ನಿರೀಕ್ಷಕ ರಮೇಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>