<p><strong>ಬಂಗಾರಪೇಟೆ:</strong> ‘ಜನರು ಸರ್ಕಾರಿ ಕಚೇರಿ ಗಳಿಗೆ ವಿನಾಕಾರಣ ಅಲೆಯುವುದನ್ನು ತಪ್ಪಿಸಿ ಒಂದೇ ಸೂರಿನಡಿ ಎಲ್ಲಾ ಕೆಲಸಗಳನ್ನು ಮಾಡಿಕೊಡುವ ಸಲುವಾಗಿ ಕಂದಾಯ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಉಪ ವಿಭಾಗಾಧಿಕಾರಿ ವಿ. ಸೋಮಶೇಖರ್ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಪಿಂಚಣಿ ಹಾಗೂ ಕಂದಾಯ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅದಾಲತ್ ಜಾರಿಯಾದ ಬಳಿಕ ರೈತರ ಬಹುತೇಕ ಸಮಸ್ಯೆಗಳು ಬಗೆಹರಿದಿವೆ. ಕೋವಿಡ್-19 ಪರಿಣಾಮ ಏಳು ತಿಂಗಳಿಂದ ಕಂದಾಯ ಅದಾಲತ್ ಹಮ್ಮಿಕೊಳ್ಳಲು ಆಗಿರಲಿಲ್ಲ ಎಂದರು.</p>.<p>ಕೇವಲ ಅರ್ಜಿ ಸ್ವೀಕರಿಸಿದರೆ ಜನರಿಗೆ ಇಲಾಖೆಯ ಮೇಲೆ ನಂಬಿಕೆ ಬರುವುದಿಲ್ಲ. ಕಾಲಮಿತಿಯಲ್ಲಿ ಇತ್ಯರ್ಥ ಮಾಡಿದರೆ ಮಾತ್ರ ಉದ್ದೇಶ ಈಡೇರಲಿದೆ. ಪೌತಿ ವಾರಾಸ, ಪೋಡಿ, ಖಾತೆ ಬದಲಾವಣೆ, ಪಹಣಿಯಲ್ಲಿ ತಿದ್ದುಪಡಿಗೆ ಸಂಬಂಧಿಸಿದಂತೆ 170 ಅರ್ಜಿ ಸಲ್ಲಿಕೆಯಾಗಿವೆ. ಕಾಲಮಿತಿಯಲ್ಲಿ ಬಗೆಹರಿಸಲಾಗುವುದು ಎಂದರು.</p>.<p>ತಹಶೀಲ್ದಾರ್ ದಯಾನಂದ್ ಮಾತನಾಡಿದರು. ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ 120 ಫಲಾನುಭವಿಗಳಿಗೆ ಸ್ಥಳದಲ್ಲೇ ಮಂಜೂರಾತಿ ಪತ್ರ ವಿತರಿಸಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶಪ್ಪ, ತಾಲ್ಲೂಕು ಆರೋಗ್ಯ ಅಧಿಕಾರಿ ಸರಸ್ವತಿ, ಅಪ್ಪಯ್ಯಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ‘ಜನರು ಸರ್ಕಾರಿ ಕಚೇರಿ ಗಳಿಗೆ ವಿನಾಕಾರಣ ಅಲೆಯುವುದನ್ನು ತಪ್ಪಿಸಿ ಒಂದೇ ಸೂರಿನಡಿ ಎಲ್ಲಾ ಕೆಲಸಗಳನ್ನು ಮಾಡಿಕೊಡುವ ಸಲುವಾಗಿ ಕಂದಾಯ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಉಪ ವಿಭಾಗಾಧಿಕಾರಿ ವಿ. ಸೋಮಶೇಖರ್ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಪಿಂಚಣಿ ಹಾಗೂ ಕಂದಾಯ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅದಾಲತ್ ಜಾರಿಯಾದ ಬಳಿಕ ರೈತರ ಬಹುತೇಕ ಸಮಸ್ಯೆಗಳು ಬಗೆಹರಿದಿವೆ. ಕೋವಿಡ್-19 ಪರಿಣಾಮ ಏಳು ತಿಂಗಳಿಂದ ಕಂದಾಯ ಅದಾಲತ್ ಹಮ್ಮಿಕೊಳ್ಳಲು ಆಗಿರಲಿಲ್ಲ ಎಂದರು.</p>.<p>ಕೇವಲ ಅರ್ಜಿ ಸ್ವೀಕರಿಸಿದರೆ ಜನರಿಗೆ ಇಲಾಖೆಯ ಮೇಲೆ ನಂಬಿಕೆ ಬರುವುದಿಲ್ಲ. ಕಾಲಮಿತಿಯಲ್ಲಿ ಇತ್ಯರ್ಥ ಮಾಡಿದರೆ ಮಾತ್ರ ಉದ್ದೇಶ ಈಡೇರಲಿದೆ. ಪೌತಿ ವಾರಾಸ, ಪೋಡಿ, ಖಾತೆ ಬದಲಾವಣೆ, ಪಹಣಿಯಲ್ಲಿ ತಿದ್ದುಪಡಿಗೆ ಸಂಬಂಧಿಸಿದಂತೆ 170 ಅರ್ಜಿ ಸಲ್ಲಿಕೆಯಾಗಿವೆ. ಕಾಲಮಿತಿಯಲ್ಲಿ ಬಗೆಹರಿಸಲಾಗುವುದು ಎಂದರು.</p>.<p>ತಹಶೀಲ್ದಾರ್ ದಯಾನಂದ್ ಮಾತನಾಡಿದರು. ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ 120 ಫಲಾನುಭವಿಗಳಿಗೆ ಸ್ಥಳದಲ್ಲೇ ಮಂಜೂರಾತಿ ಪತ್ರ ವಿತರಿಸಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶಪ್ಪ, ತಾಲ್ಲೂಕು ಆರೋಗ್ಯ ಅಧಿಕಾರಿ ಸರಸ್ವತಿ, ಅಪ್ಪಯ್ಯಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>