<p><strong>ಮುಳಬಾಗಿಲು</strong>: ನೆರೆಯ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಂತಿರುವ ತಾಲ್ಲೂಕಿನ ತಿಮ್ಮರಾವುತ್ತನಹಳ್ಳಿ ಗ್ರಾಮದ ಬಳಿಯ ಮುಖ್ಯ ರಸ್ತೆಯಲ್ಲಿ ಅಳವಡಿಸಲಾಗಿದ್ದ ಕನ್ನಡದ ಧ್ವಜಕ್ಕೆ ಅಳವಡಿಸಿದ್ದ ಸಿಮೆಂಟ್ ದಿಂಡನ್ನು ಕಿಡಿಗೇಡಿಗಳು ಧ್ವಂಸಗೊಳಿರುವ ಹಿನ್ನೆಲೆ ಧ್ವಜಸ್ತಂಭ ನೆಳಕ್ಕುರಳಿರುವ ಘಟನೆ ಸೋಮವಾರ ನಡೆದಿದೆ. </p>.<p>ಈ ಹಿಂದೆ ಇದ್ದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಮಿತಿ ತಾಲ್ಲೂಕಿನ ನಾಲ್ಕೂ ಗಡಿಗಳಲ್ಲಿ ಸಿಮೆಂಟ್ ಗೋಡೆಗಳನ್ನು ನಿರ್ಮಿಸಿ ಕನ್ನಡ ಬಾವುಟಗಳನ್ನು ನಿಲ್ಲಿಸಿದ್ದರು. ಆದರೆ, ಕಿಡಿಗೇಡಿಗಳು ಅದರಲ್ಲಿ ಒಂದನ್ನು ನಾಶಗೊಳಿಸಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಕನ್ನಡ ಪರ ಸಂಘಟನೆ ಮುಖಂಡರು ಭೇಟಿ ನೀಡಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.</p>.<p>ಮುಳಬಾಗಿಲು ಗ್ರಾಮಾಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅರುಣ್ ಗೌಡ ಪಾಟೀಲ್ ಭೇಟಿ ನೀಡಿ, ಪರಿಶೀಲಿಸಿದರು. ನಂತರ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರಸವೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ನೆರೆಯ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಂತಿರುವ ತಾಲ್ಲೂಕಿನ ತಿಮ್ಮರಾವುತ್ತನಹಳ್ಳಿ ಗ್ರಾಮದ ಬಳಿಯ ಮುಖ್ಯ ರಸ್ತೆಯಲ್ಲಿ ಅಳವಡಿಸಲಾಗಿದ್ದ ಕನ್ನಡದ ಧ್ವಜಕ್ಕೆ ಅಳವಡಿಸಿದ್ದ ಸಿಮೆಂಟ್ ದಿಂಡನ್ನು ಕಿಡಿಗೇಡಿಗಳು ಧ್ವಂಸಗೊಳಿರುವ ಹಿನ್ನೆಲೆ ಧ್ವಜಸ್ತಂಭ ನೆಳಕ್ಕುರಳಿರುವ ಘಟನೆ ಸೋಮವಾರ ನಡೆದಿದೆ. </p>.<p>ಈ ಹಿಂದೆ ಇದ್ದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಮಿತಿ ತಾಲ್ಲೂಕಿನ ನಾಲ್ಕೂ ಗಡಿಗಳಲ್ಲಿ ಸಿಮೆಂಟ್ ಗೋಡೆಗಳನ್ನು ನಿರ್ಮಿಸಿ ಕನ್ನಡ ಬಾವುಟಗಳನ್ನು ನಿಲ್ಲಿಸಿದ್ದರು. ಆದರೆ, ಕಿಡಿಗೇಡಿಗಳು ಅದರಲ್ಲಿ ಒಂದನ್ನು ನಾಶಗೊಳಿಸಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಕನ್ನಡ ಪರ ಸಂಘಟನೆ ಮುಖಂಡರು ಭೇಟಿ ನೀಡಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.</p>.<p>ಮುಳಬಾಗಿಲು ಗ್ರಾಮಾಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅರುಣ್ ಗೌಡ ಪಾಟೀಲ್ ಭೇಟಿ ನೀಡಿ, ಪರಿಶೀಲಿಸಿದರು. ನಂತರ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರಸವೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>