<p><strong>ಶ್ರೀನಿವಾಸಪುರ:</strong> ಗಡಿ ಭಾಗದ ಜನರು ಕನ್ನಡ ಭಾಷಾಭಿಮಾನ ಬೆಳೆಸಿಕೊಂಡು, ನಾಡು ನುಡಿ ಮೊದಲು ಎಂಬ ಮನೋಭಾವ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದಲ್ಲಿ ಜನ ಜಾಗೃತಿ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಗುರುವಾರ ಏರ್ಪಡಿಸಿದ್ದ ರಸಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂಗ್ಲಿಷ್ ವ್ಯಾಮೋಹ ಹಾಗೂ ಗಡಿ ಪ್ರದೇಶದ ಅನ್ಯ ಭಾಷಾ ಪ್ರೇಮ ಕನ್ನಡಕ್ಕೆ ಮುಳುವಾಗಬಾರದು ಎಂದರು.</p>.<p>ಗಡಿ ಭಾಗದ ನಾಗರಿಕರು ಕನ್ನಡ ಕಲಾವಿದರನ್ನು ಪ್ರೋತ್ಸಾಹಿಸಬೇಕು. ಕನ್ನಡ ಚಿತ್ರಗಳು ಹಾಗೂ ಧಾರಾವಾಹಿಗಳ ವೀಕ್ಷಣೆ ಮಾಡಬೇಕು. ಕನ್ನಡ ಪುಸ್ತಕಗಳು ಹಾಗೂ ಪತ್ರಿಕೆಗಳನ್ನು ಕೊಂಡು ಓದಬೇಕು. ಕನ್ನಡ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.</p>.<p>ತಾಲ್ಲೂಕಿನಲ್ಲಿ ಮೂರು ಸಾವಿರ ಎಕರೆ ವಿಸ್ತೀರ್ಣದಲ್ಲಿ ಕೈಗಾರಿಕಾ ಕ್ಷೇತ್ರ ಸ್ಥಾಪನೆಗೆ ಪ್ರಯತ್ನಿಸಲಾಗುತ್ತಿದೆ. ಮನೆ ಇಲ್ಲದ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡಲಾಗುವುದು. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.</p>.<p>ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾರೆಡ್ಡಿ, ಆರ್ಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ವೆಂಕಟಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ ನಾಡು ನುಡಿ ಮಹತ್ವ ಕುರಿತು ಮಾತನಾಡಿದರು.</p>.<p>ಬೆಳಿಗ್ಗೆ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಧ್ವಜಾರೋಹಣ ಹಾರಿಸಲಾಯಿತು. ರಸ ಸಂಜೆ ಕಾರ್ಯಕ್ರಮದದಲ್ಲಿ ವಾದ್ಯಗೋಷ್ಠಿ ನಡೆಯಿತು. ಜತೆಗೆ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಂಜುನಾಥರೆಡ್ಡಿ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವೇಣುಗೋಪಾಲರೆಡ್ಡಿ, ಮುಖಂಡರಾದ ಶ್ರೀನಾಥ್ ಬಾಬು, ಸಿ.ರವಿ, ಪೂಲ ಶಿವಾರೆಡ್ಡಿ, ಸಿ.ಮುನಿಯಪ್ಪ, ಶಂಕರರೆಡ್ಡಿ, ಸಿ.ಎನ್.ಶ್ರೀನಿನಾಸ್, ಮಧುಸೂದನ್, ಮುರಳಿ, ಬೈರೇಗೌಡ, ಶ್ರೀನಿವಾಸ್, ರಂಗಪ್ಪ, ರಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ಗಡಿ ಭಾಗದ ಜನರು ಕನ್ನಡ ಭಾಷಾಭಿಮಾನ ಬೆಳೆಸಿಕೊಂಡು, ನಾಡು ನುಡಿ ಮೊದಲು ಎಂಬ ಮನೋಭಾವ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದಲ್ಲಿ ಜನ ಜಾಗೃತಿ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಗುರುವಾರ ಏರ್ಪಡಿಸಿದ್ದ ರಸಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂಗ್ಲಿಷ್ ವ್ಯಾಮೋಹ ಹಾಗೂ ಗಡಿ ಪ್ರದೇಶದ ಅನ್ಯ ಭಾಷಾ ಪ್ರೇಮ ಕನ್ನಡಕ್ಕೆ ಮುಳುವಾಗಬಾರದು ಎಂದರು.</p>.<p>ಗಡಿ ಭಾಗದ ನಾಗರಿಕರು ಕನ್ನಡ ಕಲಾವಿದರನ್ನು ಪ್ರೋತ್ಸಾಹಿಸಬೇಕು. ಕನ್ನಡ ಚಿತ್ರಗಳು ಹಾಗೂ ಧಾರಾವಾಹಿಗಳ ವೀಕ್ಷಣೆ ಮಾಡಬೇಕು. ಕನ್ನಡ ಪುಸ್ತಕಗಳು ಹಾಗೂ ಪತ್ರಿಕೆಗಳನ್ನು ಕೊಂಡು ಓದಬೇಕು. ಕನ್ನಡ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.</p>.<p>ತಾಲ್ಲೂಕಿನಲ್ಲಿ ಮೂರು ಸಾವಿರ ಎಕರೆ ವಿಸ್ತೀರ್ಣದಲ್ಲಿ ಕೈಗಾರಿಕಾ ಕ್ಷೇತ್ರ ಸ್ಥಾಪನೆಗೆ ಪ್ರಯತ್ನಿಸಲಾಗುತ್ತಿದೆ. ಮನೆ ಇಲ್ಲದ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡಲಾಗುವುದು. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.</p>.<p>ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾರೆಡ್ಡಿ, ಆರ್ಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ವೆಂಕಟಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ ನಾಡು ನುಡಿ ಮಹತ್ವ ಕುರಿತು ಮಾತನಾಡಿದರು.</p>.<p>ಬೆಳಿಗ್ಗೆ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಧ್ವಜಾರೋಹಣ ಹಾರಿಸಲಾಯಿತು. ರಸ ಸಂಜೆ ಕಾರ್ಯಕ್ರಮದದಲ್ಲಿ ವಾದ್ಯಗೋಷ್ಠಿ ನಡೆಯಿತು. ಜತೆಗೆ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಂಜುನಾಥರೆಡ್ಡಿ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವೇಣುಗೋಪಾಲರೆಡ್ಡಿ, ಮುಖಂಡರಾದ ಶ್ರೀನಾಥ್ ಬಾಬು, ಸಿ.ರವಿ, ಪೂಲ ಶಿವಾರೆಡ್ಡಿ, ಸಿ.ಮುನಿಯಪ್ಪ, ಶಂಕರರೆಡ್ಡಿ, ಸಿ.ಎನ್.ಶ್ರೀನಿನಾಸ್, ಮಧುಸೂದನ್, ಮುರಳಿ, ಬೈರೇಗೌಡ, ಶ್ರೀನಿವಾಸ್, ರಂಗಪ್ಪ, ರಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>