<p><strong>ಬೇತಮಂಗಲ:</strong> ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡುಗೂರು ಗ್ರಾಮದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಿಸಿರುವ ಬಸ್ ತಂಗುದಾಣವು ಅನೈತಿಕ ಚಟುವಟಿಕೆಗಳ ಸ್ಥಾನವಾಗಿ ಮಾರ್ಪಟ್ಟಿದೆ.</p>.<p>ಕರಡುಗೂರು ಗ್ರಾಮದಿಂದ ಪ್ರತಿನಿತ್ಯ ಬಸ್ ಸಂಚಾರದ ಮೂಲಕ ಕ್ಯಾಸಂಬಳ್ಳಿ ಮಾರ್ಗವಾಗಿ ಕೆಜಿಎಫ್ ಹಾಗೂ ರಾಜ್ ರೋಡ್ ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ತೆರಳುವ ಜನರ ಉಪಯೋಗಕ್ಕಾಗಿ ತಂಗುದಾಣ ನಿರ್ಮಿಸಲಾಗಿದೆ. ಆದರೆ, ಈ ತಂಗುದಾಣದಲ್ಲಿ ಕೆಲವರು ಮದ್ಯಪಾನ ಮಾಡುತ್ತಾರೆ. ಹೀಗೆ ಮದ್ಯಪಾನ ಮಾಡಿದ ಬಳಿಕ ಪಾಕೆಟ್ಗಳನ್ನು ತಂಗುದಾಣದಲ್ಲೇ ಬಿಟ್ಟು ಹೋಗುತ್ತಾರೆ. ಹೀಗಾಗಿ, ಜನಸಾಮಾನ್ಯರು ಮತ್ತು ವಿದ್ಯಾರ್ಥಿಗಳುಸ ತಂಗುದಾಣದ ಒಳಗೆ ಹೋಗಲು ಹಿಂದೇಟು ಹಾಕುತ್ತಾರೆ ಎಂದು ಸ್ಥಳೀಯರು ಹೇಳುತ್ತಾರೆ. </p>.<p>ಇದರಿಂದಾಗಿ ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರು ಬಿಸಿಲಿನಲ್ಲೇ ನಿಂತು ಬಸ್ಗಳಿಗೆ ಕಾಯುವ ಅನಿವಾರ್ಯತೆ ಎದುರಾಗಿದೆ. </p>.<p>ಮಳೆಗಾಲದಲ್ಲಿ ಪ್ರಯಾಣಿಕರ ಆಶ್ರಯಕ್ಕೆ ಆಸರೆ ಆಗಬೇಕಾದ ತಂಗುದಾಣವು, ಕುಡುಕರು ಮತ್ತು ಧೂಮಪಾನ ಮಾಡುವವರಿಗೆ ಆಸರೆಯಾಗಿದೆ. ಈ ತಂಗುದಾಣವು ಸುಮಾರು ವರ್ಷಗಳಿಂದ ಇದೇ ರೀತಿ ಸಾರ್ವಜನಿಕರ ಉಪಯೋಗಕ್ಕೆ ಬಾರದೆ ಕುಡುಕರಿಗೆ ಮಾತ್ರ ಅನುಕೂಲ ಕಲ್ಪಿಸಿದೆ. ಈ ಸಂಬಂಧ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯ.</p>.<p>ತಂಗುದಾಣವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಜನಪ್ರತಿನಿಧಿಗಳು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. </p>.<div><blockquote>ತಂಗುದಾಣ ನಿರ್ಮಿಸಿ ಸುಮಾರು ವರ್ಷಗಳೇ ಆಗಿದೆ. ಸರಿಯಾಗಿ ನಿರ್ವಹಣೆ ಮಾಡದ ಕಾರಣ ಹದಗೆಟ್ಟಿದೆ. ಕಟ್ಟಡ ತೆರವುಗೊಳಿಸಿ ನೂತನ ತಂಗುದಾಣ ನಿರ್ಮಿಸಬೇಕು</blockquote><span class="attribution"> ಅಭಿಲಾಶ್ ರೆಡ್ಡಿ ಸ್ಥಳೀಯ ಯುವಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ:</strong> ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡುಗೂರು ಗ್ರಾಮದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಿಸಿರುವ ಬಸ್ ತಂಗುದಾಣವು ಅನೈತಿಕ ಚಟುವಟಿಕೆಗಳ ಸ್ಥಾನವಾಗಿ ಮಾರ್ಪಟ್ಟಿದೆ.</p>.<p>ಕರಡುಗೂರು ಗ್ರಾಮದಿಂದ ಪ್ರತಿನಿತ್ಯ ಬಸ್ ಸಂಚಾರದ ಮೂಲಕ ಕ್ಯಾಸಂಬಳ್ಳಿ ಮಾರ್ಗವಾಗಿ ಕೆಜಿಎಫ್ ಹಾಗೂ ರಾಜ್ ರೋಡ್ ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ತೆರಳುವ ಜನರ ಉಪಯೋಗಕ್ಕಾಗಿ ತಂಗುದಾಣ ನಿರ್ಮಿಸಲಾಗಿದೆ. ಆದರೆ, ಈ ತಂಗುದಾಣದಲ್ಲಿ ಕೆಲವರು ಮದ್ಯಪಾನ ಮಾಡುತ್ತಾರೆ. ಹೀಗೆ ಮದ್ಯಪಾನ ಮಾಡಿದ ಬಳಿಕ ಪಾಕೆಟ್ಗಳನ್ನು ತಂಗುದಾಣದಲ್ಲೇ ಬಿಟ್ಟು ಹೋಗುತ್ತಾರೆ. ಹೀಗಾಗಿ, ಜನಸಾಮಾನ್ಯರು ಮತ್ತು ವಿದ್ಯಾರ್ಥಿಗಳುಸ ತಂಗುದಾಣದ ಒಳಗೆ ಹೋಗಲು ಹಿಂದೇಟು ಹಾಕುತ್ತಾರೆ ಎಂದು ಸ್ಥಳೀಯರು ಹೇಳುತ್ತಾರೆ. </p>.<p>ಇದರಿಂದಾಗಿ ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರು ಬಿಸಿಲಿನಲ್ಲೇ ನಿಂತು ಬಸ್ಗಳಿಗೆ ಕಾಯುವ ಅನಿವಾರ್ಯತೆ ಎದುರಾಗಿದೆ. </p>.<p>ಮಳೆಗಾಲದಲ್ಲಿ ಪ್ರಯಾಣಿಕರ ಆಶ್ರಯಕ್ಕೆ ಆಸರೆ ಆಗಬೇಕಾದ ತಂಗುದಾಣವು, ಕುಡುಕರು ಮತ್ತು ಧೂಮಪಾನ ಮಾಡುವವರಿಗೆ ಆಸರೆಯಾಗಿದೆ. ಈ ತಂಗುದಾಣವು ಸುಮಾರು ವರ್ಷಗಳಿಂದ ಇದೇ ರೀತಿ ಸಾರ್ವಜನಿಕರ ಉಪಯೋಗಕ್ಕೆ ಬಾರದೆ ಕುಡುಕರಿಗೆ ಮಾತ್ರ ಅನುಕೂಲ ಕಲ್ಪಿಸಿದೆ. ಈ ಸಂಬಂಧ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯ.</p>.<p>ತಂಗುದಾಣವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಜನಪ್ರತಿನಿಧಿಗಳು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. </p>.<div><blockquote>ತಂಗುದಾಣ ನಿರ್ಮಿಸಿ ಸುಮಾರು ವರ್ಷಗಳೇ ಆಗಿದೆ. ಸರಿಯಾಗಿ ನಿರ್ವಹಣೆ ಮಾಡದ ಕಾರಣ ಹದಗೆಟ್ಟಿದೆ. ಕಟ್ಟಡ ತೆರವುಗೊಳಿಸಿ ನೂತನ ತಂಗುದಾಣ ನಿರ್ಮಿಸಬೇಕು</blockquote><span class="attribution"> ಅಭಿಲಾಶ್ ರೆಡ್ಡಿ ಸ್ಥಳೀಯ ಯುವಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>