<p>ಕಡರನಾಯ್ಕನಹಳ್ಳಿ: ಗ್ರಾಮದಲ್ಲಿ ಆಂಜನೇಯ ಸ್ವಾಮಿ ನೂತನ ರಥೋತ್ಸವ ಹಾಗೂ ಧರ್ಮ ಸಭಾ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಏಪ್ರಿಲ್ 3ವರೆಗೆ ನಡೆಯಲಿವೆ.</p>.<p>ಮಂಗಳವಾರ ಸಂಜೆ ಗಂಗಾ ಪೂಜೆ, ಗಣಪತಿ ಪೂಜೆ, ಪಂಚ ಕಲಶ, ನವಗ್ರಹ, ಮೃತ್ಯುಂಜಯ ಕಲಶ ಪೂಜೆಯೊಂದಿಗೆ ಆಂಜನೇಯ ಸ್ವಾಮಿ ಕಂಕಣಧಾರಣೆ ನಡೆಯಿತು.</p>.<p>ಏ. 1ರಂದು ಗಣಪತಿ ಹೋಮ, ವರ್ಣಹೋಮ, ವಾಸ್ತು ಹೋಮ, ಅಘೋರ ಹೋಮ, ರುದ್ರಹೋಮದ ನಂತರ ರಥಕ್ಕೆ ಕಳಸ ಸ್ಥಾಪನೆ ನಡೆಯಲಿದೆ. ಬಳಿಕ ಉಚ್ಚಾಯ ರಥೋತ್ಸವ ನಂತರ 11.30ಕ್ಕೆ ಧಾರ್ಮಿಕ ಮಹಾಸಭೆ ನಡೆಯಲಿದೆ.</p>.<p>ನಂದಿಗುಡಿ ವೃಷಭ ಪುರಿ ಮಹಾಸಂಸ್ಥಾನದ ಸಿದ್ದರಾಮೇಶ್ವರ ಸ್ವಾಮೀಜಿ, ದಿಂಡದಳ್ಳಿ ಮಠದ ಪಶುಪತಿ ಶಿವಾನಂದ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಹರಪೀಠದ ವಚನಾನಂದ ಸ್ವಾಮೀಜಿ, ಕನಕ ಗುರುಪೀಠದ ನಿರಂಜನಾನಂದ ಸ್ವಾಮೀಜಿ, ಗುರುಸಿದ್ಧಾಶ್ರಮದ ಯೋಗಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.</p>.<p>ಗುರುವಾರ (ಏ. 2ರಂದು) ಬ್ರಾಹ್ಮಿ ಮುಹೂರ್ತದಲ್ಲಿ ಬ್ರಹ್ಮ ರಥೋತ್ಸವ, ಬೆಳಿಗ್ಗೆ 7.45ರಿಂದ 8.45ವರೆಗೆ ಆಂಜನೇಯ ಸ್ವಾಮಿ ನೂತನ ರಥೋತ್ಸವ, ಸಂಜೆ ಭೂತನ ಸೇವೆ ನಡೆಯಲಿದೆ. ಶುಕ್ರವಾರ ಓಕಳಿಯೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನವಾಗಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-43-1590826867</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಡರನಾಯ್ಕನಹಳ್ಳಿ: ಗ್ರಾಮದಲ್ಲಿ ಆಂಜನೇಯ ಸ್ವಾಮಿ ನೂತನ ರಥೋತ್ಸವ ಹಾಗೂ ಧರ್ಮ ಸಭಾ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಏಪ್ರಿಲ್ 3ವರೆಗೆ ನಡೆಯಲಿವೆ.</p>.<p>ಮಂಗಳವಾರ ಸಂಜೆ ಗಂಗಾ ಪೂಜೆ, ಗಣಪತಿ ಪೂಜೆ, ಪಂಚ ಕಲಶ, ನವಗ್ರಹ, ಮೃತ್ಯುಂಜಯ ಕಲಶ ಪೂಜೆಯೊಂದಿಗೆ ಆಂಜನೇಯ ಸ್ವಾಮಿ ಕಂಕಣಧಾರಣೆ ನಡೆಯಿತು.</p>.<p>ಏ. 1ರಂದು ಗಣಪತಿ ಹೋಮ, ವರ್ಣಹೋಮ, ವಾಸ್ತು ಹೋಮ, ಅಘೋರ ಹೋಮ, ರುದ್ರಹೋಮದ ನಂತರ ರಥಕ್ಕೆ ಕಳಸ ಸ್ಥಾಪನೆ ನಡೆಯಲಿದೆ. ಬಳಿಕ ಉಚ್ಚಾಯ ರಥೋತ್ಸವ ನಂತರ 11.30ಕ್ಕೆ ಧಾರ್ಮಿಕ ಮಹಾಸಭೆ ನಡೆಯಲಿದೆ.</p>.<p>ನಂದಿಗುಡಿ ವೃಷಭ ಪುರಿ ಮಹಾಸಂಸ್ಥಾನದ ಸಿದ್ದರಾಮೇಶ್ವರ ಸ್ವಾಮೀಜಿ, ದಿಂಡದಳ್ಳಿ ಮಠದ ಪಶುಪತಿ ಶಿವಾನಂದ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಹರಪೀಠದ ವಚನಾನಂದ ಸ್ವಾಮೀಜಿ, ಕನಕ ಗುರುಪೀಠದ ನಿರಂಜನಾನಂದ ಸ್ವಾಮೀಜಿ, ಗುರುಸಿದ್ಧಾಶ್ರಮದ ಯೋಗಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.</p>.<p>ಗುರುವಾರ (ಏ. 2ರಂದು) ಬ್ರಾಹ್ಮಿ ಮುಹೂರ್ತದಲ್ಲಿ ಬ್ರಹ್ಮ ರಥೋತ್ಸವ, ಬೆಳಿಗ್ಗೆ 7.45ರಿಂದ 8.45ವರೆಗೆ ಆಂಜನೇಯ ಸ್ವಾಮಿ ನೂತನ ರಥೋತ್ಸವ, ಸಂಜೆ ಭೂತನ ಸೇವೆ ನಡೆಯಲಿದೆ. ಶುಕ್ರವಾರ ಓಕಳಿಯೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನವಾಗಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-43-1590826867</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>