<p><strong>ಮಾಲೂರು:</strong> ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಒತ್ತಾಯಿಸಿ ಪಟ್ಟಣದ ಮಾರಿಕಾಂಭ ವೃತ್ತದಲ್ಲಿ ಕರವೇ (ಪ್ರವೀಣ್ ಕುಮಾರ್ ಶೆಟ್ಟಿ) ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಬಳಿಕ ಯತ್ನಾಳ್ ಅವರ ಭೂತದಹನ ಮಾಡಿದರು.</p>.<p>ಕರವೇ ತಾಲ್ಲೂಕು ಅಧ್ಯಕ್ಷ ಶಿವಾರ ನಾರಾಯಣಸ್ವಾಮಿ ಮಾತನಾಡಿ, ಯತ್ನಾಳ್ ಅವರು ಕರ್ನಾಟಕ ಬಂದ್ ಮಾಡುವುದರ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಕನ್ನಡಪರ ಸಂಘಟನೆಗಳ ಹೋರಾಟಗಾರರನ್ನು ಕೆಣಕಿದ್ದಾರೆ ಎಂದು ದೂರಿದರು.</p>.<p>50 ವರ್ಷಗಳಿಂದ ನಾಡು-ನುಡಿ, ಗಡಿ, ಭಾಷೆಗೆ ಕುತ್ತು ಬಂದಾಗ ಕನ್ನಡಪರ ಸಂಘಟನೆಗಳು ಧ್ವನಿ ಎತ್ತಿವೆ. ಆದರೆ, ರೋಲ್ಕಾಲ್ ಹೋರಾಟಗಾರರು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಕನ್ನಡ ವಿರೋಧಿ ಶಾಸಕರಿಗೆ ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಿರಿ ನೀಡಬಾರದು ಎಂದು ಆಗ್ರಹಿಸಿದರು.</p>.<p>ಕೂಡಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕನ್ನಡ ಪರ ಹೋರಾಟಗಾರರ ಕ್ಷಮೆ ಕೇಳಬೇಕು. ಇಲ್ಲವಾದರೆ ಇಡೀ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.</p>.<p>ಕರವೇ ಜಿಲ್ಲಾ ಉಪಾಧ್ಯಕ್ಷ ಕೋಪ್ಪ ಚಂದ್ರು, ಪಾಪರೆಡ್ಡಿ, ಎ.ಎನ್. ದಯಾನಂದ್, ಮಣಿಗಂಡನ್, ದಾಕ್ಷಾಯಿಣಿ, ಐರನ್ ಅಮರ್, ನಾರಾಯಣಸ್ವಾಮಿ, ಆನಂದ್, ಗೋಪಿ, ಮಂಜುನಾಥ್, ನರೇಶ್, ಚಲಪತಿ, ಮಿಥುನ್, ಸುರೇಶ್ ರೆಡ್ಡಿ, ರಮೇಶ್, ಷಣ್ಮುಗಂ, ಸುಂದರೇಶ್ ಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಒತ್ತಾಯಿಸಿ ಪಟ್ಟಣದ ಮಾರಿಕಾಂಭ ವೃತ್ತದಲ್ಲಿ ಕರವೇ (ಪ್ರವೀಣ್ ಕುಮಾರ್ ಶೆಟ್ಟಿ) ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಬಳಿಕ ಯತ್ನಾಳ್ ಅವರ ಭೂತದಹನ ಮಾಡಿದರು.</p>.<p>ಕರವೇ ತಾಲ್ಲೂಕು ಅಧ್ಯಕ್ಷ ಶಿವಾರ ನಾರಾಯಣಸ್ವಾಮಿ ಮಾತನಾಡಿ, ಯತ್ನಾಳ್ ಅವರು ಕರ್ನಾಟಕ ಬಂದ್ ಮಾಡುವುದರ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಕನ್ನಡಪರ ಸಂಘಟನೆಗಳ ಹೋರಾಟಗಾರರನ್ನು ಕೆಣಕಿದ್ದಾರೆ ಎಂದು ದೂರಿದರು.</p>.<p>50 ವರ್ಷಗಳಿಂದ ನಾಡು-ನುಡಿ, ಗಡಿ, ಭಾಷೆಗೆ ಕುತ್ತು ಬಂದಾಗ ಕನ್ನಡಪರ ಸಂಘಟನೆಗಳು ಧ್ವನಿ ಎತ್ತಿವೆ. ಆದರೆ, ರೋಲ್ಕಾಲ್ ಹೋರಾಟಗಾರರು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಕನ್ನಡ ವಿರೋಧಿ ಶಾಸಕರಿಗೆ ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಿರಿ ನೀಡಬಾರದು ಎಂದು ಆಗ್ರಹಿಸಿದರು.</p>.<p>ಕೂಡಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕನ್ನಡ ಪರ ಹೋರಾಟಗಾರರ ಕ್ಷಮೆ ಕೇಳಬೇಕು. ಇಲ್ಲವಾದರೆ ಇಡೀ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.</p>.<p>ಕರವೇ ಜಿಲ್ಲಾ ಉಪಾಧ್ಯಕ್ಷ ಕೋಪ್ಪ ಚಂದ್ರು, ಪಾಪರೆಡ್ಡಿ, ಎ.ಎನ್. ದಯಾನಂದ್, ಮಣಿಗಂಡನ್, ದಾಕ್ಷಾಯಿಣಿ, ಐರನ್ ಅಮರ್, ನಾರಾಯಣಸ್ವಾಮಿ, ಆನಂದ್, ಗೋಪಿ, ಮಂಜುನಾಥ್, ನರೇಶ್, ಚಲಪತಿ, ಮಿಥುನ್, ಸುರೇಶ್ ರೆಡ್ಡಿ, ರಮೇಶ್, ಷಣ್ಮುಗಂ, ಸುಂದರೇಶ್ ಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>