ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯತ್ನಾಳ್‌ ಹೇಳಿಕೆ ಖಂಡಿಸಿ ಪ್ರತಿಭಟನೆ

Last Updated 23 ನವೆಂಬರ್ 2020, 4:37 IST
ಅಕ್ಷರ ಗಾತ್ರ

ಮಾಲೂರು: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಒತ್ತಾಯಿಸಿ ಪಟ್ಟಣದ ಮಾರಿಕಾಂಭ ವೃತ್ತದಲ್ಲಿ ಕರವೇ (ಪ್ರವೀಣ್ ಕುಮಾರ್ ಶೆಟ್ಟಿ) ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಬಳಿಕ ಯತ್ನಾಳ್‌ ಅವರ ಭೂತದಹನ ಮಾಡಿದರು.

ಕರವೇ ತಾಲ್ಲೂಕು ಅಧ್ಯಕ್ಷ ಶಿವಾರ ನಾರಾಯಣಸ್ವಾಮಿ ಮಾತನಾಡಿ, ಯತ್ನಾಳ್ ಅವರು ಕರ್ನಾಟಕ ಬಂದ್ ಮಾಡುವುದರ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಕನ್ನಡಪರ ಸಂಘಟನೆಗಳ ಹೋರಾಟಗಾರರನ್ನು ಕೆಣಕಿದ್ದಾರೆ ಎಂದು ದೂರಿದರು.

50 ವರ್ಷಗಳಿಂದ ನಾಡು-ನುಡಿ, ಗಡಿ, ಭಾಷೆಗೆ ಕುತ್ತು ಬಂದಾಗ ಕನ್ನಡಪರ ಸಂಘಟನೆಗಳು ಧ್ವನಿ ಎತ್ತಿವೆ. ಆದರೆ, ರೋಲ್‌ಕಾಲ್‌ ಹೋರಾಟಗಾರರು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಕನ್ನಡ ವಿರೋಧಿ ಶಾಸಕರಿಗೆ ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಿರಿ ನೀಡಬಾರದು ಎಂದು ಆಗ್ರಹಿಸಿದರು.

ಕೂಡಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕನ್ನಡ ಪರ ಹೋರಾಟಗಾರರ ಕ್ಷಮೆ ಕೇಳಬೇಕು. ಇಲ್ಲವಾದರೆ ಇಡೀ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಕರವೇ ಜಿಲ್ಲಾ ಉಪಾಧ್ಯಕ್ಷ ಕೋಪ್ಪ ಚಂದ್ರು, ಪಾಪರೆಡ್ಡಿ, ಎ.ಎನ್. ದಯಾನಂದ್, ಮಣಿಗಂಡನ್, ದಾಕ್ಷಾಯಿಣಿ, ಐರನ್ ಅಮರ್, ನಾರಾಯಣಸ್ವಾಮಿ, ಆನಂದ್, ಗೋಪಿ, ಮಂಜುನಾಥ್, ನರೇಶ್, ಚಲಪತಿ, ಮಿಥುನ್, ಸುರೇಶ್ ರೆಡ್ಡಿ, ರಮೇಶ್, ಷಣ್ಮುಗಂ, ಸುಂದರೇಶ್ ಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT