ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಅನ್ವರ್ ಪಾಷ, ‘ಇದುವರೆಗೆ ಕ್ಷೇತ್ರದಲ್ಲಿ ವಿವಿಧ ಪಕ್ಷಗಳು, ಖಾಸಗಿ ಏಜೆನ್ಸಿಗಳು ನಡೆಸಿದ ನಾಲ್ಕು ಸಮೀಕ್ಷೆಗಳೂ ಸಿದ್ದರಾಮಯ್ಯ ಪರವಾಗಿವೆ. ಹೀಗಾಗಿ, ಅವರು ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು. ಈ ವಿಚಾರವಾಗಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಅವರಿಗೂ ಒತ್ತಾಯಿಸುತ್ತೇವೆ’ ಎಂದರು.