<p><strong>ಕೋಲಾರ</strong>: ‘ಪ್ರಧಾನಿ ನರೇಂದ್ರ ಮೋದಿ ಉಪವಾಸವಿದ್ದರೋ ಇಲ್ಲವೋ ಎಂಬುದನ್ನು ಯಾರಾದರೂ ನೋಡಿದ್ದಾರೆಯೇ? ಸುಮ್ಮನೇ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್, ಸ್ವಪಕ್ಷೀಯ ಮುಖಂಡರಿಗೆ ತಿರುಗೇಟು ನೀಡಿದರು.</p><p>ವೇಮಗಲ್ನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಮ್ಮ ಕೆಲಸವೇನು? ಏನು ಅಭಿವೃದ್ಧಿ ಮಾಡಬೇಕು? ಜನರ ಪಾಡೇನು ಎಂಬುದರ ಕಡೆ ಗಮನ ಕೊಡುವುದನ್ನು ಬಿಟ್ಟು ಅವರಿವರ ಬಗ್ಗೆ ಮಾತನಾಡಿಕೊಂಡಿದ್ದರೆ ಹೇಗೆ’ ಎಂದು ಪ್ರಶ್ನಿಸಿದರು.</p><p>‘ಏನು ಅಭಿವೃದ್ಧಿ ಕೆಲಸ ಮಾಡಿದ್ದೀರಿ? ತಾವು ಏನೇನು ಆಗಿದ್ದಾಗ ಏನೇನು ಕೆಲಸ ಮಾಡಿದ್ದೀರಿ ಎಂಬುದನ್ನು ತೋರಿಸಿ’ ಎಂದರು.</p><p>‘ನಾನೂ ₹ 2.5 ಕೋಟಿ ನೀಡಿ ರಾಮನ ದೇಗುಲ ನಿರ್ಮಿಸಿದ್ದೇನೆ. ಅದರಿಂದ ನಮ್ಮ ಊರಿನಲ್ಲಿ ಏನಾದರೂ ಬದಲಾವಣೆ ಆಗುತ್ತದೆಯೇ? ಈಗ ಯಾರ ಮಾತನ್ನೂ ಯಾರೂ ಕೇಳುವುದಿಲ್ಲ. ಯಾರಿಗೆ ಮತ ಚಲಾಯಿಸಬೇಕು ಎಂಬುದನ್ನೂ ಜನರೇ ನಿರ್ಧರಿಸುತ್ತಾರೆ’ ಎಂದು ಹೇಳಿದರು.</p>.ರಾಮಮಂದಿರ ಒಂದು ಪಕ್ಷದ ಸ್ವತ್ತಲ್ಲ: ಶಾಸಕ ಕೊತ್ತೂರು ಮಂಜುನಾಥ್.ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ: ಶಾಸಕ ಕೊತ್ತೂರು ಮಂಜುನಾಥ್.ಸ್ವಪಕ್ಷೀಯರ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್.ಅಧಿಕಾರಿಗಳ ತಂಟೆಗೆ ಬಂದರೆ ಸುಮ್ಮನಿರಲ್ಲ: ಮುನಿಸ್ವಾಮಿಗೆ ಕೊತ್ತೂರು ಮಂಜುನಾಥ್.ಸುಳ್ಳು ಜಾತಿ ಪ್ರಮಾಣಪತ್ರ: ಕಾಂಗ್ರೆಸ್ ಶಾಸಕ ಮಂಜುನಾಥ್ ವಿರುದ್ಧ ಕ್ರಮಕ್ಕೆಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಪ್ರಧಾನಿ ನರೇಂದ್ರ ಮೋದಿ ಉಪವಾಸವಿದ್ದರೋ ಇಲ್ಲವೋ ಎಂಬುದನ್ನು ಯಾರಾದರೂ ನೋಡಿದ್ದಾರೆಯೇ? ಸುಮ್ಮನೇ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್, ಸ್ವಪಕ್ಷೀಯ ಮುಖಂಡರಿಗೆ ತಿರುಗೇಟು ನೀಡಿದರು.</p><p>ವೇಮಗಲ್ನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಮ್ಮ ಕೆಲಸವೇನು? ಏನು ಅಭಿವೃದ್ಧಿ ಮಾಡಬೇಕು? ಜನರ ಪಾಡೇನು ಎಂಬುದರ ಕಡೆ ಗಮನ ಕೊಡುವುದನ್ನು ಬಿಟ್ಟು ಅವರಿವರ ಬಗ್ಗೆ ಮಾತನಾಡಿಕೊಂಡಿದ್ದರೆ ಹೇಗೆ’ ಎಂದು ಪ್ರಶ್ನಿಸಿದರು.</p><p>‘ಏನು ಅಭಿವೃದ್ಧಿ ಕೆಲಸ ಮಾಡಿದ್ದೀರಿ? ತಾವು ಏನೇನು ಆಗಿದ್ದಾಗ ಏನೇನು ಕೆಲಸ ಮಾಡಿದ್ದೀರಿ ಎಂಬುದನ್ನು ತೋರಿಸಿ’ ಎಂದರು.</p><p>‘ನಾನೂ ₹ 2.5 ಕೋಟಿ ನೀಡಿ ರಾಮನ ದೇಗುಲ ನಿರ್ಮಿಸಿದ್ದೇನೆ. ಅದರಿಂದ ನಮ್ಮ ಊರಿನಲ್ಲಿ ಏನಾದರೂ ಬದಲಾವಣೆ ಆಗುತ್ತದೆಯೇ? ಈಗ ಯಾರ ಮಾತನ್ನೂ ಯಾರೂ ಕೇಳುವುದಿಲ್ಲ. ಯಾರಿಗೆ ಮತ ಚಲಾಯಿಸಬೇಕು ಎಂಬುದನ್ನೂ ಜನರೇ ನಿರ್ಧರಿಸುತ್ತಾರೆ’ ಎಂದು ಹೇಳಿದರು.</p>.ರಾಮಮಂದಿರ ಒಂದು ಪಕ್ಷದ ಸ್ವತ್ತಲ್ಲ: ಶಾಸಕ ಕೊತ್ತೂರು ಮಂಜುನಾಥ್.ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ: ಶಾಸಕ ಕೊತ್ತೂರು ಮಂಜುನಾಥ್.ಸ್ವಪಕ್ಷೀಯರ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್.ಅಧಿಕಾರಿಗಳ ತಂಟೆಗೆ ಬಂದರೆ ಸುಮ್ಮನಿರಲ್ಲ: ಮುನಿಸ್ವಾಮಿಗೆ ಕೊತ್ತೂರು ಮಂಜುನಾಥ್.ಸುಳ್ಳು ಜಾತಿ ಪ್ರಮಾಣಪತ್ರ: ಕಾಂಗ್ರೆಸ್ ಶಾಸಕ ಮಂಜುನಾಥ್ ವಿರುದ್ಧ ಕ್ರಮಕ್ಕೆಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>