<p><strong>ಕೋಲಾರ:</strong> ‘ಭ್ರಷ್ಟಾಚಾರ ಹಾಗೂ ಅಧಿಕಾರ ದುರ್ಬಳಿಕೆ ಆರೋಪ ಎದುರಿಸುತ್ತಿರುವ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸಚಿವ ಸ್ಥಾನಕ್ಕೆ ಲಾಬಿ ಮಾಡುತ್ತಿದ್ದು, ಅವರಿಗೆ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ನೀಡಬಾರದು’ ಎಂದು ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಒತ್ತಾಯಿಸಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ ಆಡಳಿತರೂಢ ಸರ್ಕಾರಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕಳಂಕ ಉಂಟಾಗಲಿದೆ’ ಎಂದರು.</p>.<p>‘ನಾರಾಯಣಸ್ವಾಮಿ ಅವರ ಪ್ರತಿ ಹಗರಣದ ದಾಖಲೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕ ಆರ್.ಆಶೋಕ ಅವರಿಗೆ ನೀಡುತ್ತೇನೆ’ ಎಂದು ಹೇಳಿದರು.</p>.<p>‘ಸರ್ಕಾರಿ ಭೂಮಿ ಒತ್ತುವರಿ ಸೇರಿದಂತೆ ನಾರಾಯಣಸ್ವಾಮಿ ಮೇಲೆ ಹಲವಾರು ಗಂಭೀರ ಆರೋಪಗಳಿದೆ. ಅಧಿಕಾರ ದುರ್ಬಳಿಕೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಲೋಕಾಯುಕ್ತದಲ್ಲೂ ಪ್ರಕರಣವಿದೆ’ ಎಂದು ಆರೋಪಿಸಿದರು.</p>.<p>‘ನಾರಾಯಣಸ್ವಾಮಿ ಅವರಿಗೂ ನನಗೂ ಯಾವುದೇ ವೈಯುಕ್ತಿಕ ದ್ವೇಷ ಇಲ್ಲ. ನಾನು ಸಾಮಾಜಿಕ ಕಾರ್ಯಕರ್ತನಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವೇ ಹೊರತಾಗಿ ಬೇರೆ ಯಾವುದೇ ದುರುದ್ದೇಶವಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಕಾರ್ಯಕರ್ತರಾದ ರತ್ನಕುಮಾರ್, ಎಸ್.ಚಿನ್ನ, ಅಪ್ರೋಸ್ ಪಾಷ, ಎಂ.ವೇಣುಗೋಪಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಭ್ರಷ್ಟಾಚಾರ ಹಾಗೂ ಅಧಿಕಾರ ದುರ್ಬಳಿಕೆ ಆರೋಪ ಎದುರಿಸುತ್ತಿರುವ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸಚಿವ ಸ್ಥಾನಕ್ಕೆ ಲಾಬಿ ಮಾಡುತ್ತಿದ್ದು, ಅವರಿಗೆ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ನೀಡಬಾರದು’ ಎಂದು ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಒತ್ತಾಯಿಸಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ ಆಡಳಿತರೂಢ ಸರ್ಕಾರಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕಳಂಕ ಉಂಟಾಗಲಿದೆ’ ಎಂದರು.</p>.<p>‘ನಾರಾಯಣಸ್ವಾಮಿ ಅವರ ಪ್ರತಿ ಹಗರಣದ ದಾಖಲೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕ ಆರ್.ಆಶೋಕ ಅವರಿಗೆ ನೀಡುತ್ತೇನೆ’ ಎಂದು ಹೇಳಿದರು.</p>.<p>‘ಸರ್ಕಾರಿ ಭೂಮಿ ಒತ್ತುವರಿ ಸೇರಿದಂತೆ ನಾರಾಯಣಸ್ವಾಮಿ ಮೇಲೆ ಹಲವಾರು ಗಂಭೀರ ಆರೋಪಗಳಿದೆ. ಅಧಿಕಾರ ದುರ್ಬಳಿಕೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಲೋಕಾಯುಕ್ತದಲ್ಲೂ ಪ್ರಕರಣವಿದೆ’ ಎಂದು ಆರೋಪಿಸಿದರು.</p>.<p>‘ನಾರಾಯಣಸ್ವಾಮಿ ಅವರಿಗೂ ನನಗೂ ಯಾವುದೇ ವೈಯುಕ್ತಿಕ ದ್ವೇಷ ಇಲ್ಲ. ನಾನು ಸಾಮಾಜಿಕ ಕಾರ್ಯಕರ್ತನಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವೇ ಹೊರತಾಗಿ ಬೇರೆ ಯಾವುದೇ ದುರುದ್ದೇಶವಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಕಾರ್ಯಕರ್ತರಾದ ರತ್ನಕುಮಾರ್, ಎಸ್.ಚಿನ್ನ, ಅಪ್ರೋಸ್ ಪಾಷ, ಎಂ.ವೇಣುಗೋಪಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>