‘ಯೋಜನೆಯಿಂದ ಈ ಹಿಂದೆ ಜಿಲ್ಲೆಗೆ 250 ಎಂಎಲ್ಡಿ ನೀರು ಪಂಪ್ ಮಾಡಲಾಗುತ್ತಿತ್ತು. ಇದೀಗ 290 ಎಂಎಲ್ಡಿ ನೀರು ಪಂಪ್ ಮಾಡಲಾಗುತ್ತಿದೆ. ಹೆಚ್ಚುವರಿಯಾಗಿ ಪಂಪ್ ಮಾಡುತ್ತಿರುವ ನೀರಿನಲ್ಲಿ 10 ಎಂಎಲ್ಡಿ ನೀರನ್ನು ಹೊಸಕೋಟೆ ವ್ಯಾಪ್ತಿಯ ಕೆರೆಗಳನ್ನು ತುಂಬಿಸಲು ಬಳಸಿಕೊಳ್ಳಲಾಗುತ್ತದೆ. ಈ ಎರಡೂ ಮಾರ್ಗಗಳಿಗೆ ನೀರು ಸರಬರಾಜು ಆರಂಭವಾಗಿದ್ದು, ಮುಖ್ಯ ಮಾರ್ಗದಲ್ಲಿ (ನರಸಾಪುರ, ಎಸ್.ಅಗ್ರಹಾರ, ಜನಘಟ್ಟ, ಬಂಗಾರಪೇಟೆ) 10 ಎಂಎಲ್ಡಿ ಹೆಚ್ಚುವರಿ ನೀರು ಹರಿಸಲಾಗುತ್ತಿದೆ’ ಎಂದು ಹೇಳಿದರು.