ಕೆ.ಸಿ ವ್ಯಾಲಿ ಯೋಜನೆ ನೀರನ್ನು ಸದ್ಯ ಎರಡು ಹಂತದಲ್ಲಿ ಸಂಸ್ಕರಿಸಲಾಗುತ್ತಿದ್ದು, ಈ ನೀರು ಕುಡಿಯಲು ಮತ್ತು ಗೃಹ ಬಳಕೆಗೆ ಯೋಗ್ಯವಲ್ಲ ಎಂದು ಸಂಶೋಧನಾಲಯಗಳು ವರದಿ ನೀಡಿವೆ. ಇಂತಹ ಸಂದರ್ಭದಲ್ಲಿ ಎರಡೂ ಕೆರೆಗಳಿಗೆ ಕೆ.ಸಿ ವ್ಯಾಲಿ ನೀರು ಹರಿಸಿದರೆ ಅಂತರ್ಜಲ ಕಲುಷಿತಗೊಂಡು ಭವಿಷ್ಯದಲ್ಲಿ ಸಮಸ್ಯೆಯಾಗುತ್ತದೆ. ನಗರವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತದೆ ಎಂದು ಹೇಳಿದ್ದಾರೆ.