ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ತಿಂಗಳ ಬಳಿಕ ಪ್ರಚಾರಕ್ಕೆ ಸೋನಿಯಾ

ಪಕ್ಷಕ್ಕೆ ಹೆಚ್ಚಿನ ಉತ್ತೇಜನ– ಕೆಪಿಸಿಸಿ ವಿಶ್ವಾಸ
Last Updated 7 ಮೇ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಇಪ್ಪತ್ತು ತಿಂಗಳ ಸುದೀರ್ಘ ಬಿಡುವಿನ ಬಳಿಕ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕೆ ಇಳಿಯುತ್ತಿದ್ದಾರೆ.

ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮಂಗಳವಾರ ಸೋನಿಯಾ ಪ್ರಚಾರ ಕೈಗೊಳ್ಳಲಿದ್ದು, ಅವರ ಪುತ್ರ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ದಕ್ಷಿಣ ಕರ್ನಾಟಕ ಮತ್ತು ಬೆಂಗಳೂರಿನ ವಿವಿಧ ಕಡೆ ಪ್ರಚಾರ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

ಸೋನಿಯಾ ಅವರು ವಿಜಯಪುರದಲ್ಲಿ ಚುನಾವಣಾ ಸಮಾವೇಶದಲ್ಲಿ ಮಂಗಳವಾರ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ, ಈ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT