<p><strong>ಕೋಲಾರ</strong>: ‘ಯುವಕರು ಶಿಕ್ಷಣ ಪಡೆದುಕೊಂಡಾಗ ಮಾತ್ರ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂಬುದನ್ನು ಸ್ವಾಮಿ ವಿವೇಕಾನಂದರ ಉದ್ದೇಶವಾಗಿದ್ದು, ಅದನ್ನು ಈಡೇರಿಸುವ ನಿಟ್ಟಿನಲ್ಲಿ ಯುವಕರು ಮುಂದಾಗಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಸಲಹೆ ನೀಡಿದರು.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 157ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ವಿದ್ಯಾರ್ಥಿಗಳು ವಿವೇಕಾನಂದರ ತತ್ವ ಆದರ್ಶಗಳನ್ನು ಮೈಗೂಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು’ ಎಂದರು.</p>.<p>‘ಹಿಂದೆ ರಾಮಕೃಷ್ಣ ಉಡುಪ ಪ್ರಾಂಶುಪಾಲರಾಗಿದ್ದಾಗ ಕಾಲೇಜು ಫಲಿತಾಂಶದಲ್ಲಿ ಪ್ರಥಮ ಸ್ಥಾನದಲ್ಲಿತ್ತು, ಬದಲಾದ ಪರಿಸ್ಥಿತಿಯಿಂದ ಫಲಿತಾಂಶ ಹಿಂದೆ ಉಳಿದಿದೆ. ಪ್ರಾಧ್ಯಪಕರು ಜವಾಬ್ದಾರಿ ಅರಿತು ಕೆಲಸ ಮಾಡಿ ಫಲಿತಾಂಶವನ್ನು ಉತ್ತಮಪಡಿಸಬೇಕು’ ಎಂದು ಸೂಚಿಸಿದರು.</p>.<p>‘ಇಲ್ಲಿನ ವ್ಯಾಸಂಗ ಮಾಡಿದವರು ರಾಜಕೀಯವಾಗಿ, ವಿವಿಧ ಕ್ಷೇತ್ರದಲ್ಲಿ ಉನ್ನತ ಸ್ಥಾನದಲ್ಲಿ ಅನೇಕ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸಾಧನೆಯನ್ನು ಸ್ಪೂರ್ತಿಯಾಗಿ ಪಡೆದುಕೊಂಡು ಸದೃಢ ಸಮಾಜ ನಿರ್ಮಾಣದಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಕಾಲೇಜಿನ ಈಗಿನ ಫಲಿತಾಂಶ ಗಮನಿಸಿದರೆ ಬೇಸರವಾಗುತ್ತದೆ. ವಿದ್ಯಾರ್ಥಿಗಳು ಹೊರಗಡೆ ಓಡಾಡುತ್ತಿರುವುದನ್ನು ನೋಡಿದರೆ ಕಾಲೇಜು ನಡೆಯುತ್ತಿದಿಯೋ ಇಲ್ಲವೊ ಎನ್ನಿಸುತ್ತದೆ. ಪೋಷಕರು ಆಸೆಗಳನ್ನು ಹೊತ್ತು ಮಕ್ಕಳನ್ನು ಕಾಲೇಜಿಗೆ ಕಳುಹಿಸುತ್ತಾರೆ. ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಪ್ರಯೋಜನೆ ಕಲ್ಪಿಸಬೇಕು’ ಎಂದು ಹೇಳಿದರು.</p>.<p>ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ವಿ.ಪುರುಷೋತ್ತಮ್ ಮಾತನಾಡಿ, ‘ಸ್ವಾಮಿ ವಿವೇಕಾನಂದರು ಅಧ್ಯಾತ್ಮಿಕ ಚಿಂತನೆ ಮೂಲಕವೇ ಸಮಾಜವನ್ನು ಸರಿದಾರಿಯತ್ತ ಕೊಂಡೊಯುವ ಕೆಲಸ ಮಾಡಿದರು’ ಎಂದರು.</p>.<p>‘ದೇಶದಲ್ಲಿ ಶೇ.50ರಷ್ಟು ಭಾಗ ಯುವಕರಿದ್ದಾರೆ. ಮಾರ್ಗದರ್ಶನದ ಕೊರತೆಯಿಂದಾಗಿ ತಪ್ಪು ದಾರಿ ಹಿಡಿಯುತ್ತಿದ್ದರು. ವಿವೇಕಾನಂದರು ಎಚ್ಚರಿಸುವ ಮೂಲಕ ಬಲಿಷ್ಠ ಭಾರತ ಕಟ್ಟುವಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೆಪಿಸಿದರು’ ಎಂದರು.</p>.<p>‘ಪ್ರಪಂಚದಲ್ಲಿ ಭಾರತ ದೇಶ ತನ್ನದೆ ಅದ ಪ್ರತಿಷ್ಠಿತೆ ಪಡೆದುಕೊಂಡಿದೆ. ರಾಮಕೃಷ್ಣ ಪರಮಹಂಸರ ಮಾರ್ಗದರ್ಶನದಲ್ಲಿ ಬೆಳೆದ ವಿವೇಕಾನಂದ ಅವರು ಸಮಾಜವನ್ನು ಎಚ್ಚರಿಸುವ ಕೆಲಸ ಮಾಡುವುದರ ಜತೆಗೆ ದೇಶದ ಆದರ್ಶ ಪುರುಷರಾಗಿದ್ದರು’ ಎಂದಿ ಹೇಳಿದರು.</p>.<p>‘ಅಮೆರಿಕಾದ ಚಿಕಾಗೋದಲ್ಲಿ ನಡೆದ ಸರ್ವ ಧರ್ಮಗಳ ಸಭೆಯಲ್ಲಿ ಮಾಡಿದ ಭಾಷಣದಿಂದಲೇ ಯುವಕರ ಶಕ್ತಿಯಾಗಿದ್ದಾರೆ. ಹೇಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಘೋಷಣೆ ಯುವಕರ ಸ್ಪೂರ್ತಿಯಾಗಿದ್ದಾರೆ’ ಎಂದು ವಿವರಿಸಿದರು.</p>.<p>ಇದೇ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನಾ ನಗರದ ಗಾಂಧಿನ ಉದ್ಯಾನದಿಂದ ಕಾಲೇಜಿತನಕ ಯುವ ಜಾಗೃತಿ ಜಾಥಾ ನಡೆಯಿತು.</p>.<p>ಪ್ರಾಂಶುಪಾಲೆ ಪ್ರೊ.ಮಧುಲತಾ ಮೋಸಸ್, ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕಿ ದೇವಿಕಾ, ಕಾಲೇಜಿನ ಅಭಿವೃದ್ದಿ ಸಮಿತಿ ಸದಸ್ಯರಾದ ಅನಿತಾ, ಭರತ್, ನಗರಸಭಾ ಸದಸ್ಯ ರಾಕೇಶ್, ಸಹ ಪ್ರಾಧ್ಯಪಕರಾದ ಆರ್.ಶಂಕರಪ್ಪ, ಮಹಿಳಾ ಕಾಲೇಜಿನ ಪ್ರಾಂಶುಪಾಲೆ ವೃಂದಾದೇವಿ, ಎನ್.ಕೃಷ್ಣಪ್ಪ, ಮಾಲೂರು ಪ್ರಾಂಶುಪಾಲ ಕೇಶವರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಯುವಕರು ಶಿಕ್ಷಣ ಪಡೆದುಕೊಂಡಾಗ ಮಾತ್ರ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂಬುದನ್ನು ಸ್ವಾಮಿ ವಿವೇಕಾನಂದರ ಉದ್ದೇಶವಾಗಿದ್ದು, ಅದನ್ನು ಈಡೇರಿಸುವ ನಿಟ್ಟಿನಲ್ಲಿ ಯುವಕರು ಮುಂದಾಗಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಸಲಹೆ ನೀಡಿದರು.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 157ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ವಿದ್ಯಾರ್ಥಿಗಳು ವಿವೇಕಾನಂದರ ತತ್ವ ಆದರ್ಶಗಳನ್ನು ಮೈಗೂಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು’ ಎಂದರು.</p>.<p>‘ಹಿಂದೆ ರಾಮಕೃಷ್ಣ ಉಡುಪ ಪ್ರಾಂಶುಪಾಲರಾಗಿದ್ದಾಗ ಕಾಲೇಜು ಫಲಿತಾಂಶದಲ್ಲಿ ಪ್ರಥಮ ಸ್ಥಾನದಲ್ಲಿತ್ತು, ಬದಲಾದ ಪರಿಸ್ಥಿತಿಯಿಂದ ಫಲಿತಾಂಶ ಹಿಂದೆ ಉಳಿದಿದೆ. ಪ್ರಾಧ್ಯಪಕರು ಜವಾಬ್ದಾರಿ ಅರಿತು ಕೆಲಸ ಮಾಡಿ ಫಲಿತಾಂಶವನ್ನು ಉತ್ತಮಪಡಿಸಬೇಕು’ ಎಂದು ಸೂಚಿಸಿದರು.</p>.<p>‘ಇಲ್ಲಿನ ವ್ಯಾಸಂಗ ಮಾಡಿದವರು ರಾಜಕೀಯವಾಗಿ, ವಿವಿಧ ಕ್ಷೇತ್ರದಲ್ಲಿ ಉನ್ನತ ಸ್ಥಾನದಲ್ಲಿ ಅನೇಕ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸಾಧನೆಯನ್ನು ಸ್ಪೂರ್ತಿಯಾಗಿ ಪಡೆದುಕೊಂಡು ಸದೃಢ ಸಮಾಜ ನಿರ್ಮಾಣದಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಕಾಲೇಜಿನ ಈಗಿನ ಫಲಿತಾಂಶ ಗಮನಿಸಿದರೆ ಬೇಸರವಾಗುತ್ತದೆ. ವಿದ್ಯಾರ್ಥಿಗಳು ಹೊರಗಡೆ ಓಡಾಡುತ್ತಿರುವುದನ್ನು ನೋಡಿದರೆ ಕಾಲೇಜು ನಡೆಯುತ್ತಿದಿಯೋ ಇಲ್ಲವೊ ಎನ್ನಿಸುತ್ತದೆ. ಪೋಷಕರು ಆಸೆಗಳನ್ನು ಹೊತ್ತು ಮಕ್ಕಳನ್ನು ಕಾಲೇಜಿಗೆ ಕಳುಹಿಸುತ್ತಾರೆ. ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಪ್ರಯೋಜನೆ ಕಲ್ಪಿಸಬೇಕು’ ಎಂದು ಹೇಳಿದರು.</p>.<p>ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ವಿ.ಪುರುಷೋತ್ತಮ್ ಮಾತನಾಡಿ, ‘ಸ್ವಾಮಿ ವಿವೇಕಾನಂದರು ಅಧ್ಯಾತ್ಮಿಕ ಚಿಂತನೆ ಮೂಲಕವೇ ಸಮಾಜವನ್ನು ಸರಿದಾರಿಯತ್ತ ಕೊಂಡೊಯುವ ಕೆಲಸ ಮಾಡಿದರು’ ಎಂದರು.</p>.<p>‘ದೇಶದಲ್ಲಿ ಶೇ.50ರಷ್ಟು ಭಾಗ ಯುವಕರಿದ್ದಾರೆ. ಮಾರ್ಗದರ್ಶನದ ಕೊರತೆಯಿಂದಾಗಿ ತಪ್ಪು ದಾರಿ ಹಿಡಿಯುತ್ತಿದ್ದರು. ವಿವೇಕಾನಂದರು ಎಚ್ಚರಿಸುವ ಮೂಲಕ ಬಲಿಷ್ಠ ಭಾರತ ಕಟ್ಟುವಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೆಪಿಸಿದರು’ ಎಂದರು.</p>.<p>‘ಪ್ರಪಂಚದಲ್ಲಿ ಭಾರತ ದೇಶ ತನ್ನದೆ ಅದ ಪ್ರತಿಷ್ಠಿತೆ ಪಡೆದುಕೊಂಡಿದೆ. ರಾಮಕೃಷ್ಣ ಪರಮಹಂಸರ ಮಾರ್ಗದರ್ಶನದಲ್ಲಿ ಬೆಳೆದ ವಿವೇಕಾನಂದ ಅವರು ಸಮಾಜವನ್ನು ಎಚ್ಚರಿಸುವ ಕೆಲಸ ಮಾಡುವುದರ ಜತೆಗೆ ದೇಶದ ಆದರ್ಶ ಪುರುಷರಾಗಿದ್ದರು’ ಎಂದಿ ಹೇಳಿದರು.</p>.<p>‘ಅಮೆರಿಕಾದ ಚಿಕಾಗೋದಲ್ಲಿ ನಡೆದ ಸರ್ವ ಧರ್ಮಗಳ ಸಭೆಯಲ್ಲಿ ಮಾಡಿದ ಭಾಷಣದಿಂದಲೇ ಯುವಕರ ಶಕ್ತಿಯಾಗಿದ್ದಾರೆ. ಹೇಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಘೋಷಣೆ ಯುವಕರ ಸ್ಪೂರ್ತಿಯಾಗಿದ್ದಾರೆ’ ಎಂದು ವಿವರಿಸಿದರು.</p>.<p>ಇದೇ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನಾ ನಗರದ ಗಾಂಧಿನ ಉದ್ಯಾನದಿಂದ ಕಾಲೇಜಿತನಕ ಯುವ ಜಾಗೃತಿ ಜಾಥಾ ನಡೆಯಿತು.</p>.<p>ಪ್ರಾಂಶುಪಾಲೆ ಪ್ರೊ.ಮಧುಲತಾ ಮೋಸಸ್, ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕಿ ದೇವಿಕಾ, ಕಾಲೇಜಿನ ಅಭಿವೃದ್ದಿ ಸಮಿತಿ ಸದಸ್ಯರಾದ ಅನಿತಾ, ಭರತ್, ನಗರಸಭಾ ಸದಸ್ಯ ರಾಕೇಶ್, ಸಹ ಪ್ರಾಧ್ಯಪಕರಾದ ಆರ್.ಶಂಕರಪ್ಪ, ಮಹಿಳಾ ಕಾಲೇಜಿನ ಪ್ರಾಂಶುಪಾಲೆ ವೃಂದಾದೇವಿ, ಎನ್.ಕೃಷ್ಣಪ್ಪ, ಮಾಲೂರು ಪ್ರಾಂಶುಪಾಲ ಕೇಶವರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>