<p><strong>ಕೆಜಿಎಫ್:</strong> ಸಂವಿಧಾನ ಸಮರ್ಪಣೆ ದಿನದಂದು ಬಾಬಾ ಸಾಹೇಬರಿಗೆ ಸೂಕ್ತ ಗೌರವ ನೀಡಿಲ್ಲ. ಸಂವಿಧಾನ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಣೆ ಮಾಡಲಾಗಿದೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆ ಮುಖಂಡರು ತಾಲ್ಲೂಕು ಆಡಳಿತ ಸೌಧದ ಮುಂಭಾಗ ಬುಧವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.</p>.<p>ಶಾಸಕಿ ಎಂ.ರೂಪಕಲಾ ಅವರು ತಾಲ್ಲೂಕು ಆಡಳಿತ ಸೌಧದಲ್ಲಿ ನಡೆಸಿದ ಸಂವಿಧಾನ ಸಮರ್ಪಣಾ ದಿನದ ಕಾರ್ಯಕ್ರಮದಲ್ಲಿ ದಲಿತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನೆರೆಯ ತಾಲ್ಲೂಕುಗಳಲ್ಲಿ ಸಂವಿಧಾನ ಸಮರ್ಪಣೆ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ, ತಾಲ್ಲೂಕಿನಲ್ಲಿ ನಾಲ್ಕು ಗೋಡೆಗಳ ಮಧ್ಯೆ ಆಚರಣೆ ಮಾಡಲಾಗುತ್ತಿದೆ. ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಈ ನಿಟ್ಟಿನಲ್ಲಿ ಕರ್ತವ್ಯ ಲೋಪವೆಸಗಿದ್ದಾರೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿ, ಘೋಷಣೆ ಕೂಗಿದರು.</p>.<p>ಮುಖಂಡರಾದ ಶ್ರೀನಾಥ್, ಎಪಿಎಲ್ ರಂಗನಾಥ್, ಕೃಷ್ಣಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ಸಂವಿಧಾನ ಸಮರ್ಪಣೆ ದಿನದಂದು ಬಾಬಾ ಸಾಹೇಬರಿಗೆ ಸೂಕ್ತ ಗೌರವ ನೀಡಿಲ್ಲ. ಸಂವಿಧಾನ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಣೆ ಮಾಡಲಾಗಿದೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆ ಮುಖಂಡರು ತಾಲ್ಲೂಕು ಆಡಳಿತ ಸೌಧದ ಮುಂಭಾಗ ಬುಧವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.</p>.<p>ಶಾಸಕಿ ಎಂ.ರೂಪಕಲಾ ಅವರು ತಾಲ್ಲೂಕು ಆಡಳಿತ ಸೌಧದಲ್ಲಿ ನಡೆಸಿದ ಸಂವಿಧಾನ ಸಮರ್ಪಣಾ ದಿನದ ಕಾರ್ಯಕ್ರಮದಲ್ಲಿ ದಲಿತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನೆರೆಯ ತಾಲ್ಲೂಕುಗಳಲ್ಲಿ ಸಂವಿಧಾನ ಸಮರ್ಪಣೆ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ, ತಾಲ್ಲೂಕಿನಲ್ಲಿ ನಾಲ್ಕು ಗೋಡೆಗಳ ಮಧ್ಯೆ ಆಚರಣೆ ಮಾಡಲಾಗುತ್ತಿದೆ. ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಈ ನಿಟ್ಟಿನಲ್ಲಿ ಕರ್ತವ್ಯ ಲೋಪವೆಸಗಿದ್ದಾರೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿ, ಘೋಷಣೆ ಕೂಗಿದರು.</p>.<p>ಮುಖಂಡರಾದ ಶ್ರೀನಾಥ್, ಎಪಿಎಲ್ ರಂಗನಾಥ್, ಕೃಷ್ಣಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>