ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಮತ್ತು ಇಬ್ಬರು ಸಮರ್ಥ ವ್ಯಕ್ತಿಗಳ ಸಮಿತಿ ರಚನೆ ಮಾಡುವಂತೆ ಸೂಚಿಸಿದೆ. ದೇವಾಲಯದಲ್ಲಿ ಪೂಜಾ ಕಾರ್ಯಗಳು ಎಂದಿನಂತೆ ನಡೆಯಬೇಕು. ಪ್ರತಿ ತಿಂಗಳು 5ನೇ ತಾರೀಕಿನಂದು ಸಭೆ ನಡೆಸಿ, ನ್ಯಾಯಾಲಯಕ್ಕೆ ವರದಿ ನೀಡಬೇಕು. ದೇವಾಲಯದ ವಿಷಯದಲ್ಲಿ ಯಾರೂ ಮಧ್ಯಪ್ರವೇಶ ಮಾಡಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ ಎಂದು ವಕೀಲ ನಂಜುಂಡಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.